ಸಾರಿಗೆ ಸಚಿವರ ಬಸ್ ಪ್ರಯಾಣ
Team Udayavani, Sep 5, 2017, 12:14 PM IST
ಬೆಂಗಳೂರು: ಕಾರುಗಳಲ್ಲಿ ಒಬ್ಬೊಬ್ಬರೇ ಓಡಾಡುವ ಬದಲು ಸಾರ್ವಜನಿಕ ವಾಹನಗಳನ್ನು ಬಳಸಿದರೆ ಸಂಚಾರ ದಟ್ಟಣೆ ನಿವಾರಣೆ ಜತೆಗೆ ಇಂಧನ ಉಳಿತಾಯ ಹಾಗೂ ಪರಿಸರ ಮಾಲಿನ್ಯವೂ ಕೂಡ ಕಡಿಮೆಯಾಗಲಿದೆ ಎಂದು ನೂತನ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ.
ಸೋಮವಾರ ಬಸ್ ದಿನಾಚರಣೆ ಅಂಗವಾಗಿ ಕಾರುಗಳಲ್ಲಿ ಪ್ರಯಾಣಿಸುತ್ತಿದ್ದವರಿಗೆ ಕೆಂಗುಲಾಬಿ ಜತೆಗೆ ಸಾರ್ವಜನಿಕ ಬಸ್ ಬಳಸುವಂತೆ ಬಿತ್ತಿಪತ್ರ ವಿತರಿಸಿದ ಸಚಿವ ಎಚ್.ಎಂ.ರೇವಣ್ಣ, ಖುದ್ದಾಗಿ ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸಿದರು.
ಹೆಬ್ಟಾಳದ ಮನೆಯಿಂದ ಲಾಲ್ಬಾಗ್ ವರೆಗೆ ಹಾಗೂ ಅಲ್ಲಿಂದ ವಿಧಾನಸೌಧದ ವರೆಗೆ ಬಸ್ನಲ್ಲೇ ಪ್ರಯಾಣಿಸಿದ ಸಚಿವ ರೇವಣ್ಣ, ಬೆಂಗಳೂರಿನ ವಾಹನಗಳ ದಟ್ಟಣೆ ಕಡಿಮೆಗೊಳಿಸಲು ಬಸ್ಗಳನ್ನು ಬಳಸುವುದು ಉತ್ತಮ. ಕಾರುಗಳಲ್ಲಿ ಒಬ್ಬೊಬ್ಬರೇ ಓಡಾಡುವುದರಿಂದ ಟ್ರಾಫಿಕ್ ಸಮಸ್ಯೆ ಜತೆಗೆ ಇಂಧನ ವ್ಯರ್ಥ, ಪರಿಸರ ಮಾಲಿನ್ಯ ಕೂಡ ಹೆಚ್ಚುತ್ತದೆ. ಇದನ್ನು ಮನಗಂಡು ಎಲ್ಲರೂ ಬಸ್ಗಳನ್ನು ಹೆಚ್ಚಾಗಿ ಬಳಸಬೇಕು. ಅಗತ್ಯವಿದ್ದಾಗ ಮಾತ್ರ ಕಾರುಗಳಲ್ಲಿ ಓಡಾಡಬೇಕು ಎಂದು ಮನವಿ ಮಾಡಿದರು. ಬಿಎಂಟಿಸಿ ಅಧ್ಯಕ್ಷ ನಾಗರಾಜ್ ಯಾದವ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