ದಶಕದ ಬಳಿಕ ಖಾಲಿ ಹುದ್ದೆಗಳ ಭರ್ತಿ


Team Udayavani, Jan 3, 2019, 7:18 AM IST

bbmp.jpg

ಬೆಂಗಳೂರು: ಬಿಬಿಎಂಪಿಯ ಆಡಳಿತ ಯಂತ್ರಕ್ಕೆ ವೇಗ ನೀಡಲು ಮುಂದಾಗಿರುವ ಪಾಲಿಕೆ, ದಶಕದ ಬಳಿಕ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಮುಂದಾಗಿದೆ.

ರಾಜ್ಯ ಸರ್ಕಾರ 2008ರಲ್ಲಿ 110 ಹಳ್ಳಿಗಳನ್ನು ಸೇರಿಸಿ ಪಾಲಿಕೆಯ ವಿಸ್ತೀರ್ಣವನ್ನು 250 ಚದರ ಮೀಟರ್‌ಗಳಿಂದ 800 ಚದರ ಮೀಟರ್‌ಗಳಿಗೆ ಹೆಚ್ಚಿಸಿತ್ತು. ಆದರೆ, ಪಾಲಿಕೆಗೆ ಹೆಚ್ಚುವರಿಯಾಗಿ ಹುದ್ದೆಗಳನ್ನು ಮಂಜೂರು ಮಾಡಿರಲಿಲ್ಲ. ಇದರೊಂದಿಗೆ ಸದ್ಯ ಪಾಲಿಕೆಗೆ ಮಂಜೂರಾಗಿರುವ ಹುದ್ದೆಗಳಲ್ಲಿಯೂ ಶೇ.50ಕ್ಕಿಂತ ಹೆಚ್ಚಿನ ಹುದ್ದೆಗಳು ಭರ್ತಿಯಾಗಿಲ್ಲ.

ಇದರಿಂದಾಗಿ ಆಡಳಿತಾತ್ಮಕ ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವುದು ಪಾಲಿಕೆಗೆ
ಸವಾಲಿನ ಕೆಲಸವಾಗಿದೆ. ಜತೆಗೆ ಹಾಲಿ ಪಾಲಿಕೆ ನೌಕರರು ಒತ್ತಡದಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಸರ್ಕಾರ ದಿಂದ ಪಾಲಿಕೆಗೆ ಒಟ್ಟಾರೆ ಯಾಗಿ 17,391 ಹುದ್ದೆಗಳು ಮಂಜೂರಾಗಿದ್ದರೂ, ಆ ಪೈಕಿ 10 ಸಾವಿರಕ್ಕೂ ಹೆಚ್ಚಿನ ಹುದ್ದೆಗಳು ಹಲವು ವರ್ಷಗಳಿಂದ ಖಾಲಿಯಿವೆ. ಅದರಲ್ಲಿಯೂ ಪ್ರಮುಖವಾಗಿ ಸಾರ್ವಜನಿಕರಿಗೆ ಸೇವೆ ಒದಗಿಸುವ ಆರೋಗ್ಯ, ಕಾಮಗಾರಿ, ಸಾಮಾನ್ಯ ಆಡಳಿತ, ಶಿಕ್ಷಣ ವಿಭಾಗಗಳಲ್ಲಿ ಹೆಚ್ಚಿನ ಪ್ರಮಾಣದ ಖಾಲಿ ಹುದ್ದೆಗಳಿರುವುದು ಆಡಳಿತದ ಮೇಲೆ ದುಷ್ಪರಿಣಾಮ
ಬೀರುತ್ತಿದೆ ಎಂಬ ಆರೋಪಗಳು 

ಕೇಳಿಬಂದಿದ್ದವು. ಇದರಿಂದ ಎಚ್ಚೆತ್ತುಕೊಂಡಿರುವ ಪಾಲಿಕೆಯ ಆಡಳಿತ ವಿಭಾಗವು ಮೊದಲ ಹಂತದಲ್ಲಿ 17 ವಿಭಾಗಳಲ್ಲಿನ 867 ಹುದ್ದೆಗಳನ್ನು ಭರ್ತಿ ಮಾಡಿಕೊಡುವಂತೆ ಐಐಎಸ್‌ಸಿ ಮೊರೆ ಹೋಗಿತ್ತು. ಆದರೆ, ಐಐಎಸ್‌ಸಿ ಮೂಲಕ ನೇಮಕಾತಿ
ಮಾಡಿಕೊಳ್ಳಲು ಅವಕಾಶವಿಲ್ಲದ ಕಾರಣ ಇದೀಗ ಪಾಲಿಕೆಯಿಂದ ಕೆಪಿಎಸ್‌ ಸಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿಯೇ ಈ ಕುರಿತು ಕೆಪಿಎಸ್‌ಸಿಯಿಂದ ನೇಮಕಾತಿ ಆದೇಶ ಹೊರಬೀಳುವ ಸಾಧ್ಯತೆಯಿದೆ.

