ತ್ಯಾಜ್ಯ ಪುಡಿಗಟ್ಟಲು ಯಂತ್ರಗಳ ಬಳಕೆ


Team Udayavani, Jun 24, 2019, 3:09 AM IST

tyaajya

ಬೆಂಗಳೂರು: ನಗರದಲ್ಲಿ ದೊಡ್ಡ ಮಟ್ಟದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತಿರುವ ಸತ್ತ ಪ್ರಾಣಿಗಳ ತ್ಯಾಜ್ಯ (ಮಾಂಸ) ಮತ್ತು ಮರದ ಎಲೆ ತ್ಯಾಜ್ಯ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದಕ್ಕೆ ಬಿಬಿಎಂಪಿ ಮುಂದಾಗಿದೆ. ನಗರದಲ್ಲಿ ಪ್ರಾಣಿ ಮಾಂಸ ತ್ಯಾಜ್ಯ ಸಂಸ್ಕರಣೆ ಹಲವು ವರ್ಷಗಳಿಂದ ಕಗ್ಗಂಟಾಗೇ ಉಳಿದಿದೆ.

ಮತ್ತು ಬಿದ್ದ ಮರಗಳನ್ನು ತೆರವು ಮಾಡುವುದಕ್ಕೆ ಹೆಚ್ಚು ಸಮಯ ಮತ್ತು ಹಣವೂ ವ್ಯಯವಾಗುತ್ತಿದೆ. ಬಿದ್ದ ಮರದ ತ್ಯಾಜ್ಯವನ್ನು ವಾರ್ಡ್‌ಗಳ ಪಾರ್ಕ್‌ನಲ್ಲೇ ಶೆಟರ್ಯಂತ್ರ (ಮರದ ಎಲೆ ಮತ್ತು ಹಸಿಕಸವನ್ನು ಗೊಬ್ಬರವನ್ನಾಗಿ ಪರಿರ್ವತಿಸುವ ಯಂತ್ರ) ಅಳವಡಿಸಲು ಬಿಬಿಎಂಪಿ ಮುಂದಾಗಿದೆ.

ಅದೇ ರೀತಿಯಲ್ಲಿ ಪ್ರಾಣಿ ತ್ಯಾಜ್ಯ ಸಂಸ್ಕರಿಸಲು ರೆಂಡರಿಂಗ್‌ಯಂತ್ರ (ತ್ಯಾಜ್ಯವನ್ನು ಪುಡಿಮಾಡುವ ಸಾಧನ) ಅಳವಡಿಸಲು ಯೋಜನೆ ರೂಪಿಸುತ್ತಿದೆ. ಬಿದ್ದ ಮರದ ಎಲೆ ಮತ್ತು ರಂಬೆಕೊಂಬೆಗಳನ್ನು ತೆರವು ಮಾಡುವುದಕ್ಕೆ ತ್ಯಾಜ್ಯ ನಿರ್ವಹಣೆಯ ವಾಹನವನ್ನೇ ಬಳಸಲಾಗುತ್ತಿದ್ದು, ತೆರವು ಮಾಡುವುದಕ್ಕೆ ತಡವಾಗುತ್ತಿದೆ.

ಮರದ ತುಂಡನ್ನು ತೆರವು ಮಾಡಿದರೆ ಉಳಿದ ತ್ಯಾಜ್ಯವನ್ನು ಲಾರಿಗಳಲ್ಲಿ ತುಂಬಿಸಲು ಸಾಧ್ಯವಿಲ್ಲ ಮತ್ತು ಅದು ತೂಕವೂ ಇರುವುದರಿಂದ ರಸ್ತೆ ಬದಿಯಲ್ಲಿ ಒಂದೆರಡು ದಿನ ಉಳಿಸಿ ಮರದ ತುಂಡಿನ ತೂಕ ಕಡಿಮೆಯಾದ ಮೇಲೆ ಪೌರಕಾರ್ಮಿಕರು ಅದನ್ನು ತೆಗೆದುಕೊಂಡು ಹೋಗುತ್ತಿದ್ದಾರೆ.

ಆದರೆ, ಈ ವೇಳೆಗಾಗಲೇ ಮರ ಬಿದ್ದಿರುವ ಜಾಗದಲ್ಲೇ ಸಾರ್ವಜನಿಕರು ತ್ಯಾಜ್ಯವನ್ನೂ ಸುರಿಯುತ್ತಿರುವುದರಿಂದ ಇದು ಬಿಬಿಎಂಪಿಗೆ ತಲೆನೋವಾಗಿ ಪರಿಣಮಿಸಿತ್ತು. ಹೀಗಾಗಿ, ಶೆಟರ್ ಯಂತ್ರವನ್ನು ಪಾರ್ಕ್‌ಗಳಲ್ಲಿ 10ರಿಂದ 15 ಅಡಿ ಜಾಗದಲ್ಲಿ ಅಳವಡಿಸಲು ಮುಂದಾಗಿದ್ದು, ಜಾಗ ಸೂಚಿಸುವಂತೆ ಪಾಲಿಕೆ ಸದಸ್ಯರನ್ನು ಕೇಳಲಿದೆ. ಘನ ತ್ಯಾಜ್ಯ ನಿರ್ವಾಹಣೆಗೆ ಇರುವ ವೆಚ್ಚದಲ್ಲೇ ಯಂತ್ರವನ್ನು ಅಳವಡಿಸಲಿದ್ದು, ಇದಕ್ಕೆ 12 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಪ್ರಾಣಿ ತ್ಯಾಜ್ಯಕ್ಕೆ ರೆಂಡರಿಂಗ್‌ ಯಂತ್ರ: ಕೋಳಿ, ಮೀನು, ಕುರಿ ಮತ್ತು ದನದ ಮಾಂಸದ ತ್ಯಾಜ್ಯ ವಿಲೇವಾರಿ ಬಹುವರ್ಷಗಳಿಂದ ಕಗ್ಗಂಟಾಗೇ ಉಳಿದಿದೆ. ಕೋಳಿ ಮಾಂಸ ತ್ಯಾಜ್ಯವನ್ನು ಮೂಟೆಗಳಲ್ಲಿ ತುಂಬಿ ರಾಜಕಾಲುವೆ, ಕೆರೆ, ರಿಂಗ್‌ರೋಡ್‌ ಬದಿ ಮತ್ತು ಖಾಲಿ ಜಾಗಗಳಲ್ಲಿ ಎಸೆಯುತ್ತಿರುವುದರಿಂದ ಹಲವು ಸಮಸ್ಯೆಗಳು ಉಂಟಾಗುತ್ತಿವೆ.

