ಸೆನ್‌, ಸೈಬರ್‌ ಪೊಲೀಸರಿಗೆ ಸಿಐಡಿಯಿಂದ ತರಬೇತಿ

ಸೈಬರ್‌ ಅಪರಾಧಗಳ ಶೀಘ್ರ ಪತ್ತೆಗೆ ತರಬೇತಿ ಸಹಕಾರಿ

Team Udayavani, Mar 21, 2022, 10:22 AM IST

1

ಬೆಂಗಳೂರು: ನಗರದಲ್ಲಿ ಸೈಬರ್‌ ವಂಚನೆ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಲೇ ಇದೆ. ಆದರೆ, ಪತ್ತೆ ಕಾರ್ಯ ಮಾತ್ರ ನಿರೀಕ್ಷಿತ ಮಟ್ಟ ತಲುಪುತ್ತಿಲ್ಲ. ಕಾರಣ ಸೈಬರ್‌ ಪೊಲೀಸರಲ್ಲಿನ ಸೈಬರ್‌ ನೈಪುಣ್ಯತೆ ಕೊರತೆ ಅಥವಾ ತಾಂತ್ರಿಕ ಸಮಸ್ಯೆ. ಈ ಹಿನ್ನೆಲೆಯಲ್ಲಿ ನಗರದ ಎಂಟು ಸೈಬರ್‌, ಎಕಾನಾಮಿಕ್ಸ್‌, ನಾರ್ಕೋಟಿಕ್ಸ್‌ (ಸಿಇಎನ್‌) ಠಾಣೆ ಮತ್ತು ಸೈಬರ್‌ ಕ್ರೈಂ ಠಾಣೆಯ ಅಧಿಕಾರಿ-ಸಿಬ್ಬಂದಿಗೆ “ಸೈಬರ್‌ ಕ್ರೈಂ ತರಬೇತಿ’ ಆರಂಭಿಸಲಾಗಿದೆ.

ಸಿಐಡಿಯಲ್ಲಿ ಸೈಬರ್‌ ಅಪರಾಧಗಳ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರ(ಸಿಸಿಐಟಿಆರ್‌) ದಲ್ಲಿ ಕಾನ್‌ಸ್ಟೇಬಲ್‌ನಿಂದ ಇನ್‌ಸ್ಪೆಕ್ಟರ್‌ ವರೆಗಿನ ಎಲ್ಲ ಹಂತದ ಅಧಿಕಾರಿ-ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ಡೇಟಾ ಸೆಕ್ಯೂರಿಟಿ ಕೌನ್ಸಿಲ್‌ ಆಫ್ ಇಂಡಿಯಾ (ಡಿಎಸ್‌ಸಿಐ) ಸದಸ್ಯರು ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳು ತರಬೇತಿ ನೀಡುತ್ತಿದ್ದಾರೆ.

30 ಮಂದಿ ತಂಡ ಪ್ರತಿ ವಾರ ತರಬೇತಿ ಪಡೆಯುತ್ತಿದ್ದು, ಈಗಾಗಲೇ ಮೂರು ಬ್ಯಾಚ್‌ ಮುಕ್ತಾಯಗೊಂಡಿದೆ. ಪ್ರತಿ ವಾರ 1 ಅಥವಾ ಎರಡು ವಂಚನೆ ಮಾದರಿಯನ್ನು ವಿಷಯವನ್ನಾಗಿಸಿಕೊಂಡು ತರಬೇತಿ ನೀಡಲಾಗುತ್ತದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿರುತ್ತದೆ. ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, ಸಿಸಿಬಿ ಜಂಟಿ ಆಯುಕ್ತ ರಮಣಗುಪ್ತ ಸೂಚನೆ ಮೇರೆಗೆ ನಗರದಲ್ಲಿರುವ 8 ಸೆನ್‌ ಮತ್ತು 1 ಸೈಬರ್‌ ಠಾಣೆಯ ಸಿಬ್ಬಂದಿ ತರಬೇತಿ ಪಡೆಯುತ್ತಿದ್ದಾರೆ ಎಂದು ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದರು.

