ಶಿವಾಜಿ ನಗರದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್: ಸಚಿವ ಸೋಮಣ್ಣ ಉದ್ಘಾಟನೆ


Team Udayavani, May 22, 2021, 5:26 PM IST

ಶಿವಾಜಿನಗರದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್: ಸಚಿವ ಸೋಮಣ್ಣ ಉದ್ಘಾಟನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯದ ವ್ಯಾಪ್ತಿಯಲ್ಲಿ ಬರುವ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ವಾಸಿಸುತ್ತಿರುವ ಬಡವರು ಹಾಗೂ ಮಧ್ಯಮವರ್ಗಗಳ ಕುಟುಂಬದವರನ್ನು ಕೋವಿಡ್ ಸೋಂಕಿನಿಂದ ರಕ್ಷಿಸಲು ಕೋವಿಡ್ ಕೇರ್ ಸೆಂಟರುಗಳನ್ನು ಹೆಚ್ಚು ಹೆಚ್ಚಾಗಿ ಸಜ್ಜುಗೊಳಿಸಲಾಗುತ್ತಿದೆ ಎಂದು ಬಿಬಿಎಂಪಿ ಪೂರ್ವ ವಲಯ ಕೋವಿಡ್-19 ಮೇಲ್ವಿಚಾರಣೆ ಉಸ್ತುವಾರಿ ಹೊತ್ತಿರುವ ಸಚಿವ ವಿ.ಸೋಮಣ್ಣ ಹೇಳಿದರು.

ಶಿವಾಜಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಸೆಂಟ್’ಜಾನ್ಸ್ ರಸ್ತೆಯ ಮಿಲಟರಿ ಕಾಂಪೌಂಡ್’ ನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಭಾರತೀಯ ಸೈನ್ಯದ ಸಹಯೋಗದೊಂದಿಗೆ ಕೋವಿಡ್ ಸೊಂಕಿತರ ಚಿಕಿತ್ಸೆಗಾಗಿ ಸಜ್ಜುಗೊಳಿಸಲಾಗಿರುವ 100 ಬೆಡ್‌ಗಳ ಕೋವಿಡ್ ಕೇರ್ ಸೆಂಟರ್‌ನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಆಲ್ ಅಮೀನ್ ಆಸ್ಪತ್ರೆಯಲ್ಲಿ ಶೇ.30ರಷ್ಟು ಹಾಸಿಗೆಗಳನ್ನು ಒದಗಿಸಲು ಆಡಳಿತ ಮಂಡಳಿ ಒಪ್ಪಿದ್ದು, ಆರಂಭಿಸಲಾಗುತ್ತಿರುವ ಆರೈಕೆ ಕೇಂದ್ರಕ್ಕೆ ಬರುವ ತುರ್ತು ರೋಗಿಗಳನ್ನು ಅಲ್ಲಿಗೆ ದಾಖಲಿಸಲು ವೈದ್ಯರಿಗೆ ಸೂಚಿಸಿದರು.

ಕೋವಿಡ್ ವ್ಯಾಪಿಸಿರುವ ಈ ಸಮಯದಲ್ಲಿ ಭಾರತೀಯ ಸೈನ್ಯದವರು ಸೇವಾ ಮನೋಭಾವದಿಂದ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಒತ್ತಾಸೆಯಾಗಿ ನಿಂತಿದ್ದಾರೆ, ಈ ಕೇಂದ್ರಕ್ಕೆ ಅಗತ್ಯವಿರುವ ಹೆಚ್ಚುವರಿ ಸೌಲಭ್ಯವನ್ನು ಬಿಬಿಎಂಪಿ ಒದಗಿಸಲಿದೆ ಎಂದೂ ಸಚಿವ ಶ್ರೀ ಸೋಮಣ್ಣ ಹೇಳಿದರು.

ಈ ಆಸ್ಪತ್ರೆಯ 100 ಹಾಸಿಗೆಗಳಲ್ಲಿ 45 ಹಾಸಿಗೆಗಳಿಗೆ ಆಮ್ಲಜನಕ ಪೂರೈಕೆ ಇರುತ್ತದೆ  ಎಂದು ಹೇಳಿದ ಸಚಿವರು ಆಸ್ಪತ್ರೆ ನುರಿತ ವೈದ್ಯರು, ಶುಶ್ರೂಷಕರು ಹಾಗೂ ಸಿಬ್ಬಂದಿ ಮಾತ್ರವಲ್ಲದೆ, ಆಂಬ್ಯುಲೆನ್ಸ್ ಸೌಕರ್ಯವನ್ನು ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ಶಾಸಕ ರಿಜ್ವಾನ್ ಅರ್ಷದ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ಗೌರವ್ ಗುಪ್ತ, ಪೂರ್ವ ವಲಯದ ನೋಡಲ್ ಅಧಿಕಾರಿಗಳೂ ಆಗಿರುವ ವಸತಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಭಾರತೀಯ ಸೈನ್ಯದ ಮೇಜರ್ ಜನರಲ್ ಜೆ.ವಿ.ಪ್ರಸಾದ್, ಬ್ರಿಗೇಡಿಯರ್ ಟಿ.ಪಿ.ಎಸ್. ವಾರ್ಧ್ವ, ಪಾಲಿಕೆಯ ಜಂಟಿ ಆಯುಕ್ತೆ ಪಲ್ಲವಿ ಹಾಗೂ ಇನ್ನಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.