ತಂಗುದಾಣದಲ್ಲಿ ವಿಮಾನ ನಿಲ್ದಾಣದ ಅನುಭವ!

ಬೆಳಗ್ಗೆ 4.45ಕ್ಕೆ ಹೊರಟ ರೈಲು | ವಿಮಾನಗಳ ದಟ್ಟಣೆ ಅವಧಿಗೆ ಅನುಗುಣವಾಗಿ ವೇಳಾಪಟ್ಟಿ

Team Udayavani, Jan 5, 2021, 12:10 PM IST

ತಂಗುದಾಣದಲ್ಲಿ ವಿಮಾನ ನಿಲ್ದಾಣದ ಅನುಭವ!

ಬೆಂಗಳೂರು: ಹೆಸರಿಗೆ ಮಾತ್ರ ಅದು ರೈಲ್ವೆ ತಂಗುದಾಣ. ನೀವು ಒಳಹೊಕ್ಕರೆ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದ ಅನುಭವ! ಸಾಮಾನ್ಯವಾಗಿ ಹಾಲ್ಟ್  ಸ್ಟೇಷನ್‌ ಗಳೆಂದರೆ ಒಂದು ಟಿಕೆಟ್‌ ಕೌಂಟರ್‌, ನಿಲುಗಡೆಗೊಂದು ಪ್ಲಾಟ್‌ಫಾರಂ ಇರುತ್ತದೆ. ಪ್ರಮುಖ ರೈಲುನಿಲ್ದಾಣವಾಗಿದ್ದರೆ, ಈ ಸೌಲಭ್ಯಗಳು ತುಸು ಹೆಚ್ಚಿರುತ್ತವೆ. ಆದರೆ, ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ಹಾಲ್ಟ್ ಸ್ಟೇಷನ್‌ ನಿಮ್ಮ ಈ ಎಲ್ಲ ಕಲ್ಪನೆಗಳನ್ನು ತಲೆಕೆಳಗೆ ಮಾಡುತ್ತದೆ.

ಹೌದು, ಈ ನೂತನ ಹಾಲ್ಟ್ ಸ್ಟೇಷನ್‌ನಲ್ಲಿ ವಿಮಾನಗಳ ಹಾರಾಟದ ಬಗ್ಗೆ ನೇರಪ್ರಸಾರಫ‌ಲಕಗಳಲ್ಲಿ ನೇರ ಪ್ರಸಾರ ಆಗುತ್ತದೆ. ಹೈಟೆಕ್‌ಕೌಂಟರ್‌ಗಳು, ಸೆನ್ಸರ್‌ ಆಧಾರಿತ ವಾಷ್‌ರೂಂಗಳು, ಕಾಫಿ ಶಾಪ್‌, ರೈಲ್ವೆ ವೇಳಾಪಟ್ಟಿ, ಶೆಟಲ್‌ ಸೇವೆಗಳು, ಹೊರಾಂಗಣದಲ್ಲಿ ಸಂಸ್ಕೃತಿಯನ್ನು ಬಿಂಬಿಸುವ ಕಲಾಕೃತಿ (ಇದನ್ನು ಮಾವಿನ ಕ್ರೇಟ್‌ ಹಾಗೂ ನಿರುಪಯುಕ್ತವಸ್ತುಗಳಿಂದ ರೂಪಿಸಲಾಗಿದೆ!) ಹಾಗೂ  ಆಕರ್ಷಕ ಲ್ಯಾಂಡ್‌ಸ್ಕೇಪ್‌, ಆಸನಗಳ ವ್ಯವಸ್ಥೆಕಲ್ಪಿಸಲಾಗಿದೆ. ಇದೆಲ್ಲದರಿಂದಾಗಿ ಪ್ರಯಾಣಿಕರಿಗೆ ಇದು ಅಕ್ಷರಶಃ ಹತ್ತಿರದಲ್ಲೇ ಇರುವ ಏರ್‌ ಪೋರ್ಟ್‌ ಲಾಂಜ್‌ನ ಅನುಭವ ನೀಡುತ್ತದೆ.

