ಭಾರಿ ಮಳೆಗೆ ಧರೆಗುರುಳಿದ ಮರಗಳು


Team Udayavani, Aug 25, 2018, 12:51 PM IST

bhari-male.jpg

ಬೆಂಗಳೂರು: ಹಲವು ದಿನಗಳ ಬಿಡುವಿನ ಬಳಿಕ ಶುಕ್ರವಾರ ಸಂಜೆ ಸುರಿದ ಭಾರಿ ಮಳೆಗೆ ನಗರದ ಹಲವೆಡೆ ಮರಗಳು ಧರೆಗುರುಳಿದ್ದು, ಪ್ರಮುಖ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು. 

ಬೆಳಗ್ಗೆಯಿಂದಲೂ ನಗರದಲ್ಲಿ ಮೋಡ ಮುಸುಕಿನ ವಾತಾವರಣವಿದ್ದು, ಸುರಿದ ದಿಢೀರ್‌ ಮಳೆಗೆ ಬೈಕ್‌ ಸವಾರರು ಸಮಸ್ಯೆ ಅನುಭವಿಸುವಂತಾಯಿತು. ಪ್ರಮುಖವಾಗಿ ಸಂಪಂಗಿ ರಾಮನಗರ, ಹಲಸೂರು, ಯಶವಂತಪುರ, ರಾಜರಾಜೇಶ್ವರಿನಗರ, ಉತ್ತರಹಳ್ಳಿ, ಬೆಳ್ಳಂದೂರು, ಎಚ್‌ಎಎಲ್‌, ಕೆಂಗೇರಿ ಸೇರಿದಂತೆ ನಗರದ ಹಲವೆಡೆ ಧಾರಾಕರ ಮಳೆಯಾಗಿದೆ. 

 ಓಕಳಿಪುರ, ಶೇಷಾದ್ರಿಪುರ ರೈಲ್ವೆ ಕೆಳಸೇತುವೆ, ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಕೆ.ಆರ್‌.ಮಾರುಕಟ್ಟೆ, ಮೇಖೀ ವೃತ್ತ, ಹೆಬ್ಟಾಳ ರಸ್ತೆ ಮೇಲ್ಸೇತುವೆ ಕೆಳಭಾಗ, ಮೈಸೂರು ರಸ್ತೆ, ನಾಯಂಡಹಳ್ಳಿ ಮೆಟ್ರೋ ನಿಲ್ದಾಣ, ಗಾಂಧಿನಗರ ಸೇರಿದಂತೆ ಪ್ರಮುಖ ಭಾಗಗಳಲ್ಲಿ ರಸ್ತೆಗಳಲ್ಲಿ  ನೀರು ಹರಿದ ಪರಿಣಾಮ ವಾಹನ ಸಂಚಾರ ವೇಗ ಕಡಿಮೆಯಾಗಿ ತೀವ್ರ ವಾಹನ ದಟ್ಟಣೆ ಉಂಟಾಗಿತ್ತು. 

ಜತೆಗೆ ಜೋರಾದ ಗಾಳಿಯೊಂದಿಗೆ ಸುರಿದ ಮಳೆಗೆ ಅಗರ ಕೆರೆ, ಸೆಂಟ್‌ಜಾನ್ಸ್‌ ಆಸ್ಪತ್ರೆ, ದೊಮ್ಮಲೂರು ಮೇಲುಸೇತುವೆ ಸೇರಿದಂತೆ ಹಲವೆಡೆ ಮರಗಳು ಧರೆಗುರುಳಿದ ಪರಿಣಾಮ ಕೆಲ ಕಾಲ ದಟ್ಟಣೆ ಉಂಟಾಗಿತ್ತು. ನಂತರದಲ್ಲಿ ಪಾಲಿಕೆಯ ಸಿಬ್ಬಂದಿ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. 

ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ: ನಗರದ ಕೇಂದ್ರ ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಸಂಪಂಗಿರಾಮನಗರ 44.5 ಮಿಲಿ ಮೀಟರ್‌ ದಾಖಲಾಗಿದೆ. ಉಳಿದಂತೆ ಬಸವೇಶ್ವರ ನಗರ 24.5, ಅಗ್ರಹಾರ ದಾಸರಹಳ್ಳಿ, ಆರ್‌ಆರ್‌ನಗರ ತಲಾ 25.5, ದಯಾನಂದನಗರ, ನಾಗರಬಾವಿಯಲ್ಲಿ 19, ಶಿವನಗರ, ಹೊಯ್ಸಳನಗರ, ನಾಗಪುರ, ಹಂಪಿನಗರ 17, ಬಸವನಗುಡಿ, ನಾಗಪುರ, ಅರಮನೆ ಗುಟ್ಟಹಳ್ಳಿ 16, ನಂದಿನಿ ಬಡಾವಣೆ, ಬೊಮ್ಮನಹಳ್ಳಿ, ಸಾರಕ್ಕಿ 10, ಲಕ್ಕಸಂದ್ರ 12, ಕೆಂಗೇರಿ 18, ಲಾಲ್‌ಬಾಗ್‌, ದೊಡ್ಡನಕ್ಕುಂದಿ 13, ಪುಲಕೇಶಿ ನಗರ 15 ಹಾಗೂ ವಿದ್ಯಾಪೀಠ 22 ಮಿ.ಮೀ ಮಳೆಯಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.