ಸರ್ಕಾರದ ಯೋಜನೆ ಸದುಪಯೋಗವಾಗಲಿ: ಸಿಎಂ


Team Udayavani, May 31, 2019, 12:49 PM IST

bengaluru-tdy-4..

ವಿಧಾನ ಸೌಧ ಮುಂಭಾಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಐರಾವತ ಯೋಜನೆಗೆ ಚಾಲನೆ ನೀಡಿದರು.

ಬೆಂಗಳೂರು: ‘ವಿದ್ಯಾವಂತ ನಿರುದ್ಯೋಗಿಗಳು ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸೌಧ ಮುಂಭಾಗ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಹತ್ವಾಕಾಂಕ್ಷಿ ‘ಐರಾವತ’ ಯೋಜನೆಯಡಿ 209 ಎಸ್‌ಸಿ-ಎಸ್‌ಟಿ ಫ‌ಲಾನುಭವಿಗಳಿಗೆ ಕಾರು ವಿತರಿಸಿ ಮಾತನಾಡಿದರು. ‘ರಾಜ್ಯದ 4500 ಕುಟುಂಬಗಳ ಜೀವನೋಪಾಯಕ್ಕೆ ಅಡಿಪಾಯ ಹಾಕುವಂತ ಮಹತ್ತರ ಆಶಯ ಇಟ್ಟುಕೊಂಡು ಐರಾವತ ಯೋಜನೆ ರೂಪಿಸಲಾಗಿದೆ’ ಎಂದು ತಿಳಿಸಿದರು.

ಯುವಸಮೂಹ ಜೀವನವನ್ನು ಸವಾಲಾಗಿ ಸ್ವೀಕರಿಸಿ ಯೋಜನೆ ಲಾಭ ಪಡೆದು ಅಭಿವೃದ್ದಿ ಹೊಂದಬೇಕು. ರಾಜ್ಯ ಸರ್ಕಾರವು ಯುವಜನತೆ ಸ್ವಂತ ಉದ್ದಿಮೆ, ವ್ಯಾಪಾರ ನಡೆಸಲು ಸಾಕಷ್ಟು ಯೋಜನೆ ರೂಪಿಸಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ನಿರುದ್ಯೋಗಿ ಯುವಕ-ಯುವತಿಯರನ್ನು ಉದ್ಯಮಶೀಲರನ್ನಾಗಿ ಮಾಡುವ ಉದ್ದೇಶದಿಂದ ಸಾಮಾಜಿಕ ಉದ್ಯಮಶೀಲತಾ ಅಭಿವೃದ್ದಿ ಯೋಜನೆಯನ್ನು ಅಂಬೇಡ್ಕರ್‌, ಮಹರ್ಷಿ ವಾಲ್ಮೀಕಿ, ಬೋವಿ, ತಾಂಡಾ, ಆದಿಜಾಂಬವ ಅಭಿವೃದ್ಧಿ ನಿಗಮಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಸಮಾಜ ಕಲ್ಯಾಣ ಸಚಿವ ಪ್ರಿಯಾಂಗ್‌ ಖರ್ಗೆ ಮಾತನಾಡಿ, ಐರಾವತ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 225 ಕೋಟಿ ರೂ. ವೆಚ್ಚದಲ್ಲಿ 4,500 ಮಂದಿಗೆ ವಾಹನ ನೀಡಲಾಗುತ್ತಿದೆ. ಈ ವಾಹನಗಳನ್ನು ಓಲಾ- ಊಬರ್‌ ಸಂಸ್ಥೆಗಳ ಸಹಯೋಗದೊಂದಿಗೆ ನೀಡಲಾಗುತ್ತಿದೆ. ಫ‌ಲಾನುಭವಿಗಳಿಗೆ ತರಬೇತಿ ಹಾಗೂ ಮಾರುಕಟ್ಟೆ ದೊರಕಿಸಿಕೊಡಲು ನೆರವು ನೀಡಲಾಗುತ್ತಿದೆ. ಈ ಯೋಜನೆಯ ಫ‌ಲಾನುಭವಿಗಳು ಒಂದು ವರ್ಷ ಕಡ್ಡಾಯವಾಗಿ ಓಲಾ- ಊಬರ್‌ ಸಂಸ್ಥೆಗಳ ಮೂಲಕ ಸೇವೆ ಸಲ್ಲಿಸಬೇಕಾಗಿರುತ್ತದೆ.

ಈಗ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಫ‌ಲಾನುಭವಿಗಳಿಗೆ ಕಾರು ವಿತರಿಸಲಾಗಿದ್ದು ಇದೇ ರೀತಿ ಮೈಸೂರು, ಬೆಳಗಾವಿ, ಕಲಬುರಗಿ, ದಕ್ಷಿಣ ಕನ್ನಡ, ಬಳ್ಳಾರಿ, ಧಾರವಾಡ ಜಿಲ್ಲಾ ಕೇಂದ್ರಗಳಲ್ಲಿಯೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಐರಾವತ ಯೋಜನೆಯಡಿ ಫ‌ಲಾನುಭವಿಗಳಿಗೆ ಐದು ಲಕ್ಷ ರೂ. ಆರ್ಥಿಕ ನೆರವು ನೀಡಲಾಗುತ್ತಿದ್ದು ಚಾಲಕರೇ ಮಾಲೀಕರಾಗಿ ಬದಲಾವಣೆಯಾಗುತ್ತಿದ್ದಾರೆ. ಅವರ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಯಲ್ಲೂ ಸಾಕಷ್ಟು ಅಭಿವೃದ್ಧಿಯಾಗಲಿದೆ. ಈಗಾಗಲೇ ಯೋಜನೆಯಡಿ ಫ‌ಲಾನುಭವಿ ಆಗಿರುವವರು ಮಾಸಿಕ 90 ಸಾವಿರ ರೂ. ದುಡಿಯುತ್ತಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.