ಮೇ 1ರಂದು ಸಾರಿಗೆ ಕಾರ್ಮಿಕರ ಬಲ ಪ್ರದರ್ಶನ
Team Udayavani, Apr 28, 2019, 3:00 AM IST
ಬೆಂಗಳೂರು: ಸಾರಿಗೆ ಕಾರ್ಮಿಕರ 4 ಸಂಘಟನೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂದು ಒತ್ತಾಯಿಸಿ ಅಖಂಡ ರಾಜ್ಯ ರಸ್ತೆ ಸಾರಿಗೆ ಕಾರ್ಮಿಕ ಮಹಾಮಂಡಳಿ ನಡೆಸುತ್ತಿರುವ ಸಾಂಕೇತಿಕ ಅನಿರ್ದಿಷ್ಟಾವಧಿ ಪ್ರತಿಭಟನೆ (ಮೇ 1ಕ್ಕೆ) 160 ದಿನ ಪೂರೈಸಲಿದೆ.
ಅ.1ರಂದು ಶಾಂತಿ ನಗರದ ಸಾರಿಗೆ ಭವನದಲ್ಲಿ ಎಕೆಆರ್ಆರ್ಎಸ್ ಕಾರ್ಮಿಕರ ಮಂಡಳಿ ಸಾಂಕೇತಿಕ ಪ್ರತಿಭಟನೆ ಪ್ರಾರಂಭಿಸಿತ್ತು. ಬಿಎಂಟಿಸಿ, ಕೆಎಸ್ಆರ್ಟಿಸಿ, ವಾಯುವ್ಯ ಮತ್ತು ಈಶಾನ್ಯ ನಿಗಮಗಳಲ್ಲಿ ಕಾರ್ಮಿಕರನ್ನು ಸರ್ಕಾರಿ ಕಾರ್ಮಿಕರನ್ನು ಎಂದು ಪರಿಗಣಿಸಬೇಕು,
ಕರ್ನಾಟಕ ರಾಜ್ಯಸರ್ಕಾರ ಜಾರಿಗೊಳಿಸಿರುವ 6ನೇ ವೇತನ ಪರಿಷ್ಕರಣೆಯನ್ನು ನಾಲ್ಕೂ ನಿಗಮಗಳ ಕಾರ್ಮಿಕರಿಗೆ ವಿಸ್ತರಿಸಬೇಕು ಮತ್ತು ಕಾರ್ಮಿಕರ ಅನುಕೂಲಕ್ಕೆ ಅನುಗುಣವಾಗಿ ವರ್ಗಾವಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ಮಾಡಲಾಗುತ್ತಿದೆ.
ಮೇ 1ಕ್ಕೆ ಸ್ವಾತಂತ್ರ್ಯ ಉದ್ಯಾನದಲ್ಲಿ ಸಾರಿಗೆ ಕಾರ್ಮಿಕರ ಬಲಪ್ರದರ್ಶನ ನಡೆಯಲಿದೆ. ಇದರಲ್ಲಿ ಸಾವಿರಾರು ಸಾರಿಗೆ ಕಾರ್ಮಿಕರು ಭಾಗವಹಿಸುವ ಸಾಧ್ಯತೆ ಇದೆ ಎಂದು ಎಕೆಆರ್ಆರ್ಎಸ್ ಕಾರ್ಮಿಕರ ಮಂಡಳಿ ತಿಳಿಸಿದೆ.
ದಂಡಕ್ಕೆ ತೀವ್ರ ವಿರೋಧ: ಬಸ್ನಲ್ಲಿ ಪ್ರಯಾಣಿಕರು ಟಿಕೆಟ್ ತೆಗೆದುಕೊಳ್ಳದೆ ಇದ್ದರೆ ಅಥವಾ ಟಿಕೆಟ್ ಕಳೆದುಕೊಂಡರೆ ಕಂಡಕ್ಟರ್ಗಳ ಮೇಲೆ ಕ್ರಮ ತೆಗೆದುಕೊಳ್ಳುತ್ತಿರುವುದಕ್ಕೆ ಸಾರಿಗೆ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.
ಯಾವುದೇ ರಾಜ್ಯದಲ್ಲೂ ಇಂತಹ ಪ್ರಕರಣಗಳಲ್ಲಿ ಕಂಡಕ್ಟರ್ಗಳಿಗೆ ದಂಡ, ಅಮಾನತು ಮತ್ತು ವರ್ಗವಣೆಯಂತ ಶಿಕ್ಷೆ ವಿಧಿಸುತ್ತಿಲ್ಲ. ನಮ್ಮ ರಾಜ್ಯದಲ್ಲಿ ಮಾತ್ರ ಈ ರೀತಿ ಮಾಡಲಾಗುತ್ತಿದೆ. ಇದು ನಿಲ್ಲಬೇಕು ಎಂದು ಎಕೆಆರ್ಆರ್ ಎಸ್ ಕಾರ್ಮಿಕರ ಮಂಡಳಿ ಕಾರ್ಯದರ್ಶಿ ಎ.ವಿ.ಬೋರಶೆಟ್ಟಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