ಕರುಳ ಕುಡಿಗೆ ಎರಡು ವರ್ಷ ಅಲೆದ ತಾಯಿ!


Team Udayavani, Oct 16, 2018, 6:00 AM IST

mother-baby.jpg

ಬೆಂಗಳೂರು: ಪತಿಯಿಂದ ದೂರವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಹಿಳೆ ಆಪ್ತ ಸ್ನೇಹಿತೆಯ ಸಾಂತ್ವನದ ಮಾತುಗಳನ್ನು ಕೇಳಿಸಿಕೊಂಡು ಆಕೆಯಿಂದಲೇ ನಂಬಿಕೆ ದ್ರೋಹಕ್ಕೆ ಒಳಗಾದ ನೈಜ ಕತೆ ಇದು!

ಚೈಲ್ಡ್‌ ಕೇರ್‌ ಸೆಂಟರ್‌ನಲ್ಲಿ ಇರಿಸುವುದಾಗಿ ಹೇಳಿ ಮೂರು ವರ್ಷದ ಮಗುವನ್ನು ಕರೆದೊಯ್ದ ಗೆಳತಿ ಮಂಗಳೂರಿನ ಸಂಬಂಧಿಯೊಬ್ಬರಿಗೆ ನೀಡಿ, ಹೆತ್ತ ಕರುಳೇ ಎರಡು ವರ್ಷಗಳ ಕಾಲ ಹುಡುಕಾಡುವಂತೆ ಮಾಡಿದ ಕರುಣಾಜನಕ ಘಟನೆ ಈಗ ಬೆಳಕಿಗೆ ಬಂದಿದೆ. ಕರುಳ ಕುಡಿ ಕಳೆದುಕೊಂಡ ನೋವಿನಲ್ಲಿ ವಾರವೆಲ್ಲ ಕೆಲಸ ಮಾಡಿ, ವಾರಾಂತ್ಯದಲ್ಲಿ ಹುಡುಕಾಟ ನಡೆಸಿದ ನಂತರ ಅಂತೂ ಪುಟಾಣಿ ಮಗು ತಾಯಿಯ ಮಡಿಲು ಸೇರಿಕೊಂಡಿದೆ. ಮಕ್ಕಳ ಸಹಾಯವಾಣಿಯ ಸಹಕಾರದಿಂದ ಪ್ರಕರಣ ಸುಖಾಂತ್ಯ ಕಂಡಿದೆ.

ಮಗು ಮಡಿಲು ಸೇರಿದ್ದೇಗೆ?:
ಬೆಂಗಳೂರಿನ ಪೀಣ್ಯ ನಿವಾಸಿ ಗಿರಿಜಾ (ಹೆಸರು ಬದಲಾಯಿಸಲಾಗಿದೆ) ಸ್ನೇಹಿತೆ ಹಾಸ್ಟೆಲ್‌ಗೆ ಸೇರಿಸುವ ಭರವಸೆ ನೀಡಿದ್ದಕ್ಕೆ ತನ್ನ ಗಂಡು ಮಗುವನ್ನು ಆಕೆಯ ಕೈಗೊಪ್ಪಿಸಿದ್ದರು. ಆದರೆ ಸ್ನೇಹಿತೆಯ ಲೆಕ್ಕಾಚಾರವೇ ಬೇರೆಯಾಗಿತ್ತು. ಆ ಮಗುವನ್ನು ಹಾಸ್ಟೆಲ್‌ಗೆ ಸೇರಿಸುವ ಉದ್ದೇಶ ಆಕೆ ಹೊಂದಿರಲಿಲ್ಲ. ಕೆಲ ದಿನಗಳ ಬಳಿಕ ಮಗುವನ್ನು ನೋಡಿ ಬರುವ ಇರಾದೆಯನ್ನು ಗಿರಿಜಾ ವ್ಯಕ್ತಪಡಿಸಿದಾಗ ಸ್ನೇಹಿತೆ ಏನೋ ಒಂದು ಸಬೂಬು ನೀಡಿ ದಿನ ಮುಂದೂಡಿದ್ದಳು. ಅದನ್ನೂ ಗಿರಿಜಾ ಇರಬಹುದೆಂದು ನಂಬಿದ್ದಳು. ಹೀಗೆ ಎರಡು ವರ್ಷ ಆಕೆಯ ಬಳಿ ಗೋಗರೆದರೂ ಮಗು ಮುಖ ನೋಡಲೂ ಸಾಧ್ಯವಾಗದೇ ಇದ್ದಾಗ ಬೆಂಗಳೂರು ಪೊಲೀಸ್‌ ಆಯುಕ್ತರ ಕಚೇರಿ ಪರಿಹಾರ ಕೇಂದ್ರದ ಮಕ್ಕಳ ಸಹಾಯವಾಣಿ ಮೊರೆ ಹೋದರು. ಮಾಹಿತಿ ಕಲೆಹಾಕಿದ ಸಹಾಯವಾಣಿ ಅಧಿಕಾರಿಗಳು ಅಂತೂ ಮಗುವನ್ನು ತಾಯಿ ಗಿರಿಜಾ ಅವರ ಮಡಿಲು ಸೇರಿಸಿದ್ದಾರೆ.