ಹೊರೆಯಾಗುತ್ತಿವೆ ಹೆಚ್ಚುವರಿ ಹುದ್ದೆಗಳು: ಪಾಲಿಕೆಯಲ್ಲಿ ಖಾಲಿಯಾಗುತ್ತಿರುವ ಪ್ರಮುಖ ಹುದ್ದೆಗಳು ಕಾಲಕಾಲಕ್ಕೆ ಭರ್ತಿಯಾಗದ ಹಿನ್ನೆಲೆಯಲ್ಲಿ ದರ್ಜೆ-1 ಹುದ್ದೆಯ ಅಧಿಕಾರಿಗಳಿಗೆ ತಮ್ಮ ವಿಭಾಗ ದೊಂದಿಗೆ ಹೆಚ್ಚುವರಿಯಾಗಿ ಮತ್ತೂಂದು ವಿಭಾಗದ ಜವಾಬ್ದಾರಿ ವಹಿಸಲಾಗಿದೆ. ಎರಡು ಮೂರು ವಿಭಾಗಗಳ ಕಾರ್ಯಗಳನ್ನು ನಿರ್ವಹಿಸಲಾಗದೆ ಅಧಿಕಾರಿಗಳು ಹೆಚ್ಚುವರಿ ಜವಾಬ್ದಾರಿ ಬೇಡವೆಂದು ಆಯುಕ್ತರಿಗೆ ಪತ್ರ ಬರೆದ ಉದಾಹರಣೆಯೂ ಇವೆ.

10 ವಲಯಗಳು ಹೆಸರಿಗೆ ಮಾತ್ರ: ಪಾಲಿಕೆಯ ಆಡಳಿತಾತ್ಮಕ ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನುಕೂಲಕ್ಕಾಗಿ ಹಿಂದಿನ ಸರ್ಕಾರ ಪಾಲಿಕೆಯ ಎಂಟು ವಲಯಗಳನ್ನು ಹತ್ತು ವಲಯಗಳಾಗಿ ವಿಂಗಡಿಸಿ ಆದೇಶ ಹೊರಡಿಸಿದೆ. ಆದರೆ, ಈವರೆಗೆ ಎರಡು ಹೊಸ ವಲಯಗಳಿಗೆ ಅಗತ್ಯವಾದ ಕಚೇರಿ, ಸಿಬ್ಬಂದಿ, ಅಧಿಕಾರಿಗಳನ್ನು ನಿಯೋಜಿಸಿಲ್ಲ. ಒಂದು ವೇಳೆ ಎರಡು ವಲಯಗಳು ಕಾರ್ಯಾರಂಭ ಮಾಡಿ ಎಂಟು ವಲಯಗಳಲ್ಲಿನ ಸಿಬ್ಬಂದಿಯನ್ನೇ ಅಲ್ಲಿಗೆ ನಿಯೋಜಿಸಿದರೆ ಆಡಳಿತ ಯಂತ್ರದ ಕಾರ್ಯಕ್ಷಮತೆ ಕುಸಿಯುತ್ತದೆ ಎಂಬುದು ತಜ್ಞರ ಅಭಿಮತ. 

ಬಿಬಿಎಂಪಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಪಾಲಿಕೆಯ 17 ವಿಭಾಗಗಳಲ್ಲಿನ 867 ಹುದ್ದೆಗಳನ್ನು ಭರ್ತಿ ಮಾಡಿಕೊಡುವಂತೆ ಕೆಪಿಎಸ್‌ಸಿ ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ನೇಮಕಾತಿ ಪ್ರಕ್ರಿಯೆ ಮಾಡಿಕೊಡಲು ಕೆಪಿಎಸ್‌ಸಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲಿಯೇ ನೇಮಕಾತಿ ಆದೇಶ ಹೊರಬೀಳುವ ಸಾಧ್ಯತೆಯಿದೆ.
ರಂದೀಪ್‌, ವಿಶೇಷ ಆಯುಕ್ತರು (ಆಡಳಿತ)

ವೆಂ. ಸುನೀಲ್‌ಕುಮಾರ್‌

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.