ವಿದ್ಯುತ್‌ ಸಂಪರ್ಕಕ್ಕಾಗಿ ಸವಿಕಿರಣ ಸೇವೆ


Team Udayavani, Feb 8, 2018, 1:00 PM IST

blore-3.jpg

ಬೆಂಗಳೂರು: ವಿದ್ಯುತ್‌ ಸಂಪರ್ಕ ಪಡೆಯಲು ಇನ್ನು ಮುಂದೆ ಕಚೇರಿಗಳಿಗೆ ಅಲೆಯಬೇಕಿಲ್ಲ, ಮಧ್ಯವರ್ತಿಗಳಿಗೆ ಹಣ ನೀಡಬೇಕಿಲ್ಲ, ಮನೆಯಲ್ಲಿಯೇ ಕುಳಿತು ಆನ್‌ಲೈನ್‌ನಲ್ಲಿ ಬೆಸ್ಕಾಂಗೆ ಅರ್ಜಿ ಸಲ್ಲಿಸಿದ 24 ಗಂಟೆಗಳಲ್ಲಿ ಸಂಪರ್ಕ ಪಡೆಯಬಹುದು.

ಹೌದು, ಗ್ರಾಹಕರಿಗೆ ವೇಗವಾಗಿ ಸೇವೆಗಳನ್ನು ಒದಗಿಸುವ ಹಾಗೂ ಆಡಳಿತದಲ್ಲಿ ಪಾರದರ್ಶಕತೆ ತರಲು ಬೆಸ್ಕಾಂ, ಜನರಿಗೆ ಆನ್‌ಲೈನ್‌ ಮೂಲಕವೇ ಹಲವು ಸೇವೆಗಳನ್ನು ನೀಡಲು “ಸವಿ ಕಿರಣ’ (ಫಾಸ್ಟ್‌ಟ್ರ್ಯಾಕ್‌) ಆನ್‌ಲೈನ್‌ ವ್ಯವಸ್ಥೆ ಜಾರಿಗೊಳಿಸಿದ್ದು, ಬುಧವಾರ ಬೆಂಗಳೂರಿನಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಎಸ್ಕಾಂ ಕಂಪೆನಿಗಳು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದ್ದು, ರಾಜ್ಯದ ಶೇ.50ರಷ್ಟು ಭಾಗಕ್ಕೆ ಬೆಸ್ಕಾಂ ವಿದ್ಯುತ್‌ ನೀಡುತ್ತಿದೆ. ಆ ಹಿನ್ನೆಲೆಯಲ್ಲಿ ಬೆಸ್ಕಾಂ ಗ್ರಾಹಕರಿಗೆ ಶೀಘ್ರ ಹಾಗೂ ಸುಲಭವಾಗಿ ವಿದ್ಯುತ್‌ ಸಂಪರ್ಕ ದೊರೆಯಲು ಸವಿ ಕಿರಣ ಆನ್‌ಲೈನ್‌ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಬೆಸ್ಕಾಂನ ಎಲ್ಲ 48 ಉಪವಿಭಾಗಗಳಲ್ಲಿ ಬುಧವಾರದಿಂದಲೇ ಸವಿ ಕಿರಣ ವ್ಯವಸ್ಥೆ ಜಾರಿಗೊಂಡಿದ್ದು, ಇದರಿಂದ 5ಲಕ್ಷ ಗ್ರಾಹಕರಿಗೆ ಅನುಕೂಲವಾಗಲಿದೆ. ಅರ್ಜಿ ಸಲ್ಲಿಸಿದ 24 ಗಂಟೆಯಗಳಲ್ಲಿ 7.5 ಕಿಲೋ ವ್ಯಾಟ್‌ವರೆಗಿನ ಗೃಹ ಅಥವಾ ವಾಣಿಜ್ಯ ಉದ್ದೇಶಕ್ಕಾಗಿ ವಿದ್ಯುತ್‌ ಸಂಪರ್ಕ ನೀಡಲಾಗುವುದು. ಆದರೆ, ಗ್ರಾಹಕರು ಆನ್‌ಲೈನ್‌ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ ಅರ್ಜಿ ಸಲ್ಲಿಸಿ, ವಿದ್ಯುತ್‌ ಪ್ರಮಾಣಕ್ಕೆ ನಿಗದಿಪಡಿದಷ್ಟು ಶುಲ್ಕ ಪಾವತಿಸಬೇಕು. ಆನಂತರದಲ್ಲಿ ಬೆಸ್ಕಾಂ ಸಿಬ್ಬಂದಿಯೇ ಮೀಟರ್‌ ಹಾಗೂ ಕಿಟ್‌ನೊಂದಿಗೆ ಬಂದು ವಿದ್ಯುತ್‌ ಸಂಪರ್ಕ ನೀಡಲಿದ್ದಾರೆ ಎಂದರು. ಈ ವೇಳೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ಇತರರು ಇದ್ದರು.

