ಮಾರ್ಗಸೂಚಿಗೆ ಮಣ್ಣೆರಚಿ ಪೊಲೀಸರ ವರ್ಗಾವಣೆ

ನಂಬಿಕಸ್ಥರ ಉಳಿಸಿಕೊಳ್ಳಲು ಜನಪ್ರತಿನಿಧಿಗಳಿಂದ "ವರ್ಗಾಸ್ತ್ರ' ಬಳಕ

Team Udayavani, Apr 5, 2019, 12:28 PM IST

police
ಬೆಂಗಳೂರು : ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದು ಕೇಂದ್ರ ಚುನಾವಣಾ ಆಯೋಗದ ವರ್ಗಾವಣೆ ಮಾರ್ಗಸೂಚಿಗಳು ಅನ್ವಯ ಆಗುವ ಮೊದಲೇ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ದೊಡ್ಡ ಮಟ್ಟದ ವರ್ಗಾವಣೆ ನಡೆದಿದ್ದು, ಇದರಲ್ಲಿ “ಆಯಕಟ್ಟಿನ ಜಾಗ’ ಹುಡುಕಿಕೊಂಡಿರುವ ವಾಸನೆ ಬಡಿಯುತ್ತಿದೆ. ಮತ್ತೂಂದೆಡೆ ಈ ವರ್ಗಾವಣೆ ಹಿಂದೆ ಚುನಾಯಿತ ಜನಪ್ರತಿನಿಧಿಗಳ “ಸ್ವಹಿತಾಸಕ್ತಿ’ಯೂ ಇದೆ ಎಂಬ ಬಲವಾದ ಅನುಮಾನ ಕೂಡ ವ್ಯಕ್ತವಾಗಿದೆ. ಅಷ್ಟೇ ಅಲ್ಲದೆ, ಇದೊಂದು ಪೂರ್ವ ನಿಯೋಜಿತ “ತಂತ್ರಗಾರಿಕೆ’ ಎಂದೂ ಹೇಳಲಾಗಿದೆ.
ಪೊಲೀಸ್‌ ಇಲಾಖೆ ಅಥವಾ ಸರ್ಕಾರದ ಪ್ರಕಾರ, ಐಜಿಪಿ ಹಂತದಿಂದ ಕಾನ್‌ಸ್ಟೆಬಲ್‌ವರೆಗಿನ ಎಲ್ಲ ಹಂತದ ಅಧಿಕಾರಿಗಳು ಕನಿಷ್ಠ ಒಂದರಿಂದ ಎರಡು ವರ್ಷಗಳ ಕಾಲ ಒಂದೇ ಕಡೆ ಕರ್ತವ್ಯನಿರ್ವಹಿಸಬೇಕು. ನಂತರ ಮೂರು ವರ್ಷದೊಳಗೆ ಬೇರೆಡೆ ವರ್ಗಾವಣೆ ಮಾಡಬಹುದು. ಇನ್ನು ಪಾರದರ್ಶಕ ಚುನಾವಣೆ ನಡೆಸಲು ಐಜಿಪಿ, ಎಸ್ಪಿ, ಡಿವೈಎಸ್ಪಿ, ಇನ್‌ಸ್ಪೆಕ್ಟರ್‌, ಸಬ್‌ಇನ್‌ಸ್ಪೆಕ್ಟರ್‌ ಹಾಗೂ ಕಾನ್‌ಸ್ಟೆಬಲ್‌ವರೆಗಿನ ಅಧಿಕಾರಿಗಳು, ಒಂದೇ ಸ್ಥಳದಲ್ಲಿ ಮೂರು ವರ್ಷ ಸೇವೆ ಸಲ್ಲಿಸಿದ್ದರೆ ಅಥವಾ ಸ್ವಂತ ಜಿಲ್ಲೆಯಲ್ಲಿ ಅಥವಾ ಈ ಹಿಂದಿನ ಚುನಾವಣೆ ಸಮಯದಲ್ಲಿ ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿದ್ದರೆ, ಅಂತಹ ಅಧಿಕಾರಿಗಳನ್ನು ಬೇರೆಡೆ ವರ್ಗಾವಣೆ ಮಾಡಬೇಕು ಎಂಬುದು ಚುನಾವಣಾ ಆಯೋಗದ ನಿಯಮ.
