ಅಕ್ರಮ ಸಂಬಂಧದ ಶಂಕೆ: ಪತ್ನಿಯನ್ನೇ ಕೊಂದು ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಪತಿ!
Team Udayavani, Jul 13, 2022, 4:23 PM IST
ಬೆಂಗಳೂರು: ಪತಿಯೊಬ್ಬ ತನ್ನ ಸ್ನೇಹಿತನ ಜತೆ ಸೇರಿ ಪತ್ನಿಯನ್ನು ಕೊಂದು, ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಪ್ರಕರಣ ಭೇದಿಸಿರುವ ಕೆಂಗೇರಿ ಪೊಲೀಸರು ಪತಿ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮೊಹಮ್ಮದ್ ಮಂಜೂರ್ ಅಹ್ಮದ್ ಹಣಗಿ (29) ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಪ್ರಜ್ವಲ್ (21) ಬಂಧಿತರು.
ಮೊಹಮ್ಮದ್ ಮಂಜೂರ್ ತನ್ನ ಪತ್ನಿ ನಗೀನಾ(29) ಪುರುಷನ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಭಾವಿಸಿ ಸ್ನೇಹಿತನ ಜತೆ ಸೇರಿ ಹತ್ಯೆ ಮಾಡಿದ್ದನು. ಮೃತ ನಗೀನಾಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೂ 6 ವರ್ಷಗಳ ಹಿಂದೆ ಮೊಹಮ್ಮದ್ ಮಂಜೂರ್ನನ್ನು 2ನೇ ಮದುವೆಯಾಗಿದ್ದು, ಕೆಂಗೇರಿ ಉಪನಗರದ ಸನ್ಸಿಟಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೊಹಮ್ಮದ್ ಮಂಜೂರು ಜೆಸಿಬಿ ಚಾಲಕನಾಗಿದ್ದಾನೆ.
ಕರೆಸಿಕೊಂಡು ಕೊಲೆ: ಜು. 2ರಂದು ರಾತ್ರಿ ವಿಶ್ವೇಶ್ವರಯ್ಯ ಲೇಔಟ್ನ ಧನನಾಯಕನಹಳ್ಳಿಗೆ ಬಂದ ಮೊಹಮ್ಮದ್ ಪತ್ನಿಗೆ ಕರೆ ಮಾಡಿ, ಸ್ಥಳಕ್ಕೆ ಕರೆಸಿಕೊಂಡಿದ್ದಾನೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕುತ್ತು ಹಿಸುಕಿದರೆ, ಪ್ರಜ್ವಲ್ ಕಾಲು ಹಿಡಿದುಕೊಂಡು ಕೊಲೆಗೆ ಸಹಕಾರ ನೀಡಿದ್ದಾನೆ. ಆಕೆ ಮೃತಪಟ್ಟ ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂದಿದ್ದಾರೆ.
ಮರು ದಿನ ದಾರಿಹೋಕರು ಸುಟ್ಟುಕರಕಲಾಗಿದ್ದ ದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಗುರುತು ಪತ್ತೆ ಹಚ್ಚಲಾಗದಷ್ಟು ದೇಹ ಸುಟ್ಟು ಹೋಗಿದ್ದರಿಂದ ಪ್ರಕರಣ ಭೇದಿಸುವುದು ಸವಾಲಾಗಿತ್ತು.
ಪೊಲೀಸ್ ವಿಶೇಷ ತಂಡಗಳು ಮೃತ ಮಹಿಳೆಯ ವಿಳಾಸವನ್ನು ಪತ್ತೆ ಮಾಡಿ ಆಕೆಯ ತಂದೆ-ತಾಯಿಯಿಂದ ಖಚಿತ ಪಡಿಸಿಕೊಂಡು ತನಿಖೆ ನಡೆಸಿ ವಿಜಯಪುರ ಜಿಲ್ಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್