‘ಹೆಂಡ್ತಿ’ ವಿಚಾರಕ್ಕೆ ಇಬ್ಬರು ಗಂಡಂದಿರ ಜಗಳ ಕೊಲೆಯಲ್ಲಿ ಅಂತ್ಯ!
Team Udayavani, Jan 24, 2020, 8:41 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಬೆಂಗಳೂರು: ಪತ್ನಿಯ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಮಹಿಳೆಯ ಮೊದಲನೇ ಪತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಾವಲ್ಭೈರಸಂದ್ರದಲ್ಲಿ ನಡೆದಿದೆ. ಶ್ರೀನಿವಾಸ ನಗರದ ಇರ್ಫಾನ್ ಕೊಲೆಯಾದವರು. ಕೊಲೆ ಆರೋಪಿ ತೌಫೀಕ್ ಎಂಬಾತನನ್ನು ಬಂಧಿಸಿರುವ ಡಿ.ಜೆ ಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಎಲೆಕ್ಟ್ರೀಶಿಯನ್ ಕೆಲಸ ಮಾಡುವ ಇರ್ಫಾನ್ ಕೆಲವು ವರ್ಷಗಳ ಹಿಂದೆ ತಸ್ಲಿಮಾ (ಹೆಸರು ಬದಲಿಸಲಾಗಿದೆ) ಎಂಬಾಕೆಯನ್ನು ಮದುವೆ ಆಗಿದ್ದು ಸಂಸಾರ ಮಾಡುತ್ತಿದ್ದ. ಕೌಟುಂಬಿಕ ಕಲಹದಿಂದ ಪತ್ನಿಯನ್ನು ಆತ ತೊರೆದಿದ್ದು ಬೇರೆ ಬೇರೆಯಾಗಿದ್ದರು.
ಆ ಬಳಿಕ ತಸ್ಲಿಮಾ ತೌಫೀಕ್ನನ್ನು ಮದುವೆಯಾಗಿ ಆತನೊಂದಿಗೆ ವಾಸಿಸುತ್ತಿದ್ದಳು. ಈ ವಿಚಾರವಾಗಿ ತೌಫೀಕ್ನೊಂದಿಗೆ ಇರ್ಫಾನ್ ಹಲವು ಬಾರಿ ಜಗಳ ಮಾಡಿದ್ದನು.
ಬುಧವಾರ ರಾತ್ರಿ ಪಾನಮತ್ತನಾಗಿದ್ದ ಇರ್ಫಾನ್ ಕಾವಲ್ ಭೈರಸಂದ್ರದ ಆಟೋ ನಿಲ್ದಾಣದಲ್ಲಿ ತೌಫೀಕ್ ಜತೆ ಜಗಳವಾಡಿದಾಗ ಇಬ್ಬರ ನಡುವೆ ಹೊಡೆದಾಟ ನಡೆದಿತ್ತು. ಈ ಸಂದರ್ಭದಲ್ಲಿ ತೌಫೀಕ್ ಚಾಕುವಿನಿಂದ ಇರ್ಫಾನ್ಗೆ ಹಲವು ಬಾರಿ ಇರಿದು ಪರಾರಿಯಾಗಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಇರ್ಫಾನ್ನನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