ಇದನ್ನೇ “ಅಸ್ತ್ರ’ವನ್ನಾಗಿ ಬಳಸಿಕೊಳ್ಳುವ ಜನಪ್ರತಿನಿಧಿಗಳು, ಚುನಾವಣಾ ಪೂರ್ವದಲ್ಲಿಯೇ ತಮ್ಮೊಡನೆ ವಿಶ್ವಾಸ ಹೊಂದಿರುವ ಅಧಿಕಾರಿಗಳನ್ನು ತಮ್ಮ ಕ್ಷೇತ್ರ ವ್ಯಾಪ್ತಿಯ ಆಯಕಟ್ಟಿನ ಸ್ಥಳಗಳಿಗೆ ನಿಯೋಜಿಸಿಕೊಳ್ಳುತ್ತಾರೆ. ಚುನಾವಣೆ ಸಂದರ್ಭದಲ್ಲೂ ತಮ್ಮ ಪರ ಕೆಲಸ ಮಾಡಿಸಿಕೊಳ್ಳುವ ಪರಿಪಾಠ ಮುಂದುವರಿಸುತ್ತಾರೆ. ಈ ಮೂಲಕ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ನೆಪದಲ್ಲಿ ಚುನಾವಣಾ ಆಯೋಗದ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.
ಪೊಲೀಸ್‌ ಇಲಾಖೆಯಲ್ಲಿ ಚುನಾವಣಾ ಪೂರ್ವ ಅಥವಾ ನಂತರದಲ್ಲಿ ನಡೆಯುವ ಬಹುತೇಕ ವರ್ಗಾವಣೆಗಳೂ ಸ್ಥಳೀಯ ಜನಪ್ರತಿನಿಧಿಗಳ ಸ್ವಹಿತಾಸಕ್ತಿಯಿಂದ ಕೂಡಿರುತ್ತದೆ. ಇದಕ್ಕೆ ಅಚ್ಚರಿ ಪಡುವ ಅಗತ್ಯವಿಲ್ಲ. ಅಲ್ಲದೆ, ವರ್ಗಾವಣೆ ಒಂದು ದೊಡ್ಡ ದಂಧೆ. ಇದರಿಂದ ಇಡೀ ಆಡಳಿತ ವ್ಯವಸ್ಥೆಯೇ ಹಾಳುಗುತ್ತಿದೆ. ಇದು ಎಲ್ಲ ಇಲಾಖೆಯಲ್ಲೂ ಹಣ ಮಾಡುವ ದಂಧೆಯಾಗಿ ಮಾರ್ಪಟ್ಟಿದೆ. ತಮ್ಮೊಡನೆ ವಿಶ್ವಾಸದಿಂದ ಇರುವ ಪೊಲೀಸ್‌ ಅಧಿಕಾರಿ ಬೇರೆಡೆ ವರ್ಗಾವಣೆ ಆಗಲು ಸ್ಥಳೀಯ ಜನಪ್ರತಿನಿಧಿ ಎಂದಿಗೂ ಅವಕಾಶ ಕೊಡುವುದಿಲ್ಲ. ಪ್ರಮುಖವಾಗಿ ಚುನಾವಣೆ ಸಂದರ್ಭದಲ್ಲಿ ಅದು ಸಾಧ್ಯವೇ ಇಲ್ಲ ಎಂದು ನಿವೃತ್ತ ಪೊಲೀಸ್‌ ಮಹಾನಿರ್ದೇಶಕರೊಬ್ಬರು ಅಭಿಪ್ರಾಯಪಡುತ್ತಾರೆ.
ಫೆಬ್ರವರಿವರೆಗಿನ ವರ್ಗಾವಣೆಗಳು ಡಿಸೆಂಬರ್‌ 2018ರಿಂದ 2019 ಫೆಬ್ರವರಿ ಅಂತ್ಯದವರೆಗೆ ಅಂದಾಜು (ಚುನಾವಣೆ ಪೂರ್ವ) 45 ಮಂದಿ ಐಪಿಎಸ್‌, ಐದು ಮಂದಿ ಎಸ್ಪಿ (ನಾನ್‌ ಐಪಿಎಸ್‌), 44 ಡಿವೈಎಸ್ಪಿ, 439 ಇನ್‌ಸ್ಪೆಕ್ಟರ್‌, ಆರು ಪಿಎಸ್‌ಐ ಹಂತದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
 ● ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.