ಬಿಬಿಎಂಪಿ ನೂತನ ಆಯುಕ್ತರಾಗಿ ಗೌರವ್ ಗುಪ್ತಾ ನೇಮಕ
Team Udayavani, Mar 31, 2021, 6:55 PM IST
ಬೆಂಗಳೂರು: ಒಟ್ಟು 22 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಇದನ್ನೂ ಓದಿ:ಸಿಎಂ ಯಡಿಯೂರಪ್ಪ ವಿರುದ್ಧ ಹೈಕಮಾಂಡ್ ಗೆ ದೂರು ನೀಡಿದ ಈಶ್ವರಪ್ಪ
ಬಿಬಿಎಂಪಿ ನೂತನ ಆಯುಕ್ತರಾಗಿ ಗೌರವ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ.ಅದೇ ರೀತಿ ಬಿಬಿಎಂಪಿ ಆಡಳಿತ ಅಧಿಕಾರಿಯಾಗಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಲಾಗಿದ್ದು, ಮಂಜುನಾಥ ಪ್ರಸಾದ್ ಅವರನ್ನು ಕಂದಾಯ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.ನೂತನ ಆಯುಕ್ತ ಗೌರವ್ ಗುಪ್ತಾ ಅವರಿಗೆ ಹೆಚ್ಚುವರಿ ಹೊಣೆಯಾಗಿ ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ಇಲಾಖೆ ಹೊಣೆ ನೀಡಲಾಗಿದೆ.