ನಿಯಮ ಬಾಹಿರ ಜಾಬ್‌ಕೋಡ್‌


Team Udayavani, Feb 16, 2019, 6:30 AM IST

niyama.jpg

ಬೆಂಗಳೂರು: ಸರ್ಕಾರ ಅನುದಾನ ಬಿಡುಗಡೆ ಮಾಡುವ ಮೊದಲೇ ಆಯ್ದ ವಿಧಾನಸಭಾ ಕ್ಷೇತ್ರಗಳಿಗೆ 55 ಕೋಟಿ ರೂ.ಗಳ ಜಾಬ್‌ಕೋಡ್‌ ನೀಡಿ ಕಾಮಗಾರಿ ಆರಂಭಿಸಿದ್ದು, ಕೂಡಲೇ ಜಾಬ್‌ಕೋಡ್‌ ಹಿಂಪಡೆಯಬೇಕೆಂದು ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ ಆಗ್ರಹಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಣಕಾಸು ಆಯೋಗ (ಎಸ್‌ಎಫ್ಸಿ) ಅನುದಾನದಡಿ ನಡೆದ ಹಂಚಿಕೆಯಲ್ಲಿ ಈಗಾಗಲೇ ತಾರತಮ್ಯ ಮಾಡುತ್ತಿರುವ ಕಾಂಗ್ರೆಸ್‌-ಜೆಡಿಎಸ್‌ ಆಡಳಿತ, ಇದೀಗ ಸರ್ಕಾರದ ಪಾರದರ್ಶಕ ಕಾಯ್ದೆ ಉಲ್ಲಂ ಸಿ ಎಸ್‌ಎಫ್ಸಿ ಅನುದಾನ ಬಿಡುಗಡೆಗೂ ಮೊದಲೇ ಆಯ್ದ ವಿಧಾನಸಭಾ ಕ್ಷೇತ್ರಗಳಲ್ಲಿ ಕಾನೂನು ಬಾಹಿರವಾಗಿ ಕಾಮಗಾರಿ ಆರಂಭಿಸಲು ಜಾಬ್‌ಕೋಡ್‌ ನೀಡಿದ್ದಾರೆ ಎಂದು ಆರೋಪಿಸಿದರು.

ಮೂರು ವರ್ಷಗಳಲ್ಲಿ ಪಾಲಿಕೆಗೆ 12,368 ಕೋಟಿ ರೂ. ಅನುದಾನ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಆದರೆ, ಈವರೆಗೆ 6,892 ಕೋಟಿ ರೂ. ಬಿಡುಗಡೆಯಾಗಿದ್ದು, ಉಳಿದ 5,476 ಕೋಟಿ ರೂ. ಬಿಡುಗಡೆ ಕುರಿತು ಯಾವುದೇ ಮಾಹಿತಿ ನೀಡಿಲ್ಲ. ಇದೀಗ ಮುಂದಿನ ಮೂರು ವರ್ಷಗಳಿಗೆ 8,015 ಕೋಟಿ ರೂ. ಘೋಷಿಸಿದೆ. ಆದರೆ, ಕಳೆದ ಎರಡು ವರ್ಷಗಳಿಂದ ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ ಬಿಲ್‌ ಪಾವತಿಸದ ಸರ್ಕಾರ, ಹೊಸ ಕಾಮಗಾರಿಗಳಿಗೆ ಅನುದಾನ ಎಲ್ಲಿಂದ ಕೊಡುತ್ತದೆ ಎಂದು ಪ್ರಶ್ನಿಸಿದರು.