ಬೆಳಕಾದ ಸಹಾಯವಾಣಿ:
ಮಗುವಿನ ಮುಖವನ್ನೂ ನೋಡದೇ ಎರಡು ವರ್ಷ ಕಳೆದಿದೆ. ಹಾಸ್ಟೆಲ್‌ಗೆ ಸೇರಿಸಲೆಂದು ಮಗುವನ್ನು ಕೊಂಡೊಯ್ದ ಸ್ನೇಹಿತೆಯಿಂದ ನನ್ನ ಮಗುವನ್ನು ನನಗೆ ಕೊಡಿಸಿ. ಮಗುವನ್ನು ನನ್ನ ಮಡಿಲಿಗೆ ಒಪ್ಪಿಸಿ  ಎಂದು ಗಿರಿಜಾ ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಇತ್ತೀಚೆಗೆ ಮನವಿ ಸಲ್ಲಿಸಿದ್ದರು. ಕೂಡಲೇ ಈ ಬಗ್ಗೆ ದೂರು ದಾಖಲಿಸಿಕೊಂಡು ಮಗುವನ್ನು ಪಡೆದಿದ್ದ ಆಕೆಯ ಸ್ನೇಹಿತೆಯನ್ನು ಕರೆಸಿ ವಿಚಾರಣೆ ನಡೆಸಿದಾಗ ಮಂಗಳೂರಿನ ಉದ್ಯಮಿಯೊಬ್ಬರ ಕುಟುಂಬಕ್ಕೆ ನೀಡಿದ್ದಾಗಿ ಬಾಯ್ಬಿಟ್ಟಿದ್ದಾಳೆ.

ಅಚ್ಚರಿ ಸಂಗತಿ ಏನೆಂದರೆ ಮಗು ಪಡೆದ ದಂಪತಿ ಮತ್ತಾರೂ ಆಗಿರಲಿಲ್ಲ. ಮಗುವಿಲ್ಲದ ತನ್ನ ಸಹೋದರಿಯ ಕುಟುಂಬಕ್ಕೇ ಗಿರಿಜಾ ಅವರ ಗಂಡು ಮಗುವನ್ನು ನೀಡಿದ್ದರು. ಅದೇ ಕಾರಣಕ್ಕಾಗಿಯೇ ಎರಡು ವರ್ಷಗಳಿಂದ ಮಗು ಎಲ್ಲಿದೆ ಎಂದೂ ಹೇಳಿರಲಿಲ್ಲ. ಎಷ್ಟೇ ಗೋಗರೆದರೂ ಬಾಯ್ಬಿಟ್ಟಿರಲಿಲ್ಲ.ಆದರೆ, ವಿಚಾರಣೆ ವೇಳೆ ಈ ಮಾಹಿತಿ ಖಚಿತಪಡಿಸಿಕೊಂಡ ಆಪ್ತ ಸಮಾಲೋಚಕ ಸಿಬ್ಬಂದಿ, ಆಕೆಯ ಮೂಲಕವೇ ಮಗುವನ್ನು ನಿಯಮಬಾಹಿರವಾಗಿ ಇಟ್ಟುಕೊಂಡಿದ್ದ ಮಂಗಳೂರಿನಲ್ಲಿದ್ದ ದಂಪತಿಯನ್ನು ಕರೆಸಿ ಮಗುವನ್ನು ಗಿರಿಜಾ ಅವರಿಗೆ ಒಪ್ಪಿಸುವಂತೆ ಹೇಳಿದ್ದಾರೆ. ಆಗಲೂ ಈ ದಂಪತಿ ಇದಕ್ಕೆ ಹಿಂದೇಟು ಹಾಕಿದ್ದಾರೆ. ಮಗು ಆರಂಭದಲ್ಲಿ ತಾಯಿಯ ಗುರುತು ಹಿಡಿಯದಿದ್ದರೂ, ಬಳಿಕ ತಾಯಿಯ ಮಡಿಲು ಸೇರಿಕೊಂಡಿದೆ. ತಾಯ್ತನದ ಪ್ರೀತಿಯೇ ಗೆದ್ದಿದ್ದು, ಮಮತೆಯ ಕಣ್ಣೀರಿಗೆ ಮಗುವಿನ ಮನಸ್ಸು ಓಗೊಟ್ಟಿದೆ.

