ಕಿದ್ವಾಯಿ ಆವರಣದಲ್ಲಿ ಟ್ರೀ ಪಾರ್ಕ್
Team Udayavani, Apr 26, 2019, 12:10 PM IST
ಬೆಂಗಳೂರು: ನಗರದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು, ಎನ್ವಯರ್ನ್ಮೆಂಟ್ ಟ್ರಸ್ಟ್ ಸಹಯೋಗದಲ್ಲಿ ಆಸ್ಪತ್ರೆ ಆವರಣದಲ್ಲಿ ‘ಟ್ರೀ ಪಾರ್ಕ್’ ನಿರ್ಮಾಣ ಯೋಜನೆ ಕೈಗೊಂಡಿದ್ದು, ಈ ಹಿನ್ನೆಲೆ ಗುರುವಾರ ಬೇವು, ಮಾವು, ಹಲಸು, ಸಪೋಟ, ನೇರಳೆ, ಸಂಪಿಗೆ ಸೇರಿದಂತೆ ಹೂ-ಹಣ್ಣುಗಳ ಹಾಗೂ ಔಷಧೀಯಗುಣವುಳ್ಳ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು.
ಕಾರ್ಯಕ್ರಮಕ್ಕೆ ಟ್ರಸ್ಟ್ ಅಧ್ಯಕ್ಷ ಹಾಗೂ ಪರಿಸರವಾದಿ ಡಾ.ಎ.ಎನ್.ಯಲ್ಲಪ್ಪರೆಡ್ಡಿ, ಕಾರ್ಯದರ್ಶಿ ರವೀಂದ್ರನಾಥ್, ಆಸ್ಪತ್ರೆಯ ನಿರ್ದೇಶಕ ಡಾ.ಸಿ.ರಾಮಚಂದ್ರ ಅವರು ಸಸಿಗಳನ್ನು ನಡೆವ ಮೂಲಕ ಯೋಜನೆಗೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಡಾ.ಎ.ಎನ್. ಯಲ್ಲಪ್ಪರೆಡ್ಡಿ, ಬೆಂಗಳೂರು ಕಾಂಕ್ರೀಟ್ ಕಾಡಾಗುತ್ತಿದ್ದು, ಭವಿಷ್ಯದ ದೃಷ್ಟಿಯಿಂದ ನಗರವನ್ನು ಹಸಿರಾಗಿಸುವ ಅಗತ್ಯವಿದೆ. ಹೀಗಾಗಿ, ಕಿದ್ವಾಯಿ ಆಸ್ಪತ್ರೆ ಆವರಣದಲ್ಲಿ ನೂರಾರು ಸಸಿಗಳನ್ನು ನೆಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಸಸಿ ನೆಡುವ ಮೂಲಕ ಬೃಹತ್ ಉದ್ಯಾನ ನಿರ್ಮಿಸಲಾಗುವುದು ಎಂದು ಹೇಳಿದರು.
ಆಸ್ಪತ್ರೆ ನಿರ್ದೇಶಕ ಡಾ.ಸಿ.ರಾಮಚಂದ್ರ ಮಾತನಾಡಿ, ಕಿದ್ವಾಯಿ ಆಸ್ಪತ್ರೆ ಆವರಣದಲ್ಲಿ ಬಹಳಷ್ಟು ಕಟ್ಟಡಗಳು ತಲೆ ಎತ್ತಿದ್ದು, ಹಸಿರು ಕಣ್ಮರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹತ್ತು ಎಕರೆ ಜಾಗದಲ್ಲಿ ಬೃಹತ್ ಟ್ರೀ ಪಾರ್ಕ್ ನಿರ್ಮಿಸಲು ಚಿಂತನೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಸುಮಾರು ಐದು ಸಾವಿರ ಸಿಸಗಳನ್ನು ನೆಡುವ ಮೂಲಕ ಆಸ್ಪತ್ರೆ ಆವರಣವನ್ನು ಸಂಪೂರ್ಣ ಹಸಿರುಮಯವಾಗಿಸಿ ರೋಗಿಗಳಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡಲಾಗುವುದು. ನಮ್ಮ ಈ ಕಾರ್ಯಕ್ಕೆ ಇನ್ಫೋಸಿಸ್ ಸೇರಿದಂತೆ ನಾನಾ ಸಂಘ ಸಂಸ್ಥೆಗಳು ಕೈಜೋಡಿಸುವುದಾಗಿ ಭರವಸೆ ನೀಡಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
Motivational: ಪಿಯುನಲ್ಲಿ 2 ಬಾರಿ ಫೇಲ್, ಯುಪಿಎಸ್ಸಿ ಪಾಸ್
Bike Theft: ಹಗಲಲ್ಲಿ ಫುಡ್ಡೆಲಿವರಿ ಕೆಲಸ, ರಾತ್ರಿ ಬೈಕ್ಗಳ ಕಳವು: ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..