ಸಂಕಷ್ಟದಲ್ಲಿ ಮಂಗಳಮುಖೀಯರು


Team Udayavani, Apr 26, 2020, 10:51 AM IST

bng-tdy-5

ಬೆಂಗಳೂರು: ದೀರ್ಘ‌ಕಾಲದ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಮಂಗಳಮುಖೀಯರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ದಿನದ ಊಟದ ಚಿಂತೆಯ ಜತೆಗೆ ಮನೆ ಬಾಡಿಗೆ ನೀಡಲಾಗದಂತಹ ಪರಿಸ್ಥಿತಿ ಉಂಟಾಗಿದೆ.

ಬೆಂಗಳೂರಿನಲ್ಲಿ ಸುಮಾರು ಆರು ಸಾವಿರ ಮಂಗಳ ಮುಖೀಯರಿದ್ದಾರೆ. ಅವರೆಲ್ಲರೂ ಸಿಗ್ನಲ್‌ ಗಳಲ್ಲಿ ಬಿಕ್ಷಾಟನೆಸೇರಿದಂತೆ ಇನ್ನಿತರ ಕಾಯಕದಲ್ಲಿ ತೊಡಗಿದ್ದವರು. ಈ ವೃತ್ತಿಯಿಂದ ದಿನಕ್ಕೆ 300-  400 ರೂ. ಸಂಪಾದಿಸುತ್ತಿದ್ದರು. ಲಾಕ್‌ ಡೌನ್‌ ನಿಂದಾಗಿ ಆದಾಯವಿಲ್ಲವಾಗಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಅವಲತ್ತುಕೊಂಡಿದ್ದಾರೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ಬಾಡಿಗೆ ಕಟ್ಟಲು ಆಗುತ್ತಿಲ್ಲ. ಸರ್ಕಾರ ನೀಡಿದ ಆಹಾರದ ಕಿಟ್‌ನಲ್ಲಿ ತಿಂಗಳಿಗೆ ಸಾಕಾಗುವಷ್ಟು ವಸ್ತುಗಳೇ ಇರಲಿಲ್ಲ. ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ದೂರು ನೀಡಲಾಯಿತು. ನಂತರ ಆಹಾರ ಕಿಟ್‌ ನಲ್ಲಿ 5 ಕೆ.ಜಿ.ಅಕ್ಕಿ ನೀಡಲಾಯಿತು ಎಂದು ಮಂಗಳ ಮುಖೀ ಸೌಮ್ಯಾ ಹೇಳಿದ್ದಾರೆ. ಲೌಕ್‌ಡೌನ್‌ ಮುಗಿದರೂ ನಮ್ಮ ಬದುಕು ಸುಧಾರಿಸಲು ನಾಲ್ಕೈದು ತಿಂಗಳು ಬೇಕು. ಈ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಂಗಳ ಮುಖೀಯರತ್ತ ಗಮನ ಹರಿಸುವ ಅಗತ್ಯವಿದೆ.

ಬೆಂಗಳೂರಿನ ಹಲವೆಡೆ ಮಂಗಳಮುಖೀಯರು ನೆಲೆಸಿದ್ದು, ಕೆಲವರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅವರ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳ ಗಮನ ಹರಿಸಬೇಕಾಗಿದೆ ಎಂದು ಮಂಗಳ ಮುಖೀ ಅಂಜಲಿ ಹೇಳಿದ್ದಾರೆ.

ಎರಡು ತಿಂಗಳಿಗೆ 1200 ರೂ.: ಮೈತ್ರಿಯೋಜನೆಯಡಿ ಸರ್ಕಾರ ಮಂಗಳಮುಖೀಯರಿಗೆ ಪ್ರತಿ ತಿಂಗಳ 6 ನೂರು ನೀಡುತ್ತಿದೆ. ಈಗ ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಎರಡು ತಿಂಗಳ ಹಣ ನೀಡಿದರೆ, ಎಲ್ಲಿ ಸಾಲುತ್ತದೆ ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತೆ ಅಕಾಯ್‌ ಪದ್ಮಶಾಲಿ. ಅಲ್ಲದೆ ಮೈತ್ರಿ ಯೋಜನೆಯಡಿ ಹಣ ಇನ್ನೂ ಕೆಲವು ಮಂಗಳ ಮುಖೀಯರಿಗೆ ತಲುಪಿಲ್ಲ.

ನಗರದಲಿ ಮಂಗಳಮುಖೀಯರ ನೆಲೆ :  ಬೆಂಗಳೂರಿನ ದಾಸರಹಳ್ಳಿ, ಯಲಹಂಕ, ಅಮೃತ ಹಳ್ಳಿ, ಹೆಬ್ಟಾಳ, ಬಾಪೂಜಿ ನಗರ, ಆರ್‌ ಪಿಸಿ ಲೇಔಟ್‌, ಕಾಮಾಕ್ಷಿ ಪಾಳ್ಯ, ಬೊಮ್ಮನಹಳ್ಳಿ, ಕೂಡ್ಲಿ ಗೇಟ್‌, ಬೈಯಪ್ಪನಹಳ್ಳಿ, ಕಾಕ್ಸ್‌ಟೌನ್‌ ಸೇರಿದಂತೆ ಇನ್ನೂ ಹಲವು ಪ್ರದೇಶಗಳಲ್ಲಿ ಬಾಡಿಗೆ ಮನೆಗಳಲ್ಲಿ ವಾಸವಾಗಿದ್ದಾರೆ. ಇವರಿಗೆಲ್ಲರಿಗೂ ಬಾಡಿಗೆದಾರರು ಬಾಡಿಗೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಸರ್ಕಾರ ನೆರವಿಗೆ ಬರಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಸರ್ಕಾರ ಈಗಾಗಲೇ ಹಲವು ಕ್ಷೇತ್ರಕ್ಕೆ ನೆರವು ನೀಡಿದೆ. ಅದೇ ರೀತಿ ಮಂಗಳ ಮುಖೀಯರತ್ತಲೂ ಸರ್ಕಾರ ಗಮನಹರಿಸಬೇಕು. ದೀರ್ಘ‌ಕಾಲದ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಂಗಳ ಮುಖೀಯರು ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಸಂಕಷ್ಟಗಳಿಗೂ ಅಧಿಕಾರಿ ವರ್ಗ ಮಿಡಿಯಬೇಕು. ಮಂಜಮ್ಮ ಜೋಗತಿ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ

 

 

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.