ಕಬ್ಬನ್‌ ಪಾರ್ಕ್‌ನಲ್ಲಿ 40ಕ್ಕೂ ಅಧಿಕ ಮರ ಧರೆಗೆ


Team Udayavani, May 23, 2023, 9:30 PM IST

ಕಬ್ಬನ್‌ ಪಾರ್ಕ್‌ನಲ್ಲಿ 40ಕ್ಕೂ ಅಧಿಕ ಮರ ಧರೆಗೆ

ಬೆಂಗಳೂರು: ಕಬ್ಬನ್‌ ಪಾರ್ಕ್‌, ಲಾಲ್‌ಬಾಗ್‌ ಸೇರಿದಂತೆ ಅನೇಕ ಉದ್ಯಾನವನಗಳಲ್ಲಿ ಹಾಗೂ ರಸ್ತೆ ಬದಿಗಳಲ್ಲಿ ನೂರಾರು ಮರಗಳು ನೆಲಕಚ್ಚಿವೆ. ಕಬ್ಬನ್‌ ಪಾರ್ಕ್‌ನಲ್ಲಿ 40ಕ್ಕೂ ಹೆಚ್ಚು ಮರಗಳು ಬಿದ್ದಿದ್ದು, ಇನ್ನೂ ಅನೇಕ ಮರಗಳ ರೆಂಬೆ-ಕೊಂಬೆಗಳು ಮುರಿದು ಬಿದ್ದಿವೆ.

ಕೇಂದ್ರ ಗ್ರಂಥಾಲಯ, ಬ್ಯಾಂಡ್‌ ಸ್ಟಾಂಡ್‌ ಸೇರಿದಂತೆ ಕಬ್ಬನ್‌ ಪಾರ್ಕಿನ ವಿವಿಧ ಭಾಗಗಳಲ್ಲಿನ ಸುಮಾರು 30 ರಿಂದ 65 ವರ್ಷಗಳಷ್ಟು ಹಳೆಯದಾದ ಪೆಲ್ಟೋಫೋರಂ, ಫಿಕಸ್‌ ಬೆಂಜಮಿನ್‌, ಪೇಪರ್‌ ಮಲ್ಬರಿ, ಆರ್ಕ್‌, ಸಿಲ್ವರ್‌ಓಕ್‌, ಹಲಸು ಸೇರಿದಂತೆ ಮತ್ತಿತರರ ಜಾತಿಯ ಮರಗಳು ನೆಲಕ್ಕುರುಳಿವೆ.

ಪ್ರತಿ ವರ್ಷ ಮಳೆಗಾಲದಲ್ಲಿ ಗಾಳಿ-ಮಳೆಗೆ ಮರಗಳು ಬೀಳುವುದು ಸಹಜ. ತೋಟಗಾರಿಕೆ ಸಿಬ್ಬಂದಿಗೆ ಮಳೆ ನಿಂತ ನಂತರ ಬಿದ್ದ ಮರಗಳು, ಮುರಿದ ರೆಂಬೆ ಕೊಂಬೆಗಳನ್ನು ತೆರವು ಮಾಡುವ ಕಾರ್ಯದಲ್ಲಿ ತೊಡಗಿದ್ದರು. ಸೋಮವಾರ ಬಹುತೇಕ ತೆರವು ಕಾರ್ಯ ಪೂರ್ಣಗೊಂಡಿದ್ದರೂ, ಉದ್ಯಾನವನ್ನು ಸ್ವಚ್ಛಗೊಳಿಸುವ ಕಾರ್ಯ ಮುಂದುವರೆಸಲಾಗಿದೆ. ಇನ್ನೂ ಯಾವೆಲ್ಲಾ ಮರಗಳು, ಎಷ್ಟು ವರ್ಷಗಳ ಮರಗಳು ಎಂಬ ನಿಖರವಾದ ಮಾಹಿತಿ ತಿಳಿಯಬೇಕಿದೆ.

ಬಿದ್ದ ಮರಗಳ ಜಾಗದಲ್ಲಿ ಬೇರೆ ಸಸಿಗಳನ್ನು ನಡೆಲಾಗುವುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ (ಕಬ್ಬನ್‌ ಉದ್ಯಾನ) ಎಚ್‌.ಟಿ. ಬಾಲಕೃಷ್ಣ ಮಾಹಿತಿ ನೀಡಿದರು. ಮೂರು ತಿಂಗಳಿನಿಂದಲೇ ಲಾಲ್‌ಬಾಗ್‌ ಮತ್ತು ಕಬ್ಬನ್‌ ಪಾರ್ಕ್‌ನಲ್ಲಿ ಒಣಗಿದ ಮರಗಳು, ರೆಂಬೆಕೊಂಬೆಗಳನ್ನು ತೆರವುಗೊಳಿಸುವ ಕಾರ್ಯವನ್ನು ನಡೆಯುತ್ತಿದ್ದು, ಕೈಗೆಟುಕದ ಮತ್ತು ತುಂಬಾ ಎತ್ತರದಲ್ಲಿರುವ ಮರದ ಒಣಗಿದ ಕೆಲ ರೆಂಬೆಕೊಂಬೆಗಳನ್ನು ತೆರವು ಮಾಡಲು ಸಾಧ್ಯವಾಗಿರಲಿಲ್ಲ. ಅಲ್ಲದೇ ಭಾನುವಾರ ಮಳೆಗಿಂತ ಗಾಳಿ ಹೆಚ್ಚಾಗಿದ್ದರಿಂದ ಒಣಗಿದ ರೆಂಬೆಗಳು ಸೇರಿದಂತೆ ಹಳೆಯ ಮರಗಳ ಹಸಿಯಾಗಿರುವ ರೆಂಬೆಕೊಂಬೆಗಳೂ ಮುರಿದು ಬಿದ್ದಿವೆ ಎಂದು ಅಧಿಕಾರಿಗಳು ತಿಳಿಸುತ್ತಾರೆ.

“ಅಭಿವೃದ್ಧಿ ಕಾರ್ಯಗಳಿಂದ ಬೇರುಗಳು ಸಡಿಲ’: ಕಬ್ಬನ್‌ ಪಾರ್ಕ್‌ನಲ್ಲಿ 150ಕ್ಕೂ ಹೆಚ್ಚು ಮರಗಳು ಬಿದ್ದಿದ್ದು, ಹಲವಾರು ಮರಗಳಿಗೆ ಹಾನಿಯಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಕಬ್ಬನ್‌ ಪಾರ್ಕ್‌ ಅನ್ನು ನಾಶಮಾಡುತ್ತಿದ್ದಾರೆ. ಇದರಿಂದಾಗಿ ಬೇರುಗಳು ಸಡಿಲಗೊಂಡು, ದೊಡ್ಡ ದೊಡ್ಡ ಮರಗಳೇ ಗಾಳಿ- ಮಳೆಗೆ ಬೀಳುತ್ತಿವೆ. ಇದರಿಂದಾಗಿ ಪರಿಸರ ಹಾಳಾ ಗುತ್ತಿದ್ದು, ವಾಯುವಿಹಾರಕ್ಕೆ ಬರುವ ಹಿರಿಯ ನಾಗರಿ ಕರಿಗೂ ತೊಂದರೆಯುಂಟಾಗಿದೆ ಎಂದು ಕಬ್ಬನ್‌ ಉದ್ಯಾನ ನಡಿಗೆದಾರರ ಸಂಘ ಆರೋಪಿಸಿದೆ.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.