ವಿವಿಗಳಲ್ಲಿ ಸಂಗೀತಗಾರರು ತಯಾರಾಗುತ್ತಿಲ್ಲ: ಕಂಬಾರ
Team Udayavani, Mar 8, 2017, 11:44 AM IST
ಬೆಂಗಳೂರು: ಸಂಗೀತ ಕಲಿಕೆಗೆ ಒಂದು ಸಾಂಪ್ರದಾ ಯಿಕ ವಿಧಾನವಿದೆ, ಆದರೆ, ಇಂದು ಬಹುತೇಕ ವಿಶ್ವವಿದ್ಯಾಲಯಗಳಲ್ಲಿರುವ ಸಂಗೀತ ವಿಭಾಗಗಳು ಅದನ್ನು ಪಾಲಿಸುತ್ತಿಲ್ಲ ಎಂದು ಸಾಹಿತಿ ಡಾ.ಚಂದ್ರಶೇಖರ ಕಂಬಾರ ಬೇಸರ ವ್ಯಕ್ತಪಡಿಸಿದರು.
ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮಂಗಳವಾರ ಕರ್ನಾಟಕ ಸಾಮಾನ್ಯಜ್ಞಾನ ಅಕಾಡೆಮಿಯ 12ನೇ ವರ್ಷದ ಸಂಭ್ರಮಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, “ವಿಶ್ವವಿದ್ಯಾಲಯಗಳಲ್ಲಿ ಸಂಗೀತ ಪದವಿ ಪಡೆದವರು ಕೇವಲ ಪದವೀಧರರಾಗುತ್ತಿದ್ದಾರೆಯೇ ಹೊರತು ಸಂಗೀತಗಾರರಾಗಿ ರೂಪುಗೊಳ್ಳುತ್ತಿಲ್ಲ,” ಎಂದು ಹೇಳಿದರು.
ಸರ್ಕಾರಗಳು ಬದಲಾದಂತೆ ಶಿಕ್ಷಣ ವ್ಯವಸ್ಥೆಯಲ್ಲೂ ಬದಲಾವಣೆ ಆಗುತ್ತಿದೆ. ಶೈಕ್ಷಣಿಕ ತಿದ್ದುಪಡಿಗಳನ್ನು ತರುವಾಗ ಶಿಕ್ಷಕರ ಅಭಿಪ್ರಾಯ ಕೇಳುವ ವ್ಯವಸ್ಥೆ ನಿರ್ಮಾಣವಾಗಬೇಕು. ಶಿಕ್ಷಣಕ್ಕೆ ಸಂಬಂಧಿಸಿದ ಕಾಯಿದೆ ಜಾರಿಯಾಗುವಾಗ ಶಿಕ್ಷಕರಿಗೆ ಮತದಾನ ಮಾಡುವ ಅವಕಾಶ ಕಲ್ಪಿಸಬೇಕು,” ಎಂದು ಅವರು ಅಭಿಪ್ರಾಯಪಟ್ಟರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಮಾತನಾಡಿದರು. ಮಾಜಿ ಉಪಸಭಾಪತಿ ಪುಟ್ಟಣ್ಣ, ಮಾಜಿ ಸಚಿವೆ ಬಿ.ಟಿ. ಲಲಿತಾನಾಯಕ್, ಕವಿ ಪ್ರೊ.ಎಲ್.ಎನ್. ಮುಕುಂದರಾಜ್, ಸಾಮಾನ್ಯಜ್ಞಾನ ಅಕಾಡೆಮಿ ಅಧ್ಯಕ್ಷ ಹೊ.ನ. ನೀಲಕಂಠೇಗೌಡ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್