ಸರ್ಕಾರ 2018-19ನೇ ಸಾಲಿನಲ್ಲಿ ಪಾಲಿಕೆಗೆ 271.21 ಕೋಟಿ ರೂ. ಎಸ್‌ಎಫ್ಸಿ ಅನುದಾನ ನೀಡಿದೆ. ಆ ಪೈಕಿ ಈಗಾಗಲೇ 233 ಕೋಟಿ ರೂ.ಗಳಿಗೆ ಪಾಲಿಕೆ ಅಧಿಕಾರಿಗಳು ಜಾಬ್‌ಕೋಡ್‌ ನೀಡಿದ್ದಾರೆ. ಆದರೆ, ಪಾಲಿಕೆಗೆ ಈವರೆಗೆ 68 ಕೋಟಿ ರೂ. ಮಾತ್ರ ಬಂದಿದ್ದು, ಇನ್ನೂ 165 ಕೋಟಿ ರೂ. ಬರಬೇಕಿದೆ. ಆದರೂ, ಅಧಿಕಾರಿಗಳು ಮಾತ್ರ ಅನುದಾನ ಬರುವ ಮೊದಲೇ ಜಾಬ್‌ಕೋಡ್‌ ನೀಡಿ ಕೆಲಸ ಆರಂಭಿಸುತ್ತಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಸಂಶಯ ವ್ಯಕ್ತಪಡಿಸಿದರು.

ಎರಡು ಕ್ಷೇತ್ರಗಳಿಗೆ 55 ಕೋಟಿ ರೂ. ಜಾಬ್‌ಕೋಡ್‌: ಜೆಡಿಎಸ್‌ ಶಾಸಕರು ಪ್ರತಿನಿಧಿಸುವ ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ 30 ಕೋಟಿ ರೂ. ಹಾಗೂ ಮಹಾಲಕ್ಷ್ಮೀ ಲೇಔಟ್‌ಗೆ 25 ಕೋಟಿ ರೂ. ಸೇರಿ ಒಟ್ಟು 55 ಕೋಟಿ ರೂ.ಗಳಿಗೆ ಅನುದಾನ ಬರುವ ಮೊದಲೇ ಜಾಬ್‌ಕೋಡ್‌ ನೀಡಿ, ಕಾಮಗಾರಿ ಆರಂಭಿಸಲಾಗಿದೆ.

ಆದರೆ, ಕಳೆದ ವರ್ಷ ಪುಲಿಕೇಶಿ ನಗರಕ್ಕೆ 25 ಕೋಟಿ ರೂ. ಹಾಗೂ ಚಾಮರಾಜಪೇಟೆಗೆ 30 ಕೋಟಿ ರೂ.ಗಳನ್ನು ಎಸ್‌ಎಫ್ಸಿ ಅನುದಾನದಲ್ಲಿ ನೀಡುವುದಾಗಿ ಕಾಮಗಾರಿ ಆರಂಭಿಸಲು ಸರ್ಕಾರ ಆದೇಶಿಸಿತ್ತು. ಆದರೆ, ಈವರೆಗೆ ಕಾಮಗಾರಿಗಳಿಗೆ ಜಾಬ್‌ಕೋಡ್‌ ನೀಡಿಲ್ಲ. ಹೀಗಾಗಿ ಸರ್ಕಾರದ ಆದೇಶದಂತೆ ಎಸ್‌ಎಫ್ಸಿ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಮುಂದಾದರೆ ಪಾಲಿಕೆಯ ಬೊಕ್ಕಸಕ್ಕೆ ನಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 

ಟಿವಿಸಿಸಿ, ಬಿಎಂಟಿಎಫ್ಗೆ ದೂರು: ಅನುದಾನ ಬಿಡುಗಡೆಯಾಗುವ ಮೊದಲೇ ಬೇಕಾಬಿಟ್ಟಿಯಾಗಿ ಜಾಬ್‌ಕೋಡ್‌ ನೀಡಿರುವುದನ್ನು ಕೂಡಲೇ ಉಪಮುಖ್ಯಮಂತ್ರಿಗಳು ತಡೆಹಿಡಿದು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಜತೆಗೆ ಪಾಲಿಕೆ ಆಯುಕ್ತರು ಕೂಡಲೇ ಜಾಬ್‌ಕೋಡ್‌ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ ಪದ್ಮನಾಭರೆಡ್ಡಿ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಸೋಮವಾರ ಟಿವಿಸಿಸಿ ಹಾಗೂ ಬಿಎಂಟಿಎಫ್ಗೆ ದೂರು ಸಲ್ಲಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.