ಬೌರಿಂಗ್‌ ಕ್ಲಬ್‌ನ ಅನಧಿಕೃತ ಕಟ್ಟಡ ತೆರವು


Team Udayavani, Dec 14, 2019, 10:40 AM IST

bng-tdy-3

ಬೆಂಗಳೂರು: ಬೌರಿಂಗ್‌ ಇನ್ಸ್‌ಟಿಟ್ಯೂಟ್‌ ಕ್ಲಬ್‌ “ಝಡ್‌’ ವಲಯದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ತಿಳಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆ ಅನುಮತಿ ಪಡೆಯದೇ ಅನಧಿಕೃತವಾಗಿ ಕಟ್ಟಲಾಗಿದ್ದ ಕಾಂಪೌಂಡ್‌ ಅನ್ನು ಗುರುವಾರ ತೆರವುಗೊಳಿಸಲಾಗಿದೆ. ಬೌರಿಂಗ್‌ ಇನ್ಸ್‌ಟಿಟ್ಯೂಟ್‌ ಕ್ಲಬ್‌ಗ ಮತ್ತೂಮ್ಮೆ ನೋಟಿಸ್‌ ನೀಡಿ, ನಂತರ ಕಟ್ಟಡ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

ಬೌರಿಂಗ್‌ ಇನ್‌ಸ್ಟಿಟ್ಯೂಟ್‌ ಕ್ಲಬ್‌ಗ ಗುತ್ತಿಗೆ ನೀಡುವ ಸಂದರ್ಭದಲ್ಲಿ 10 ಎಕರೆ ಭೂಮಿಯನ್ನು ಎಕ್ಸ್‌, ವೈ, ಝಡ್‌ ಎಂಬ ಮೂರು ವಿಭಾಗವಾಗಿ ವರ್ಗೀಕರಿಸ ಲಾಗಿತ್ತು. ಎಕ್ಸ್‌ ಎಂದು ಗುರುತಿಸಲಾಗಿರುವ ಪ್ರದೇಶವು ಉದ್ಯಾನವಾಗಿದ್ದು, ಪಾಲಿಕೆ ವತಿಯಿಂದ ನಿರ್ವಹಣೆ ಮಾಡಲಾಗುತ್ತದೆ. ವೈ ಎಂದು ಗುರುತಿಸಲಾಗಿರುವ ಪ್ರದೇಶದಲ್ಲಿ ಬ್ಯಾಡ್‌ಮಿಂಟನ್‌ ಹಾಲ್‌, ಕಾಟೇಜ್‌ಗಳು, ವಸತಿಗೃಹಗಳು ಹಾಗೂ ಕಾರು ನಿಲುಗಡೆಗೆ ಅವಕಾಶ ನೀಡಲಾಗುತ್ತದೆ. ಝಡ್‌ ವಲಯದಲ್ಲಿ ಬೌರಿಂಗ್‌ ಇನ್ಸ್‌ಟಿಟ್ಯೂಟ್‌ ಕ್ಲಬ್‌ನ ಮುಖ್ಯ ಕಟ್ಟಡ ಎಂದು ಗುರುತಿಸಲಾಗಿತ್ತು. ಆದರೆ, ಪಾಲಿಕೆ ಅನುಮತಿ ಪಡೆಯದೇ ಝಡ್‌ ವಲಯದಲ್ಲಿ ಅನಧಿಕೃತ ಕಟ್ಟಡಗಳನ್ನು ಕಟ್ಟಲಾಗಿದೆ. ನೋಟಿಸ್‌ ನೀಡಿದ್ದರೂ ಎಚ್ಚೆತ್ತುಕೊಂಡಿಲ್ಲ. ಆದ್ದರಿಂದ ಕಾಂಪೌಂಡ್‌ ತೆರವುಗೊಳಿಸಲಾಗಿದೆ ಎಂದರು.

