ರಸೆಲ್‌ ಮಾರುಕಟ್ಟೆಯಲ್ಲಿ ಅನಧಿಕೃತ ಮಳಿಗೆಗಳ ತೆರವು


Team Udayavani, May 5, 2019, 3:08 AM IST

rasel-mar

ಬೆಂಗಳೂರು: ನಗರದ ಮಾರುಕಟ್ಟೆಗಳಲ್ಲಿನ ಪಾದಚಾರಿ ಮಾರ್ಗ ಹಾಗೂ ಅನಧಿಕೃತ ಮಳಿಗೆಗಳ ತೆರವು ಕಾರ್ಯವನ್ನು ಬಿಬಿಎಂಪಿ ಮುಂದುವರಿಸಿದ್ದು, ನಗರದ ರಸೆಲ್‌ ಮಾರುಕಟ್ಟೆಯಲ್ಲಿನ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಿದೆ.

ನಗರದ ಮಾರುಕಟ್ಟೆಗಳಲ್ಲಿ ಅಗ್ನಿ ಅವಘಡಗಳು ಸಂಭವಿಸಿದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಹೈಕೋರ್ಟ್‌ ಆದೇಶಿಸಿದೆ. ಅದರಂತೆ ಮೊದಲಿಗೆ ಕೆ.ಆರ್‌.ಮಾರುಕಟ್ಟೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿದ ಪಾಲಿಕೆಯ ಅಧಿಕಾರಿಗಳು, ಶನಿವಾರ ರಸೆಲ್‌ ಮಾರುಕಟ್ಟೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಿದರು.

ಪಾಲಿಕೆಯ ವಿಶೇಷ ಆಯುಕ್ತ ರವೀಂದ್ರ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬೆಸ್ಕಾಂ, ಜಲಮಂಡಳಿ, ಪೊಲೀಸ್‌ ಇಲಾಖೆ ಸೇರಿದಂತೆ 700 ಸಿಬ್ಬಂದಿ ಹಾಗೂ 70ಕ್ಕೂ ಹೆಚ್ಚು ಮಾರ್ಷಲ್‌ಗ‌ಳನ್ನು ಭಾಗಿಯಾಗಿದ್ದರು. ಅದರಂತೆ ಆರು ಜೆಸಿಬಿ, 8 ಟಿಪ್ಪರ್‌, 12 ಟ್ರ್ಯಾಕ್ಟರ್‌ಗಳನ್ನು ಬಳಸಿಕೊಂಡು ಆರು ತಂಡಗಳ ಮೂಲಕ ಕಾರ್ಯಾಚರಣೆ ನಡೆಸಿದರು.

ಅದರಂತೆ ರಸೆಲ್‌ ಮಾರುಕಟ್ಟೆ, ಬ್ರಾಡ್‌ ವೇ ರಸ್ತೆ, ನಾಲಾ ಮಾರುಕಟ್ಟೆ, ಬೋಟಿ ಮಾರುಕಟ್ಟೆ, ಶಿವಾಜಿ ರಸ್ತೆ, ಒಪಿಎಚ್‌ ರಸ್ತೆ, ಗುಜರಿ ಮಾರುಕಟ್ಟೆ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಮಂಜಾನೆಯಿಂದಲೇ ಕಾರ್ಯಾಚರಣೆ ನಡೆಸಿದರು. ತೆರವು ಕಾರ್ಯಾಚರಣೆ ಪ್ರಾರಂಭವಾಗುತ್ತಿದ್ದಂತೆ ಕೆಲ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಸಹಕರಿಸಿದರೆ, ಕೆಲವರು ವಿರೋಧ ವ್ಯಕ್ತಪಡಿಸಿದರು.

ಅಡ್ಡ ಬಂದವರಿಗೆ ಲಾಠಿ ರುಚಿ: ಶಿವಾಜಿನಗರ ಮೀನು ಮಾರುಕಟ್ಟೆಯಲ್ಲಿರುವ ಪಾಲಿಕೆಯ ಹಳೆಯ ಕಟ್ಟಡ ಗೋಡೆಗೆ ಅಂಟಿಕೊಂಡಂತೆ ಅನಧಿಕೃತವಾಗಿ ಐದು ಮಳಿಗೆಗಳನ್ನು ನಿರ್ಮಿಸಲಾಗಿತ್ತು. ಅವುಗಳನ್ನು ತೆರವುಗೊಳಿಸುವಂತೆ ರವೀಂದ್ರ ಜೆಸಿಬಿ ಚಾಲಕನಿಗೆ ಹೇಳಿದಾಗ ಸ್ಥಳೀಯ ವ್ಯಾಪಾರಿಗಳು ಜೆಸಿಬಿಗೆ ಅಡ್ಡಬಂದರು. ಈ ವೇಳೆ ಪೊಲೀಸರು ಲಾಠಿ ಬೀಸಿ ಅಡ್ಡಬಂದವರನ್ನು ಚದುರಿಸಿದರು.

