ನಿಯಮ ಮೀರಿ ವರ್ಗಾವಣೆ: ಸರಿಪಡಿಸಲು ಸಿಎಸ್ ನಿರ್ದೇಶನ
Team Udayavani, Aug 4, 2018, 6:45 AM IST
ಬೆಂಗಳೂರು: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ವೇಳೆ ಒಟ್ಟು ವೃಂದ ಬಲದ ಶೇ. 4ರಷ್ಟು ಮಂದಿಯನ್ನು ಮಾತ್ರ ವರ್ಗಾವಣೆ ಮಾಡಬೇಕು ಎಂದು ಸೂಚಿಸಿದ್ದರೂ ಕೆಲವು ಇಲಾಖೆಗಳಲ್ಲಿ ಅದಕ್ಕೆ ಮೀರಿ ವರ್ಗಾವಣೆ ಮಾಡಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಈ ಕುರಿತಂತೆ ಸುತ್ತೋಲೆ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ನಿಗದಿಗಿಂತ ಹೆಚ್ಚು ನೌಕರರನ್ನು ವರ್ಗಾವಣೆ ಮಾಡಿರುವ ಇಲಾಖೆಗಳು ಅದನ್ನು ಪರಿಷ್ಕರಿಸಿ ಶೇ. 4ಕ್ಕೆ ಮಿತಿಗೊಳಿಸಿ ಆದೇಶಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಎಲ್ಲಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
2018-19ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಕುರಿತಂತೆ ಜೂ. 26ರಂದು ಆದೇಶ ಹೊರಡಿಸಿ ಜುಲೈ 31ರೊಳಗೆ ಮುಕ್ತಾಯಗೊಳಿಸುವಂತೆ ತಿಳಿಸಲಾಗಿತ್ತು. ಆದರೆ, ಈ ಮಧ್ಯೆ ಅವಧಿ ವಿಸ್ತರಣೆ ಬೇಡಿಕೆ ಬಂದಿದ್ದರಿಂದ ವರ್ಗಾವಣೆ ಅವಧಿಯನ್ನು ಆ. 8ರವರೆಗೆ ವಿಸ್ತರಿಸಲಾಗಿದೆ. ವರ್ಗಾವಣೆ ಆದೇಶ ಹೊರಡಿಸುವ ಸಂದರ್ಭದಲ್ಲಿ 2013ರ ಮಾರ್ಗಸೂಚಿಯಂತೆ ಒಟ್ಟಾರೆ ವೃಂದ ಬಲದ ಶೇ. 4ರಷ್ಟನ್ನು ಮೀರದಂತೆ ನೌಕರರನ್ನು ವರ್ಗಾವಣೆ ಮಾಡಬೇಕು ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿತ್ತು.
ಆದರೂ ಕೆಲವು ಇಲಾಖೆಗಳು ಒಟ್ಟು ವೃಂದ ಬಲದ ಶೇ. 5ರಿಂದ ಶೇ. 6ರಷ್ಟು ನೌಕರರನ್ನು ವರ್ಗಾವಣೆ ಮಾಡಿದೆ. ಇದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದು, ಅದರಂತೆ ಶೇ. 4ಕ್ಕಿಂತ ಹೆಚ್ಚಿನ ನೌಕರರನ್ನು ವರ್ಗಾವಣೆ ಮಾಡಿರುವ ಇಲಾಖೆಗಳು ಆ. 8ರೊಳಗೆ ವರ್ಗಾವಣೆ ಪಟ್ಟಿಯನ್ನು ಪರಿಷ್ಕರಿಸಿ ಒಟ್ಟಾರೆ ಮಿತಿಯನ್ನು ಶೇ. 4ಕ್ಕೆ ಇಳಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