ಕನ್ನಡ ಬೆಳೆಸುವುದರ ಜೊತೆ ಕನ್ನಡ ಬಳಸಿ : ಸಿ.ಎಂ ಬಿ.ಎಸ್.ಯಡಿಯೂರಪ್ಪ
Team Udayavani, Nov 1, 2019, 11:56 AM IST
ಬೆಂಗಳೂರು: ಮನೆಯೇ ಮೊದಲ ಪಾಠ ಶಾಲೆಯಾಗಿದ್ದು, ಪ್ರತಿಯೊಬ್ಬರು ಮನೆಯಲ್ಲಿ ಕನ್ನಡ ಮಾತನಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯು ಶುಕ್ರವಾರ ಶ್ರೀಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಏರ್ಪಸಿದ್ದ 64ನೇ ಕರ್ನಾಟಕ ರಾಜ್ಯೋತ್ಸವ ಮತ್ತು ಮಕ್ಕಳ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಹೆಚ್ಚೆಚ್ಚು ಕನ್ನಡ ಪುಸ್ತಕ, ಪತ್ರಿಕೆ ಓದುವುದರ ಮೂಲಕ ಕನ್ನಡಕ್ಕೆ ಆದ್ಯತೆ ನೀಡಬೇಕು. ವಾಣಿಜ್ಯ ಮತ್ತು ವ್ಯಾವಹಾರಿಕವಾಗಿ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಬೇಕು. ಕರ್ನಾಟಕದಲ್ಲಿ ನೆಲೆ ನಿಂತಿರುವ ಪರಭಾಷಿಕರು ಕೂಡ ಕನ್ನಡ ಕಲಿಯಬೇಕು. ಕಲಿತ ಸಮ್ಮತಿಸುವವರಿಗೆ ಕನ್ನಡ ಕಲಿಸಲು ಕನ್ನಡಿಗರು ಮುಂದಾಗಬೇಕು. ಆಗ ಭಾಷೆ ಬೆಳೆಯಲು ಮತ್ತು ಬೆಳಗಲು ಸಾಧ್ಯವಿದೆ ಎಂದರು.
ಕನ್ನಡ ಮಧುರ, ಸುಂದರ, ಸಂವೃದ್ಧ ಭಾಷೆಯಾಗಿದೆ. ಪ್ರಾಚೀನತೆ ಹಾಗೂ ಆಧುನಿಕತೆಗಳನ್ನು ಮೈಗೂಡಿಸಿಕೊಳ್ಳಲು ಶಕ್ತವಾಗಿದ್ದು, ಕನ್ನಡ ಬಳಸಲು ಹಿಂಜರಿಯುವ ಹಾಗೂ ಸಂಕೋಚ ಪಡುವ ಅಗತ್ಯವಿಲ್ಲ. ಶಾಲಾ ಮಕ್ಕಳು ಕನ್ನಡ ಭಾಷೆಯನ್ನು ಚಿಕ್ಕ ವಯಸ್ಸಿನಲ್ಲಿಯೇ ಅರಿತುಕೊಂಡರೆ ಹೆಚ್ಚು ಪ್ರಯೋಜನೆ ಇದೆ. ಜತೆಗೆ ಇತರೆ ಭಾಷೆ ಕಲಿತುಕೊಳ್ಳುವಲ್ಲಿ ತಪ್ಪಿಲ್ಲ. ಜನ್ಮ ಕೊಟ್ಟ ತಾಯಿ ಮತ್ತು ನಾಡು ಎಷ್ಟು ಮುಖ್ಯವೋ ತಾಯಿ ಭಾಷೆಯೂ ಅಷ್ಟೇ ಮುಖ್ಯವಾಗಿದೆ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