ಕಾನೂನು ಹೆದರಿ ಮಗು ಒಪ್ಪಿಸಿದ ದಂಪತಿ
ಎರಡು ವರ್ಷ ಮಗುವನ್ನು ಪೋಷಿಸಿದ್ದ ದಂಪತಿಗೆ, ಮತ್ತೂಬ್ಬರ ಮಕ್ಕಳನ್ನು ಇಟ್ಟುಕೊಳ್ಳುವುದು ಕಾನೂನುಬಾಹಿರ. ಕಾನೂನು ಪ್ರಕಾರವೇ ದತ್ತು ಪಡೆದುಕೊಳ್ಳಬೇಕು. ಈಗ ಮಗುವನ್ನು ತಾಯಿ ವಶಕ್ಕೆ ನೀಡಲೇಬೇಕು ಎಂದು ಸಹಾಯವಾಣಿ ಸಿಬ್ಬಂದಿ ಮನವೊಲಿಸಿದ್ದಾರೆ. ನಿಯಮಗಳ ಅನ್ವಯ ಮಕ್ಕಳ ಕಲ್ಯಾಣ ಸಮಿತಿ ಸಿಬ್ಬಂದಿ ಗಿರಿಜಾ ಅವರಿಂದ ಕೆಲವು ದಾಖಲೆಗಳನ್ನು ಪಡೆದು ಮಗುವನ್ನು ಒಪ್ಪಿಸಿದ್ದಾರೆ.

ಈ ಬಗ್ಗೆ ಉದಯವಾಣಿಗೆ ಪ್ರತಿಕ್ರಿಯೆ ನೀಡಿದ ಮಕ್ಕಳ ಸಹಾಯವಾಣಿ ಕೇಂದ್ರದ ಆಪ್ತ ಸಮಾಲೋಚಕಿ ಪ್ರೀತಿ ಬಾಳಿಗ, ಮಗುವನ್ನು ಸರಿಯಾಗಿ ನೋಡಿಕೊಳ್ಳಿ. ಒಂದು ತಿಂಗಳ ಬಳಿಕ ಮಗು ಸಮೇತ ಹಾಜರಾಗಬೇಕು ಎಂದು ಗಿರಿಜಾ ಅವರಿಗೆ ಸೂಚಿಸಿದ್ದೇವೆ ಎಂದಿದ್ದಾರೆ.