ಏನಿದು ಪ್ರಕರಣ?: ಶಾಂತಿನಗರ ಉಪವಿಭಾಗದ ವ್ಯಾಪ್ತಿಯ ಸೇಂಟ್‌ಮಾರ್ಕ್ಸ್ ರಸ್ತೆಯಲ್ಲಿರುವ ಬೌರಿಂಗ್‌ ಇನ್ಸ್‌ಟಿಟ್ಯೂಟ್‌ ಕ್ಲಬ್‌ಗ 99 ವರ್ಷದ ವರೆಗೆ 10 ಎಕರೆ ಜಮೀನನ್ನು 1956ರಲ್ಲಿ ಬೆಂಗಳೂರು ಸಿಟಿ ಕಾರ್ಪೊ ರೇಷನ್‌ ಗುತ್ತಿಗೆ ನೀಡಿತ್ತು. ಯಾರಿಗೂ ಉಪ ಗುತ್ತಿಗೆ ಯಾಗಲಿ, ಮಾರಾಟ ಮಾಡುವುದಾಗಲಿ ಮಾಡಿದರೆ ಗುತ್ತಿಗೆಯನ್ನು ರದ್ದುಗೊಳಿಸುವುದಾಗಿ ಷರತ್ತು ವಿಧಿಸಲಾಗಿತ್ತು. ಆದರೆ, ಬೌರಿಂಗ್‌ ಇನ್ಸ್‌ಟಿಟ್ಯೂಟ್‌ ಕ್ಲಬ್‌ ಪೆಟ್ರೋಲ್‌ ಬಂಕ್‌ ನಡೆಸಲು 15 ಸಾವಿರ ಚ. ಅಡಿ ಜಾಗವನ್ನು ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ಗೆ 20 ವರ್ಷದವರೆಗೆ ಕಾನೂನು ಬಾಹಿರವಾಗಿ ಉಪಗುತ್ತಿಗೆ ನೀಡಿದೆ.

ನಂತರ 1989 ಮತ್ತು 2009ರಲ್ಲಿ ಇದೇ ಕಂಪನಿಗೆ ಉಪ ಗುತ್ತಿಗೆ ನವೀಕರಣ ಮಾಡುವ ಸಂದರ್ಭದಲ್ಲಿ ಸರ್ಕಾರದ ಅನುಮೋದನೆ ಪಡೆಯದೇ ಗುತ್ತಿಗೆ ನೀಡಲಾಗಿತ್ತು ಹಾಗೂ ಅದರಿಂದ ಬಂದ ಬಾಡಿಗೆ ಹಣವನ್ನೂ ಸರ್ಕಾರಕ್ಕೆ ಕಟ್ಟಿಲ್ಲ. ಮೂಲ ಒಪ್ಪಂದದ ಪ್ರಕಾರ “ವೈ’ ಪ್ರದೇಶದಲ್ಲಿ ಮಾತ್ರ ಕಟ್ಟಡಗಳನ್ನು ಕಟ್ಟಬೇಕು. ಆದರೆ “ಝಡ್‌’ ಪ್ರದೇಶದಲ್ಲಿ ಕಟ್ಟಡಗಳನ್ನು ಕಟ್ಟಿದ್ದು, ಭೂ ಮಂಜೂರಾತಿ ನಿಯಮ ಮತ್ತು ಷರತ್ತುಗಳನ್ನು ಉಲ್ಲಂಘಿಸಲಾಗಿದೆ. ಪೆಟ್ರೋಲ್‌ ಬಂಕ್‌ ಮಾತ್ರವಲ್ಲದೇ ಹಾಪ್‌ಕಾಮ್ಸ್‌, ಕೇಕ್‌ಶಾಪ್‌, ಚಾಟ್‌ ಕೌಂಟರ್‌, ಕ್ಯಾಶ್‌ ಕೌಂಟರ್‌, ಕ್ಯಾಂಟೀನ್‌ ಸೇರಿದಂತೆ ಮಳಿಗೆ ನಿರ್ಮಾಣಕ್ಕೆ ಉಪಗುತ್ತಿಗೆ ನೀಡಲಾಗಿದ್ದು, ಇದರಿಂದಲೂ ಸರ್ಕಾರಕ್ಕೆ ಆದಾಯ ಬಂದಿಲ್ಲ. ಕ್ಲಬ್‌ 10 ಎಕರೆಗೆ ವಾರ್ಷಿಕ ಬಾಡಿಗೆಯಾಗಿ 30 ರೂ. ಪಾವತಿಸುತ್ತಿದ್ದು, ಪೆಟ್ರೋಲ್‌ ಬಂಕ್‌ನಿಂದ ಪ್ರತಿ ತಿಂಗಳು 2.75 ಲಕ್ಷ ರೂ. ಪಡೆಯುತ್ತಿರುವುದಾಗಿ ಆರೋಪಗಳು ಕೇಳಿ ಬರುತ್ತಿದ್ದವು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.