ಪಾಲಿಕೆ ಕ್ರಮದ ವಿರುದ್ಧ ಹೋರಾಟ: ಕಳೆದ 15-20 ವರ್ಷಗಳಿಂದ ರಸೆಲ್‌ ಮಾರುಕಟ್ಟೆಯಲ್ಲಿ ಬಳಿ ಕಾರು ಹಾಗೂ ದ್ವಿಚಕ್ರ ಪಾರ್ಕಿಂಗ್‌ ಮಾಡಲಾಗುತ್ತಿದೆ. ಇದೀಗ ಏಕಾಏಕಿ ಅಗ್ನಶಾಮಕ, ಆ್ಯಂಬುಲೆನ್ಸ್‌ ಒಳಬರಲು ತೊಂದರೆಯಾಗುತ್ತದೆ ಎಂದು ವಾಹನ ನಿಲುಗಡೆ ನಿಷೇಧಿಸಿದ್ದಾರೆ.

ಇದರಿಂದ ಮಾರುಕಟ್ಟೆಗೆ ಬರುವ ಗ್ರಾಹಕರ ಸಂಖ್ಯೆ ಕಡಿಮೆಯಾಗಲಿದೆ. ಹೀಗಾಗಿ ಪಾರ್ಕಿಂಗ್‌ ವ್ಯವಸ್ಥೆಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ ಪಾಲಿಕೆಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ರಸೆಲ್‌ ಮಾರುಕಟ್ಟೆ ಸಂಘದ ಅಧ್ಯಕ್ಷ ಮಹಮ್ಮದ್‌ ಇದ್ರೀಸ್‌ ಚೌದ‌ರಿ ಹೇಳಿದರು.

ಬೆಂಕಿ ಕಂಡು ದಿಕ್ಕಾಪಲಾದ ಜನತೆ: ರಸೆಲ್‌ ಮಾರುಕಟ್ಟೆಯಲ್ಲಿ ಒತ್ತವರಿ ತೆರವು ಕಾರ್ಯಾಚರಣೆಗಾಗಿ ಗ್ಯಾಸ್‌ ಕಟ್ಟರ್‌ ತರಲಾಗಿತ್ತು. ಸಿಲಿಂಡರ್‌ನ ಪೈಪ್‌ ತುದಿಯಲ್ಲಿ ತುಂಡಾಗಿ ನೇತಾಡುತ್ತಿದ್ದನ್ನು ಗಮನಿಸದ ಸಿಬ್ಬಂದಿ ಪೈಪ್‌ನ್ನು ಸಿಲಿಂಡರ್‌ಗೆ ಅಳವಡಿಸಿದಾಗ ಅನಿಲ ಹೊರಬಂದು ಜೋರಾದ ಶಬ್ದದೊಂದಿಗೆ ಪೈಪ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಬರಿಯಲ್ಲಿ ಸಿಬ್ಬಂದಿಯ ಕೈಯಿಂದ ಬೆಂಕಿಯಿದ್ದ ಪೈಪ್‌ ಕೆಳಗೆ ಬಿದ್ದು ನಿಯಂತ್ರಣವಿಲ್ಲದೆ ಅತ್ತ ಇತ್ತ ಹರಿಯಲಾರಂಬಿಸಿತು. ಈ ವೇಳೆ ಜನರು ದಿಕ್ಕಾಪಾಲಾಗಿ ಓದಿದರು.

ಹೈಕೋರ್ಟ್‌ ಸೂಚನೆಯಂತೆ ರಸೆಲ್‌ ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಗ್ನಿಶಾಮಕ ವಾಹನ ಒಳಹೋಗಲು ಸಾಧ್ಯವಿಲ್ಲ. ಅದನ್ನು ತೆರವುಗೊಳಿಸುವಂತೆ ಸೂಚನೆ ನೀಡಿತ್ತು. ಅದರಂತೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಇದಾದ ಬಳಿಕ ಮಡಿವಾಳ ಮಾರುಕಟ್ಟೆ ತೆರವು ನಡೆಯಲಿದೆ.
-ರವೀಂದ್ರ, ಬಿಬಿಎಂಪಿ ವಿಶೇಷ ಆಯುಕ್ತ

ಹೈಕೋರ್ಟ್‌ ನಿರ್ದೇಶನದಂತೆ ಮಾರುಕಟ್ಟೆಗಳಲ್ಲಿನ ಒತ್ತುವರಿ ತೆರವು ಕಾರ್ಯ ನಡೆಯುತ್ತಿದ್ದು, ರಸೆಲ್‌ ಮಾರುಕಟ್ಟೆಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ ರಸೆಲ್‌ ಮಾರುಕಟ್ಟೆ ಅಭಿವೃದ್ಧಿಗೊಳಿಸಲು ಯೋಜನೆ ರೂಪಿಸಿದ್ದು, ಶೀಘ್ರವೇ ಟೆಂಡರ್‌ ಕರೆದು ಮಾರುಕಟ್ಟೆ ನವೀಕರಿಸಲಾಗುವುದು.
-ಎನ್‌.ಮಂಜುನಾಥ್‌ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.