ಏನೆಲ್ಲ ತರಬೇತಿ ? ಸೈಬರ್‌ ಕ್ರೈಂ ದೂರು ಸ್ವೀಕರಿಸುವಾಗಲೇ ಕೆಲವೊಂದು ನಿರ್ದಿಷ್ಟ ಮಾಹಿತಿ ಸಂಗ್ರಹಿಸಿಕೊಂಡರೆ ಪ್ರಕರಣ ಪತ್ತೆ ಕಾರ್ಯ ಸುಲಭ. ಹೀಗಾಗಿ ಪ್ರಕರಣ ದಾಖಲಿಸಿಕೊಳ್ಳುವುದು ಹೇಗೆ? ಅಗತ್ಯ ಕಂಪ್ಯೂಟರ್‌, ಮೊಬೈಲ್‌ ಹೇಗೆ ಜಪ್ತಿ ಮಾಡಬೇಕು. ನಂತರ ಅವುಗಳ ವಿಶ್ಲೇಷಣೆ ಹೇಗೆ? ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಹೇಗೆ ಕಳುಹಿಸಬೇಕು? ಯಾವ ರೀತಿ ಪ್ರಶ್ನೆ ಕೇಳಬೇಕು? 5 ದಿನಗಳ ಕಾಲ ವಿಷಯಾಧಾರಿತ ತರಬೇತಿ ನೀಡಲಾಗುತ್ತದೆ. 6ನೇ ದಿನ ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಲಾಗುತ್ತದೆ. ಅದರಿಂದ ತರಬೇತಿ ಪಡೆದ ಸಿಬ್ಬಂದಿಯಲ್ಲೂ ಆತ್ಮವಿಶ್ವಾಸ ಮೂಡುತ್ತದೆ. ಜತೆಗೆ ಇತ್ತೀಚೆಗೆ ಹೆಚ್ಚುತ್ತಿರುವ ಬ್ಯಾಂಕಿಂಗ್‌ ವಂಚನೆ, ಒಟಿಪಿ, ವಿತ್‌ ಔಟ್‌ ಓಟಿಪಿ ವಂಚನೆ, ಕ್ರೆಡಿಟ್‌ ಕಾರ್ಡ್‌, ಮ್ಯಾಟ್ರಿ ಮೋನಿಯಲ್‌, ಆ್ಯಪ್‌ ಮೂಲಕ ವಂಚನೆ, ಫೇಸ್‌ಬುಕ್‌, ಟ್ವಿಟರ್‌, ಇನ್‌ಸ್ಟ್ರಾಗ್ರಾಂ ಮೂಲಕ ವಂಚನೆಯಾದರೆ ಹೇಗೆ ಪತ್ತೆ ಹಚ್ಚಬೇಕು. ಹೀಗೆ ಎಲ್ಲ ಮಾದರಿಯ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ ಎಂದು ಸಿಸಿಬಿಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಯಾರೆಲ್ಲ ತರಬೇತಿ ಕೊಡುತ್ತಾರೆ ? ಹೆಚ್ಚುವರಿ ಪೊಲೀಸ್‌ ಆಯುಕ್ತರಾದ ಸುಬ್ರಹ್ಮೇಶ್ವರ್‌  ರಾವ್‌ (ಅಡ್ವಾನ್ಸ್‌ ಬ್ಯಾಂಕಿಂಗ್‌ ವಂಚನೆ), ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ರಮಣ ಗುಪ್ತ (ಮನಿ ಲಾಡ್ರಿಂಗ್‌), ಸಿಐಡಿ ಸೈಬರ್‌ ಡಿವೈಎಸ್ಪಿಗಳಾದ, ಶರತ್‌, ಯಶವಂತ್‌ (ತನಿಖಾ ಹಂತ, ಒಟಿಪಿ, ನಾನ್‌ ಒಟಿಪಿ ವಂಚನೆ ಹಾಗೂ ಇತರೆ) ಡೇಟಾ ಸೆಕ್ಯೂರಿಟಿ ಕೌನ್ಸಿಲ್‌ ಆಫ್ ಇಂಡಿಯಾ ನಿರ್ದೇಶಕ ವೆಂಕಟೇಶ್‌ ಮೂರ್ತಿ (ಕಂಪ್ಯೂಟರ್‌, ಮೊಬೈಲ್‌, ಎಲೆಕ್ಟ್ರಾ ನಿಕ್‌ ವಸ್ತುಗಳ ಜಪ್ತಿ) ಕುರಿತು ತರಬೇತಿ ನೀಡುತ್ತಾರೆ. ಉತ್ತಮ ಬೆಳವಣಿಗೆ ಸೈಬರ್‌ ಕ್ರೈಂ ವಂಚನೆ ಬಗ್ಗೆ ಪೊಲೀಸರಿಗೆ ತರಬೇತಿ ಕೊಡುತ್ತಿರುವುದು ಉತ್ತಮ ಬೆಳವಣಿಗೆ. ಕೆಲವೊಂದು ಕ್ಸಿಷ್ಟಕರ ಪ್ರಕರಣಗಳನ್ನು ಬೇಧಿಸಲು ಇದು ಸಹಾಯವಾಗುತ್ತದೆ. ಈಗಾಗಲೇ ಎರಡು ಬಾರಿ ತರಬೇತಿ ಪಡೆದುಕೊಂಡಿದ್ದೇನೆ. ಅದರಿಂದ ಕೆಲ ಕಠಿಣ ಪ್ರಕರಣಗಳನ್ನು ಬೇಧಿಸಿದ್ದೇನೆ ಎಂದು ಸೆನ್‌ ಠಾಣೆ ಸಿಬ್ಬಂದಿಯೊಬ್ಬರು ಸಂತಸ ವ್ಯಕ್ತಪಡಿಸಿದರು.

  • ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.