ಬೆಸಾಂನಿಂದ ಚಾರ್ಜಿಂಗ್‌ ಸೆಷನ್‌
ಬೆಂಗಳೂರು: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸಲು 11 ಕಡೆಗಳಲ್ಲಿ “ಎಲೆಕ್ಟ್ರಿಕ್‌ ವೆಹಿಕಲ್‌ ಚಾರ್ಜಿಂಗ್‌ ಸ್ಟೇಷನ್‌’ ನಿರ್ಮಿಸಲು ಬೆಸ್ಕಾಂ ಮುಂದಾಗಿದ್ದು, ಫೆ.15ರಂದು ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಮೊದಲ ಸ್ಟೇಷನ್‌ಗೆ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಚಾಲನೆ ನೀಡಲಿದ್ದಾರೆ. 

ರಾಜ್ಯ ಸರ್ಕಾರದ ವತಿಯಿಂದ ಎಲೆಕ್ಟ್ರಿಕ್‌ ವಾಹನ ನಿಯಮ ಜಾರಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಅನುಕೂಲವಾಗುವಂತೆ ಸ್ಟೇಷನ್‌ಗಳನ್ನು ನಿರ್ಮಿಸಲಾಗುತ್ತಿದೆ. ಪ್ರತಿಯೊಂದು ಸ್ಟೇಷನ್‌ನಲ್ಲಿ ಶೀಘ್ರ ಚಾರ್ಜ್‌ ಮಾಡುವ ಡಿಸಿ ಹಾಗೂ ಹೆಚ್ಚು ಸಮಯ ತೆಗೆದುಕೊಳ್ಳುವ ಎಸಿ ಚಾರ್ಜಿಂಗ್‌ ಪಾಯಿಂಟ್‌ಗಳನ್ನು ನಿರ್ಮಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಎಲೆಕ್ಟ್ರಿಕ್‌ ಬೈಕ್‌ ಹಾಗೂ ಕಾರುಗಳ ಬಳಕೆ ಹೆಚ್ಚುತ್ತಿದ್ದು, ನಗರದ ಪ್ರಮುಖ 11 ಪ್ರಮುಖ ಭಾಗಗಳಲ್ಲಿ ಚಾರ್ಜಿಂಗ್‌ ಸ್ಟೇಷನ್‌ ನಿರ್ಮಿಸುವ ಮೂಲಕ ವಾಹನಗಳಿಗೆ ಅನುಕೂಲ ಮಾಡಿಕೊಡಲು ಬೆಸ್ಕಾಂ ಮುಂದಾಗಿದೆ.

ಈಗಾಗಲೇ ನಗರದ ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಒಂದು ಸ್ಟೇಷನ್‌ ಸಿದ್ಧವಾಗಿದ್ದು, 420 ವೋಟ್ಸ್‌ ಸಾಮರ್ಥಯದ ಸ್ಟೆಷನ್‌ನಲ್ಲಿ ದಿನಕ್ಕೆ 100 ವಾಹನಗಳ ಚಾರ್ಚ್‌ ಮಾಡಬಹುದಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಎಲೆಕ್ಟ್ರಿಕ್‌ ವಾಹನಗಳ ಚಾರ್ಜಿಂಗ್‌ ಪಾಯಿಂಟ್‌ನಲ್ಲಿ ಸಾರ್ವಜನಿಕರಿಗೆ ವಿಧಿಸಬೇಕಾದ ದರವನ್ನು ನಿಗದಿಪಡಿಸುವಂತೆ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗವನ್ನು ಕೋರಲಾಗಿದೆ.
 ಡಿ.ಕೆ.ಶಿವಕುಮಾರ್‌, ಇಂಧನ ಸಚಿವ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.