ಆಶ್ಚರ್ಯಗೊಂಡ ಪ್ರಯಾಣಿಕರು: ಸೋಮವಾರ ಬೆಳಗ್ಗೆ 4.45ಕ್ಕೆ ಸರಿಯಾಗಿ ಡೆಮು ರೈಲು ಮೆಜೆಸ್ಟಿಕ್‌ನ ಕೆಎಸ್‌ಆರ್‌ ರೈಲು ನಿಲ್ದಾಣದಿಂದ ಹೊರಟಿತು. ಮೊದಲ ದಿನ ಹಾಗೂ ಮೊದಲ ರೈಲು ಮತ್ತು ಬೆಳಗಿನಜಾವ ಆಗಿದ್ದರಿಂದ 12 ಜನ ಮಾತ್ರ ಪ್ರಯಾಣಿಕರಿದ್ದರು. ಅವರೊಂದಿಗೆ ಸಂಸದ ಪಿ.ಸಿ.ಮೋಹನ್‌, ಬೆಂಗಳೂರು ರೈಲ್ವೆವಿಭಾಗೀಯ ವ್ಯವಸ್ಥಾಪಕ ಎ.ಕೆ.ವರ್ಮ, ರೈಲ್ವೆ ಅಧಿಕಾರಿಗಳು ಇದಕ್ಕೆ ಸಾಕ್ಷಿಯಾದರು. 6.02ಕ್ಕೆ ರೈಲು ಹಾಲ್ಟ್ ಸ್ಟೇಷನ್‌ ಗೆ ಬರುತ್ತಿದ್ದಂತೆ, ಪ್ರಯಾ ಣಿಕರೆಲ್ಲರೂ ಕರತಾಡನದೊಂದಿಗೆ ಸಂತಸ ವ್ಯಕ್ತಪಡಿಸಿದರು.

ಅವಶ್ಯಕತೆಗನುಗುಣವಾಗಿ ರೈಲು ಸೇವೆ: ವಿಮಾನಗಳ ದಟ್ಟಣೆ ಅವಧಿಗೆ ಅನುಗುಣವಾಗಿ ಈ ರೈಲುಗಳ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಸದ್ಯ ನಿತ್ಯ ಐದು ರೈಲುಗಳು ಸಂಚರಿಸಲಿವೆ. ವಿಮಾನಗಳು ಹೆಚ್ಚು ಸಂಚರಿಸುವ ವೇಳೆ ರೈಲುಗಳು ಕಾರ್ಯಾಚರಣೆ ಕೂಡ ಹೆಚ್ಚಲಿದೆ. ಕೆಎಸ್‌ಆರ್‌ ರೈಲು ನಿಲ್ದಾಣದಿಂದ ಪ್ರಯಾಣದರ 10 ರೂ. ಇದ್ದು, ಕೆಎಸ್‌ಆರ್‌ನಿಂದ ಕಂಟೋನ್ಮೆಂಟ್‌ ಮೂಲಕ  ಹಾದು ಹೋಗುವ ರೈಲಿನ ಪ್ರಯಾಣ ದರ 15 ರೂ. ಆಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹಾಫ್ ಟೀ ದರದಲ್ಲಿ ರೈಲು ಸೇವೆ!: ಈ ವೇಳೆ ಸಂಸದ ಪಿ.ಸಿ.ಮೋಹನ್‌ ಮಾತನಾಡಿ, “20 ರೂ.ಗೆ ಟೀ ಅಥವಾ ಕಾಫಿ ಕೂಡ ಸಿಗುವುದಿಲ್ಲ. ಅಂತಹದ್ದರಲ್ಲಿ ಅದರರ್ಧ ದರದಲ್ಲಿ ಅಂದರೆ 10ರೂ.ಗಳಲ್ಲಿ ರೈಲು ನಮ್ಮನ್ನು ನಗರದಿಂದ ವಿಮಾನನಿಲ್ದಾಣಕ್ಕೆ ಕರೆದೊಯ್ಯುತ್ತದೆ ಎನ್ನುವುದೇ ಖುಷಿಯ ಸುದ್ದಿ. ಇದನ್ನು ಸಾಧ್ಯವಾದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಜನ ಸದುಪಯೋಗ ಪಡಿಸಿಕೊಳ್ಳಬೇಕು. ನಿಲ್ದಾಣದಲ್ಲಿ ಎಲ್ಲ ರೀತಿಯಹೈಟೆಕ್‌ ಸೌಲಭ್ಯಗಳಿದ್ದು, ಇದಕ್ಕೆ ಕಾರಣವಾದ ರೈಲ್ವೆ ಮತ್ತು ಬಿಐಎಲ್‌ ಕಾರ್ಯ ನಿಜಕ್ಕೂ ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರೈಲು ನಿಲ್ದಾಣ ಪ್ರಯಾಣಿಕರ ಸೇವೆಗೆ ಮುಕ್ತವಾಗಿದೆ. ಇದರಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಲಿದ್ದು, ಜನ ದಟ್ಟಣೆಯನ್ನು ಪರಿಣಾಮಕಾರಿಯಾಗಿ ತಗ್ಗಿಸುವಲ್ಲಿ ಸಹಕಾರಿಯಾಗಲಿದೆ. ಪಿಯೂಶ್‌ ಗೋಯಲ್, ರೈಲ್ವೆ ಸಚಿವ

