ಪಾಟೀಲರ ಪಾತಾಳಗಂಗೆ ಬೇಡವೆಂದ ಉಗ್ರಪ್ಪ!
Team Udayavani, Jun 15, 2017, 11:21 AM IST
ವಿಧಾನಪರಿಷತ್ತು: ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲರ ಉದ್ದೇಶಿತ “ಪಾತಾಳಗಂಗೆ’ ಯೋಜನೆಗೆ ಆಡಳಿತ ಪಕ್ಷದವರೇ ವಿರೋಧ ವ್ಯಕ್ತಪಡಿಸಿದ್ದು, ಪಾತಾಳಗಂಗೆ ಯೋಜನೆಯಿಂದ ಪರಿಸರ ಉಳಿಸಲು ಸಾಧ್ಯವಿಲ್ಲ. ಕರ್ನಾಟಕ ರಾಜಸ್ಥಾನ ಆಗಬಾರದು ಎಂದಾದರೆ ಈ ಯೋಜನೆಯನ್ನು ಕೈಬಿಡಬೇಕು ಎಂದು ಕಾಂಗ್ರೆಸ್ ಸದಸ್ಯ ವಿ.ಎಸ್.ಉಗ್ರಪ್ಪ ಒತ್ತಾಯಿಸಿದ್ದಾರೆ.
ಬರದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಾತಾಳಗಂಗೆ ಯೋಜನೆ ಜಾರಿಗೆ ಬಂದರೆ
ವಾತಾವರಣದಲ್ಲಿನ ತೇವಾಂಶ ಕಡಿಮೆ ಆಗಿ ಗಿಡ-ಮರ ಬೆಳೆಯುವುದು ಕಷ್ಟವಾಗುತ್ತದೆ. ಬರ ಪರಿಸ್ಥಿತಿ ಎದುರಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾದರೆ ರಾಷ್ಟ್ರೀಯ ಜಲನೀತಿ, ರಾಷ್ಟ್ರೀಯ ವಿಪತ್ತು ನೀತಿ ರೂಪಿಸಬೇಕು. ಗಂಗಾ-ಕಾವೇರಿ ನದಿ ಜೋಡಣೆ ಕಾರ್ಯಕ್ಕೆ ಒತ್ತು ನೀಡಬೇಕು ಹಾಗೂ ಪರಿಸರ ಉಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು
ಕೈಗೊಳ್ಳಬೇಕು. ಸಾಧ್ಯವಾದರೆ ಕೊಳವೆಬಾವಿಗಳನ್ನು ನಿಷೇಧಿಸಬೇಕು ಎಂದು ಉಗ್ರಪ್ಪ ಸಲಹೆ ನೀಡಿದರು.
ಒಂದು ಬಾರಿ ಸಾಲ ಮನ್ನಾ ಮಾಡಿ: ಅಂತಾರಾಷ್ಟ್ರೀಯ ಮಾರುಕಟ್ಟೆ ಯಲ್ಲಿ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 139 ಡಾಲರ್ ಇದ್ದದ್ದು, ಅದೃಷ್ಟ ಎಂಬಂತೆ ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿ ಬ್ಯಾರಲ್ಗೆ 40 ಡಾಲರ್ಗೆ ಇಳಿದಿದೆ.
ಇದರಿಂದ ಕೇಂದ್ರ ಸರ್ಕಾರಕ್ಕೆ ಪ್ರತಿ ವರ್ಷ ಅಂದಾಜು 2 ಲಕ್ಷ ಕೋಟಿ ರೂ. ಆದಾಯ ಬರುತ್ತಿದೆ. ಈ ಹಣವನ್ನು ಬಳಸಿಕೊಂಡು ಒಂದು ಬಾರಿಗೆ ಎಂಬಂತೆ ರೈತರ ಸಾಲ ಮನ್ನಾ ಮಾಡುವಂತೆ ಉಗ್ರಪ್ಪ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