ಇಬ್ಬರು ಮುಖ್ಯ ಪೇದೆಗಳ ಅಮಾನತು


Team Udayavani, Mar 17, 2019, 6:36 AM IST

ibb-sus.jpg

ಬೆಂಗಳೂರು: ನಗರ ಪೊಲೀಸ್‌ ಆಯುಕ್ತರ ಕಚೇರಿ ಆವರಣದಲ್ಲಿರುವ “ಪೊಲೀಸ್‌ ಪರಿಶೀಲನಾ ಪ್ರಮಾಣ ಪತ್ರ’ ವಿಭಾಗದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಇಬ್ಬರು ಮುಖ್ಯಪೇದೆಗಳನ್ನು ಅಮಾನತು ಮಾಡಲಾಗಿದೆ.

ನಗರ ಗುಪ್ತಚರ ವಿಭಾಗದ ಡಿಸಿಪಿ ಕಚೇರಿಯಲ್ಲಿ ಕಂಪ್ಯೂಟರ್‌ ಆಪರೇಟರ್‌ ಆಗಿರುವ ನಾರಾಯಣಸ್ವಾಮಿ ಮತ್ತು ಪೊಲೀಸ್‌ ಪರಿಶೀಲನಾ ವಿಭಾಗದಲ್ಲಿ ಪ್ರಮಾಣಪತ್ರ ವಿತರಣೆ ಮಾಡುವ ಮಂಜುನಾಥ ಅಮಾನತುಗೊಂಡ ಮುಖ್ಯಪೇದೆಗಳು.

ಇಬ್ಬರೂ ಸುಮಾರು 163 ನಕಲಿ ಪ್ರಮಾಣ ಪತ್ರಗಳನ್ನು ಅಕ್ರಮವಾಗಿ ವಿತರಣೆ ಮಾಡಿದ್ದು, ಅಂದಾಜು 80 ಸಾವಿರ ರೂ. ವಂಚನೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್‌ ಆಯುಕ್ತರ ಕಚೇರಿ ಮೂಲಗಳು ತಿಳಿಸಿವೆ.

ನಗರ ಗುಪ್ತಚರ ವಿಭಾಗದ ಅಧೀನದಲ್ಲಿ ಪೊಲೀಸ್‌ ಪರಿಶೀಲನಾ ಕೇಂದ್ರ ಕಾರ್ಯ ನಿರ್ವಹಿಸುತ್ತದೆ. ಸಾಮಾನ್ಯವಾಗಿ ಈ ಕೇಂದ್ರದಲ್ಲಿ ನಗರದ ಖಾಸಗಿ ವಾಹನ ಚಾಲಕರು, ಉದ್ಯೋಗಾಂಕ್ಷಿಗಳು, ಭದ್ರತಾ ಸಿಬ್ಬಂದಿ, ಪಾಸ್‌ಪೋರ್ಟ್‌ ಅರ್ಜಿದಾರರು ಹಾಗೂ ಇತರೆ ವರ್ಗದ ಸಾರ್ವಜನಿಕರು ಕೆಲ ಉದ್ದೇಶಿತ ಕಾರಣಗಳಿಗಾಗಿ “ಪೊಲೀಸ್‌ ಪರಿಶೀಲನಾ ಪ್ರಮಾಣ ಪತ್ರ’ ಪಡೆಯಲು ಅರ್ಜಿ ಸಲ್ಲಿಸುತ್ತಾರೆ.

ಪ್ರತಿ ಅರ್ಜಿಯೊಂದಿಗೆ ಪರಿಶೀಲನಾ ಶುಲ್ಕ 450 ರೂ. ಪಾವತಿಸಿದ ಚಲನ್‌ ಕೊಡ ಲಗತ್ತಿಸಬೇಕು. ಒಂದು ವೇಳೆ ಅರ್ಜಿದಾರನ ವಿರುದ್ಧ ಆರೋಪಗಳು ಕಂಡು ಬಂದರೆ, ಪ್ರಮಾಣ ಪತ್ರ ವಿತರಣೆ ಮಾಡುವುದಿಲ್ಲ. ಆದರೆ, ನಾರಾಯಣಸ್ವಾಮಿ ಮತ್ತು ಮಂಜುನಾಥ ಯಾವುದೇ ಅರ್ಜಿ ಸ್ವೀಕರಿಸಿದೆ, 163 ಮಂದಿಗೆ ನಕಲಿ ಪ್ರಮಾಣ ಪತ್ರ ವಿತರಿಸಿದ್ದಾರೆ.

ಮುಖ್ಯಪೇದೆ ನಾರಾಯಣಸ್ವಾಮಿ ತನ್ನ ಕಂಪ್ಯೂಟರ್‌ನಲ್ಲಿ ಪ್ರಮಾಣ ಪತ್ರದ ಮಾದರಿಯನ್ನು ಸಂಗ್ರಹಿಸಿಕೊಂಡು, ನಕಲಿ ಪ್ರಮಾಣ ಪತ್ರ ಸೃಷ್ಟಿಸುತ್ತಿದ್ದ. ಬಳಿಕ ಮಂಜುನಾಥ್‌ ಹಣ ಪಡೆದು ಅಗತ್ಯವಿದ್ದವರಿಗೆ ಅದನ್ನು ನೀಡುತ್ತಿದ್ದ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಅಕ್ರಮ ಪತ್ತೆಯಾದದ್ದು ಹೇಗೆ?: ಸಾರ್ವಜನಿಕರಿಗೆ ವಿತರಿಸುವ ಪ್ರತಿ ಪೊಲೀಸ್‌ ಪರಿಶೀಲನಾ ಪ್ರಮಾಣ ಪತ್ರದಲ್ಲಿ “ಹಾಲೋಗ್ರಾಂ’ ಅಂಟಿಸಲಾಗುತ್ತದೆ. ಆದರೆ, ಇತ್ತೀಚೆಗೆ ನಡೆದ ಲೆಕ್ಕ ಪರಿಶೀಲನೆ ವೇಳೆ ಅರ್ಜಿಗಳು ಹಾಗೂ ವಿತರಿಸಿದ ಹಾಲೋಗ್ರಾಂಗಳ ಸಂಖೆಯಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿತ್ತು.

ಅನುಮಾನಗೊಂಡ ಅಧಿಕಾರಿಗಳು ಆಂತರಿಕ ತನಿಖೆ ನಡೆಸಿದಾಗ ಇಬ್ಬರ ಕೃತ್ಯ ಬಯಲಾಗಿತ್ತು. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ಕುಮಾರ್‌ ಸೂಚನೆ ಮೇರೆಗೆ ಪೇದೆಗಳನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ನಕಲಿ ಪ್ರಮಾಣ ಪತ್ರ ಪಡೆದ ವ್ಯಕ್ತಿಗಳ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಅಧಿಕಾರಿ ಹೇಳಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.