ಮುಗಿಯದ ರಕ್ಷಣಾ ಇಲಾಖೆ-ಪಾಲಿಕೆ ತಿಕ್ಕಾಟ
Team Udayavani, Aug 26, 2018, 12:26 PM IST
ಬೆಂಗಳೂರು: ಬಿಬಿಎಂಪಿ ಹಾಗೂ ರಕ್ಷಣಾ ಇಲಾಖೆಯ ನಡುವಿನ ತಿಕ್ಕಾಟ ಮುಂದುವರಿದಿದ್ದು, ರಕ್ಷಣಾ ಇಲಾಖೆಯ ಭೂಮಿ ದೊರೆಯದೆ ಕಾಮಗಾರಿ ಆರಂಭಿಸಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ ಕೆಲ ದಿನಗಳ ಹಿಂದಷ್ಟೇ ಬಿಬಿಎಂಪಿ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಬೇಕಾಗುವ ರಕ್ಷಣಾ ಇಲಾಖೆ ಜಾಗ ಹಸ್ತಾಂತರಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅನುಮತಿದ್ದು, ಈ ಕುರಿತಂತೆ ರಾಜ್ಯ ಸಕಾರದೊಂದಿಗೂ ಒಡಂಬಡಿಕೆ ಮಾಡಿಕೊಂಡಿದ್ದರು.
ಆ ಹಿನ್ನೆಲೆಯಲ್ಲಿ ಶನಿವಾರ 16 ಕೋಟಿ ರೂ. ವೆಚ್ಚದಲ್ಲಿ ಕಾವಲ್ಭೈರಸಂದ್ರದಿಂದ ಮೋದಿ ಗಾರ್ಡನ್ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯ ನೆರವೇರಿಸಲು ಪಾಲಿಕೆ ಸಿದ್ಧತೆ ನಡೆಸಿಕೊಂಡಿದ್ದರು. ಆದರೆ, ರಕ್ಷಣಾ ಇಲಾಖೆ ಅಧಿಕಾರಿಗಳು ಕೇಂದ್ರ ರಕ್ಷಣಾ ಇಲಾಖೆಯಿಂದ ನಮಗೆ ಯಾವುದೇ ಲಿಖೀತ ಆದೇಶ ಬಂದಿಲ್ಲ. ಹೀಗಾಗಿ ಸದ್ಯಕ್ಕೆ ಕಾಮಗಾರಿ ನಡೆಸುವುದು ಬೇಡ ಎಂದು ತಿಳಿಸಿದ್ದಾರೆ.
ರಕ್ಷಣಾ ಇಲಾಖೆ ಅಧಿಕಾರಿಗಳ ವಿರೋಧದಿಂದಾಗಿ ಬಿಬಿಎಂಪಿ ಶನಿವಾರದ ರಸ್ತೆಗೆ ಶಂಕುಸ್ಥಾಪನೆ ನೆರವೇರಿಸದೆ ವಾಪಸಾಗಿದ್ದಾರೆ. ಅಲ್ಲದೆ, ಈ ಕುರಿತಂತೆ ಸೋಮವಾರ ಕೇಂದ್ರ ರಕ್ಷಣಾ ಸಚಿವಾಲಯದೊಂದಿಗೆ ಮಾತನಾಡಲು ಬಿಬಿಎಂಪಿ ನಿರ್ಧರಿಸಿದ್ದು, ಅಲ್ಲಿಯವರೆಗೆ ರಕ್ಷಣಾ ಇಲಾಖೆ ಜಾಗದಲ್ಲಿ ನಡೆಯಬೇಕಿದ್ದ ಕಾಮಗಾರಿಗಳು ಆರಂಭದಿರಲು ನಿರ್ಧರಿಸಿದೆ.
ಜಾಗ ಹಸ್ತಾಂತರ ಕುರಿತು ಸೂಕ್ತ ಆದೇಶ ಬಂದಿಲ್ಲ ಎಂದು ರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಶನಿವಾರ ನಡೆಯಬೇಕಿದ್ದ ಕಾವಲ… ಭೈರಸಂದ್ರದಿಂದ ಮೋದಿ ಗಾರ್ಡನ್ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನಡೆದಿಲ್ಲ. ಸೋಮವಾರ ಈ ಕುರಿತು ರಕ್ಷಣಾ ಇಲಾಖೆ ಕಾರ್ಯದರ್ಶಿಗಳೊಂದಿಗೆ ಚರ್ಚೆ ನಡೆಸಲಾಗುವುದು.
-ಸಂಪತ್ರಾಜ್, ಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