ಮಾಂಸ ತ್ಯಾಜ್ಯವನ್ನು ರಾಜಕಾಲುವೆಗಳಲ್ಲಿ ಎಸೆಯುವುದರಿಂದ ರಾಜಕಾಲುವೆಗಳಲ್ಲಿ ನೀರು ಸರಾಗವಾಗಿ ಹರಿಯುವುದಕ್ಕೆ ತಡೆಯಾಗುತ್ತಿದೆ. ಕೆರೆ ಮತ್ತು ಖಾಲಿ ಜಾಗದಲ್ಲಿ ಮಂಆಸ ತ್ಯಾಜ್ಯ ಎಸೆಯುತ್ತಿರುವ ಕಾರಣ, ನಗರದ ಹಲವು ಪ್ರದೇಶಗಳಲ್ಲಿ ಜನ ಮೂಗು ಮುಚ್ಚಿಕೊಂಡೇ ನಡೆದಾಡಬೇಕಾದ ಪರಿಸ್ಥಿತಿ ಇದೆ.

ಮಾಂಸದ ಅಂಗಡಿಗಳ ಮಾಲೀಕರ ನಿರ್ಲಕ್ಷ್ಯ ಮತ್ತು ಪರ್ಯಾಯ ವ್ಯವಸ್ಥೆಯ ಕೊರತೆಯಿಂದ ಪರೋಕ್ಷವಾಗಿ ನಾಯಿಗಳು ವ್ಯಾಘ್ರ ರೂಪತಾಳುವುದಕ್ಕೂ ಕಾರಣವಾಗುತ್ತಿದೆ. ಕೊನೆಗೂ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳವಲ್ಲಿ ಬಿಬಿಎಂಪಿ ಮೊದಲ ಹೆಜ್ಜೆ ಇಟ್ಟಿದೆ. ನಗರದ ನಾಲ್ಕು ಕಡೆ ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ರೆಂಡರಿಂಗ್‌ಯಂತ್ರ ಅಳವಡಿಸುವ ಬಗ್ಗೆ ಚಿಂತನೆ ನಡೆದಿದೆ. ಪ್ರತ್ಯೇಕ ಟೆಂಡರ್‌ ಪ್ರಕ್ರಿಯೆ ಮೂಲಕ ಯಂತ್ರಗಳನ್ನು ಖರೀದಿಸುವ ಬಗ್ಗೆಯೂ ಚಿಂತನೆ ನಡೆದಿದೆ.

ರೆಂಡರಿಂಗ್‌ಯಂತ್ರದಿಂದ ಬಿಬಿಎಂಪಿಗೆ ಹೆಚ್ಚುವರಿ ವೆಚ್ಚ ಆಗದಂತೆ ಯೋಜನೆ ರೂಪಿಸಲಾಗುತ್ತಿದೆ. ಇದರ ನಿರ್ವಾಹಣೆ ವೆಚ್ಚವನ್ನು ಮಾಂಸದ ಅಂಗಡಿ ಮಾಲೀಕರಿಂದಲೇ ವಸೂಲಿ ಮಾಡಲಾಗುವುದು. ಯಂತ್ರಗಳನ್ನು ಅಳವಡಿಸುವುದರಿಂದ ಸಮಸ್ಯೆಗೆ ಮುಕ್ತಿ ಸಿಗಲಿದೆ.
-ರಂದೀಪ್‌, ಬಿಬಿಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ)

ಶಟರ್ ಮತ್ತು ರೆಂಡರಿಂಗ್‌ಯಂತ್ರಗಳನ್ನು ಅಳವಡಿಸುವುದರಿಂದ ಮರದ ರಂಬೆಕೊಂಬೆ ತ್ಯಾಜ್ಯ ಮತ್ತು ಪ್ರಾಣಿ ತ್ಯಾಜ್ಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಇದನ್ನು ಮುಂದೆ ಗೊಬ್ಬರವಾಗಿಯೂ ಬಳಸಿಕೊಳ್ಳಬಹುದು.
-ಗಂಗಾಂಬಿಕೆ ಮಲ್ಲಿಕಾರ್ಜುನ್‌, ಬಿಬಿಎಂಪಿ ಮೇಯರ್‌

* ಹಿತೇಶ್‌ ವೈ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.