ಕೆರೆ ಅಭಿವೃದ್ಧಿಗೆ ಅವೈಜ್ಞಾನಿಕ ಮಾರ್ಗ: ಸ್ಥಳೀಯರು ಗರಂ


Team Udayavani, Aug 7, 2017, 1:23 PM IST

kagadasapura-lake.jpg

ಬೆಂಗಳೂರು: ಅವೈಜ್ಞಾನಿಕವಾಗಿ ಕೆರೆಯನ್ನು ಅಭಿವೃದ್ಧಿಪಡಿಸಲು ಮುಂದಾಗಿರುವ ಬಿಬಿಎಂಪಿಯ ಕ್ರಮವನ್ನು ಖಂಡಿಸಿ ಕಗ್ಗದಾಸಪುರ ಕೆರೆಯ ಸುತ್ತಮುತ್ತಲಿನ ಭಾಗದ ನಿವಾಸಿಗಳು ಕೆರೆಯಲ್ಲಿ ಹೂಳೆತ್ತುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. 

ಕಗ್ಗದಾಸಪುರ ಕೆರೆಯ ಅಭಿವೃದ್ಧಿಗಾಗಿ ಈಗಾಗಲೇ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ. ಆದರೆ, ಅಧಿಕಾರಿಗಳು ಯೋಜನೆ ವರದಿಯನ್ನು ಬದಿಗಿಟ್ಟು ತಮಗೆ ಇಷ್ಟ ಬಂದ ಹಾಗೆ ಕೆರೆಯನ್ನು ಅಭಿವೃದ್ಧಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಸುತ್ತಮುತ್ತಲಿನ ಭಾಗಗಳ ನಿವಾಸಿಗಳು ಕೆರೆಯಲ್ಲಿನ ಹೂಳು ಹಾಗೂ ಜೊಂಡು ತೆರವುಗೊಳಿಸುವ ಕಾರ್ಯಕ್ಕೆ ಮುಂದಾದರು. 

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬೈರಸಂದ್ರ ನಿವಾಸಿ ಮಂಜುನಾಥ್‌ ಅವರು, ಕೆರೆಯ ಅಭಿವೃದ್ಧಿಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಈಗಾಗಲೇ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ. ಆದರೆ, ಅಧಿಕಾರಿಗಳು ವರದಿಯಲ್ಲಿ ಅಂಶಗಳನ್ನು ಪಾಲನೆ ಮಾಡದೆ ತಮಗೆ ಬೇಕಾದ ರೀತಿಯಲ್ಲಿ ಅಭಿವೃದ್ಧಿಪಡಿಸುತ್ತಿದ್ದು, ಪರಿಸ್ಥಿತಿ ಮುಂದುವರಿಸಿದರೆ ಬೆಳ್ಳಂದೂರು ಕೆರೆಯ ಸ್ಥಿತಿಗೆ ಕಗ್ಗದಾಸಪುರ ಕೆರೆಯೂ ಬರಲಿದೆ ಎಂದು ಆರೋಪಿಸಿದರು. 

ಯಾವುದೇ ಕೆರೆ ಅಭಿವೃದ್ಧಿಪಡಿಸುವ ಮೊದಲಿಗೆ ಕೆರೆಯಲ್ಲಿ ಜೊಂಡು, ಹುಲ್ಲು ಹಾಗೂ ಹೂಳೆತ್ತಿ ದಂಡೆ ರಚಿಸಬೇಕು. ಆದರೆ, ಅಧಿಕಾರಿಗಳು ಕೆರೆಯಲ್ಲಿನ ಹೂಳೆತ್ತುವ ಬದಲಿಗೆ ಬೇರೆ ಕಡೆಯಿಂದ ಮಣ್ಣು ತಂದು ಕೆರೆ ದಂಡೆಯನ್ನು ನಿರ್ಮಿಸಿ ಅಲ್ಲಿ ವಾಕಿಂಗ್‌ ಟ್ರ್ಯಾಕ್‌ ನಿರ್ಮಿಸಲು ಮುಂದಾಗಿದ್ದಾರೆ. ಮೊದಲು ಕೆರೆಯನ್ನು ಸ್ವತ್ಛಗೊಳಿಸಿದ ನಂತರ ಇಂತಹ ಕೆಲಸಗಳಿಗೆ ಅಧಿಕಾರಿಗಳು ಮುಂದಾಗಲಿ ಎಂದು ತಿಳಿಸಿದರು. 

ಕಗ್ಗದಾಸಪುರ ನಿವಾಸಿಯಾಸ ಸುರೇಶ್‌ ಅವರು ಮಾತನಾಡಿ, ಕೆರೆಯಲ್ಲಿ ಈಗಾಗಲೇ ನೊರೆ ಸಮಸ್ಯೆ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇಂತಹ ಸಂದರ್ಭದಲ್ಲಿ ಕೆರೆಯನ್ನು ಸ್ವತ್ಛಗೊಳಿಸಲು ಕ್ರಮಕೈಗೊಳ್ಳುವ ಬದಲಿಗೆ ಅಧಿಕಾರಿಗಳು ಮೇಲ್ನೋಟಕ್ಕೆ ಕಾಣುವ ಕೆರೆಗಳನ್ನು ಮಾಡಲು ಮುಂದಾಗಿರುದು ಖಂಡನೀಯ ಎಂದು ಆರೋಪಿಸಿದ್ದಾರೆ. 

ಭಾನುವಾರ ಸುಮಾರು 50ಕ್ಕೂ ಹೆಚ್ಚು ನಿವಾಸಿಗಳು ಕೆರೆಗೆ ಭೇಟಿ ಕೆರೆಯಲ್ಲಿನ ಜೊಂಡು ತೆರವುಗೊಳಿಸಲು ಮುಂದಾದರು. ಕಳೆದ ಐದು ವಾರಗಳಿಂದ ಇಂತಹ ಕೆಲಸವನ್ನು ಮಾಡಿಕೊಂಡು ಬಂದಿದ್ದು, ಕೆರೆಯನ್ನು ಪ್ರವೇಶಿಸಿಲು ನಿವಾಸಿಗಳೇ ಒಂದು ಬೋಟು ಮಾಡಿಕೊಂಡಿದ್ದಾರೆ. 

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.