2008ರಿಂದ ಉಪನಗರ ರೈಲು ಯೋಜನೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಸತತವಾಗಿ ಆಗ್ರಹಿಸುತ್ತಾ ಬಂದವರಲ್ಲಿ ರಾಜ್ಯಸಭೆ ಮಾಜಿ ಸದಸ್ಯ ಪ್ರೊ.ರಾಜೀವ್‌ಗೌಡ ಮುಂಚೂಣಿಯಲ್ಲಿದ್ದಾರೆ. ಈಗ ಆ ಹೋರಾಟಕ್ಕೆ ಫ‌ಲ ಸಿಕ್ಕಂತಾಗಿದೆ. ರಾಜೀವ್‌ಗೌಡ ಸೇರಿದಂತೆ ಪಕ್ಷದ ಹಲವು ನಾಯಕರು ಪ್ರಯಾಣಿಸಿದರು. ಕಾಂಗ್ರೆಸ್‌ ಟ್ವೀಟ್‌

ಸಿಬ್ಬಂದಿ ನಿತ್ಯ ಬಂದು-ಹೋಗಲು ಸಾಕಷ್ಟು ಕಿರಿಕಿರಿ ಆಗುತ್ತಿತ್ತು. ಹಾಲ್ಟ್ ಸ್ಟೇಷನ್‌ ಮಾಡಿರುವುದರಿಂದ ಸಕಾಲಕ್ಕೆ ಕೆಲಸಕ್ಕೆ ಬರಲು ಸಾಧ್ಯವಾಗುತ್ತದೆ. ಜತೆಗೆ ಸಮಯ ಉಳಿತಾಯ ಆಗುವುದರಿಂದ ಕುಟುಂಬದ ಸದಸ್ಯರೊಂದಿಗೆ ಆ ಸಮಯವನ್ನು ಕಳೆಯಬಹುದಾಗಿದೆ. ಡಯಾನ, ಏರ್‌ಪೋರ್ಟ್‌ ಸಿಬ್ಬಂದಿ.

ಮೆಜೆಸ್ಟಿಕ್‌ನಿಂದ ವಿಮಾನ ನಿಲ್ದಾಣಕ್ಕೆ ರೈಲು ಸೇವೆ ಮಾಡಿರುವುದು ಸಾಕಷ್ಟು ಅನುಕೂಲವಾಗಿದೆ. ಇದರಿಂದ ಒಂದು ಗಂಟೆಯಲ್ಲಿ ವಿಮಾನ ನಿಲ್ದಾಣ ತಲುಪಬಹುದು. ಯಾವುದೇ ಟ್ರಾಫಿಕ್‌ ಸಮಸ್ಯೆ ಇರುವುದಿಲ್ಲ. ಮೊದಲ ದಿನವೇ ಪ್ರಯಾಣ ಮಾಡುತ್ತಿರುವುದು ಸಂತಸವಾಗಿದೆ ಪ್ರಿಯಾಂಕ, ಪ್ರಯಾಣಿಕರು

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.