ಚಿಕ್ಕಮಗಳೂರಿನಲ್ಲಿ ಇಬ್ಬರ ಬಂಧನ, ಸ್ಫೋಟಕ ವಶ
Team Udayavani, Mar 27, 2019, 11:43 AM IST
ಬೆಂಗಳೂರು: ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಉಗ್ರವಾದ ಹೆಚ್ಚುತ್ತಿದ್ದರೂ ರಾಜ್ಯ ಸರ್ಕಾರ ಕಣ್ಮುಚ್ಚಿ ಕೂತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕಳಸ ಪಟ್ಟಣದಲ್ಲಿ ಮಂಗಳವಾರ ಅಜೀಜ್ ಮತ್ತು ಆತನ ಸಹೋದರ, ಮೆಕ್ಯಾನಿಕ್ ಅಫಾÕ ಅಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಅಲ್ಲದೆ, ಅವರ ಮನೆಯಲ್ಲಿದ್ದ 40 ಸ್ಫೋಟಕ ಸಾಧನಗಳು, 40 ಜಿಲೆಟಿನ್ ಕಡ್ಡಿಗಳು, ಎರಡು ಪೆಟ್ರೋಲ್ ಬಾಂಬ್ ಹಾಗೂ ಮತ್ತಿತರೆ ವಸ್ತುಗಳನ್ನು ವಶಪಡಿಸಿಕೊಂಡಿರುವ ವರದಿಯಾಗಿದೆ.
ಮಲೆನಾಡು ಮತ್ತು ಕರಾವಳಿಯಲ್ಲಿ ಮತೀಯವಾದ ಮತ್ತು ಭಯೋತ್ಪಾದಕ ಚಟುವಟಿಕೆಗಳು ಹೆಚಾಗುತ್ತಿರುವ ಈ ದಿನಗಳಲ್ಲಿ ಸ್ಫೋಟಕಗಳು ಪತ್ತೆಯಾಗಿರುವುದು ಆತಂಕ ಸೃಷ್ಟಿಸಿದೆ ಎಂದು ಸಿ.ಟಿ.ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಸ್ಫೋಟಕಗಳು ಪತ್ತೆಯಾಗಿರುವುದು ಕಳವಳಕಾರಿ ವಿಷಯವಾಗಿದೆ ಎಂದರು. ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದ್ದರೆ ಈ ಶಕ್ತಿಗಳನ್ನು ಮಟ್ಟಹಾಕಿ, ಶಸ್ತ್ರಾಸ್ತ, ಸ್ಫೋಟಕ ಪೂರೈಸುವವರನ್ನು ನಿಗ್ರಹಿಸಬಹುದಾಗಿತ್ತು.
ಕರಾವಳಿಯು ಗಡಿ ಇದ್ದಂತೆ. ಅದೇ ಗಡಿಯಿಂದ ಶಸ್ತ್ರಾಸ್ತ್ರಗಳು ಪೂರೈಕೆಯಾಗುತ್ತಿರುವ ಸಾಧ್ಯತೆ ಇದೆ. ದೇಶದ ಭದ್ರತೆ ವಿಷಯವೂ ಆಗಿದೆ. ಭಯೋತ್ಪಾದಕರಿಗೆ ಕರಾವಳಿ, ಒಳನುಸುಳುವ ಮಾರ್ಗವಾಗಿರಬಹುದಾದ ಸಾಧ್ಯತೆ ಇದೆ.
ಹೀಗಾಗಿ ರಾಜ್ಯ ಸರ್ಕಾರ, ಮತೀಯ ಶಕ್ತಿಗಳನ್ನು ಮತ ಬ್ಯಾಂಕ್ಗೆ ಬಳಸಿಕೊಳ್ಳುವುದನ್ನು ಬಿಟ್ಟು, ಈ ಶಕ್ತಿಗಳ ಹಿಂದಿರುವ ಜಾಲ ಭೇದಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