ವಾರ ಪೂರ್ತಿ ಕೆಲಸ, ರಜೆಯಲ್ಲಿ ಹುಡುಕಾಟ!
ಚನ್ನಪಟ್ಟಣ ಮೂಲದ ಗಿರಿಜಾ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ 2016ರಲ್ಲಿ ಗಂಡನಿಂದ ದೂರವಾಗಿ 3 ವರ್ಷದ ಮಗು ಸೌರಭ್‌ (ಹೆಸರು ಬದಲಾಯಿಸಲಾಗಿದೆ) ತುತ್ತಿನ ಚೀಲ ತುಂಬಿಸಿಕೊಳ್ಳುವ ಸಲುವಾಗಿ ಪೀಣ್ಯದ ಗಾರ್ಮೆಂಟ್ಸ್‌ವೊಂದಕ್ಕೆ ಕೆಲಸಕ್ಕೆ ಸೇರಿಕೊಂಡಿದ್ದರು. ಮಗುವನ್ನು ನೋಡಿಕೊಂಡು ಕೆಲಸಕ್ಕೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಸಂದರ್ಭದಲ್ಲಿ ಪರಿಚಯವಾದ ಗೆಳತಿ ಅನುಪಮಾ (ಹೆಸರು ಬದಲಾಯಿಸಲಾಗಿದೆ) ಪರಿಚಯವಿರುವ  ಚೈಲ್ಡ್‌ ಕೇರ್‌ಗೆ ಸೇರಿಸುವುದಾಗಿ ಹೇಳಿ ಮಗು ಕರೆದೊಯ್ದಿದ್ದಳು. 15 ದಿನಗಳ ಬಳಿಕ ಮಗುವನ್ನು ನೋಡಿಕೊಂಡು ಬರೋಣ ಎಂದಾಗ,ಚೈಲ್ಡ್‌ ಕೇರ್‌ ದೂರವಿದೆ. ಮತ್ತೆ ಎಂದಾದರೂ ಹೋಗೋಣ ಎಂದು ಸಬೂಬು ಹೇಳಿದ್ದಾರೆ. ಎರಡು ಮೂರು ತಿಂಗಳು ಹೀಗೆ ಯಾಮಾರಿಸಿದ್ದಾಳೆ. ನೊಂದ ಗಿರಿಜಾ, ವಾರವೆಲ್ಲ ಕೆಲಸ ಮಾಡಿ, ರಜಾ ದಿನಗಳಲ್ಲಿ ಬೆಂಗಳೂರಿನಲ್ಲಿರುವ ಚೈಲ್ಡ್‌ ಕೇರ್‌ಗಳಿಗೆಲ್ಲ ಭೇಟಿ ನೀಡಿದ್ದಾರೆ. ಆದರೆ ಮಗು ಸಿಗಲಿಲ್ಲ. ಇಷ್ಟೆಲ್ಲಾ ಪ್ರಹಸನದ ಬಳಿಕ ಮಂಗಳೂರಿನಲ್ಲಿ ಅನುಪಮಾ ಅವರ ಸಹೋದರಿಗೆ ಮಕ್ಕಳಿರಲಿಲ್ಲ ಎಂಬ ಸಂಗತಿ ಗೊತ್ತಾಗಿ, ಅಲ್ಲಿ ಹೋಗಿ ನೋಡಿದಾಗ ಮಗು ಇತ್ತು. ಆದರೆ, ಅವರು ಸುತಾರಾಂ ವಾಪಸ್‌ ನೀಡಲು ಒಪ್ಪಿರಲಿಲ್ಲ. ಹೀಗಾಗಿ ಅಂತಿಮವಾಗಿ ಮಕ್ಕಳ ಸಹಾಯವಾಣಿ ಕೇಂದ್ರದ ಮೊರೆ ಹೋಗಿದ್ದರು.

ಮಕ್ಕಳನ್ನು ಯಾರಧ್ದೋ ಮಾತು ನಂಬಿ ಅವರ ವಶಕ್ಕೆ ಒಪ್ಪಿಸಬಾರದು. ಕಾನೂನು ನಿಯಮಗಳನ್ನು ಉಲ್ಲಂಘಿಸಿ ಮತ್ತೂಬ್ಬರ ಮಕ್ಕಳನ್ನು ಮನೆಯಲ್ಲಿಟ್ಟುಕೊಳ್ಳುವುದು, ಪೋಷಿಸುವುದು ಶಿಕ್ಷಾರ್ಹ. ಈ ಬಗ್ಗೆ ಜನರು ಅರಿತುಕೊಳ್ಳಬೇಕು.
– ರಾಣಿ ಶೆಟ್ಟಿ, ಮುಖ್ಯಸ್ಥೆ, ಪರಿಹಾರ ಕೇಂದ್ರ, ನಗರ ಪೊಲೀಸ್‌ ಆಯುಕ್ತರ ಕಚೇರಿ

– ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.