Flower show: ಫ್ಲವರ್‌ ಶೋನಲ್ಲಿ ಕೇಳಿಸಲಿದೆ ವಚನ ಸಾಹಿತ್ಯ


Team Udayavani, Dec 26, 2023, 10:49 AM IST

Flower show: ಫ್ಲವರ್‌ ಶೋನಲ್ಲಿ ಕೇಳಿಸಲಿದೆ ವಚನ ಸಾಹಿತ್ಯ

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೊ ತ್ಸವ ದಿನದ ಅಂಗವಾಗಿ “ವಿಶ್ವ ಗುರು ಬಸವಣ್ಣ ಮತ್ತು ವಚನ ಸಾಹಿತ್ಯ’ ವಿಷಯಾಧಾರಿತದ 215ನೇ ಫ‌ಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಜ್ಜಾಗಿದೆ.

ಪ್ರತಿವರ್ಷ ಒಂದೊಂದು ವಿಷಯ ಆಧಾರವಾಗಿಟ್ಟು ಕೊಂಡು ಲಾಲ್‌ಬಾಗ್‌ನಲ್ಲಿ ಆಯೋಜಿಸುವ ಫ‌ಲಪುಷ್ಪ ಪ್ರದರ್ಶನ, ಈ ಬಾರಿ ವಚನ ಸಾಹಿತ್ಯದ ಮೂಲಕ ವಿಶ್ವಕ್ಕೆ ಮಾನವೀಯತೆ, ಧಾರ್ಮಿಕತೆ ಸಾರಿದ ಬಸವೇಶ್ವರರು ಹಾಗೂ 12ನೇ ಶತಮಾನದ ವಚನ ಸಾಹಿತ್ಯ ಮುಖ್ಯ ವಾಗಿರಿಸಿಕೊಂಡಿದೆ. “ವಿಶ್ವ ಗುರು ಬಸವಣ್ಣ ಮತ್ತು ವಚನ ಸಾಹಿತ್ಯ’ ಶೀರ್ಷಿಕೆಯಡಿ ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ನಡೆಯುವ ಫ‌ಲಪುಷ್ಪ ಪ್ರದರ್ಶನಕ್ಕೆ ನಾಲ್ಕು ತಿಂಗಳುಗಳಿಂದ ಪೂರ್ವತಯಾರಿ ನಡೆಯುತ್ತಿದೆ.

ಜ.18ರಿಂದ 28ರವರೆಗೆ ಒಟ್ಟು ಹತ್ತು ದಿನ ಹಮ್ಮಿಕೊಳ್ಳುವ ಈ ಫ‌ಲಪುಷ್ಪ ಪ್ರದರ್ಶನಕ್ಕೆ ಒಟ್ಟು 2.75 ಕೋಟಿ ರೂ. ಮೀಸಲಿಡಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಮಾತ್ರವಲ್ಲದೇ ತಮಿಳುನಾಡು, ಕೇರಳ, ಮಹಾರಾಷ್ಟ್ರ, ಪೂನಾ, ಆಂಧ್ರ, ಊಟಿ ಸೇರಿ ದೇಶದ ವಿವಿಧ ರಾಜ್ಯಗಳಿಂದ ಹತ್ತಾರು ಬಗೆಯ ಹೂವು ಮತ್ತು ಹೂವಿನ ಕುಂಡಗಳನ್ನು ತರಿಸಲಾಗುತ್ತಿದೆ.

ಅದರಲ್ಲೂ ವಿಶೇಷವಾಗಿ ಸಿಂಬಿಡಿಯಂ ಆರ್ಕಿಡ್‌, ಶೀತವಲಯದ ಹೂವುಗಳು, ಏರ್‌ ಪ್ಲಾಂಟ್‌ಗಳನ್ನು ಮೊದಲ ಸಲ ಬಳಸಲಾಗುತ್ತಿದೆ. ಒಟ್ಟಾರೆ 80ಕ್ಕೂ ಹೆಚ್ಚು ವಿವಿಧ ಹೂವುಗಳನ್ನು ಉಪಯೋಗಿಸಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆ (ಲಾಲ್‌ಬಾಗ್‌) ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್‌ ಉದಯವಾಣಿಗೆ ತಿಳಿಸಿದ್ದಾರೆ.

ಫ‌ಲಪುಷ್ಪ ಪ್ರದರ್ಶನದ ಬಾರಿಯ ವಿಶೇಷತೆಗಳು :

ಲಾಲ್‌ಬಾಗ್‌ ಗಾಜಿನ ಮನೆ ಪ್ರವೇಶದಲ್ಲಿ ಬಸವಣ್ಣ ಅವರ ಪ್ರತಿಮೆ ವೀಕ್ಷಕರನ್ನು ಸ್ವಾಗತಿಸಲಿದೆ. 12ನೇ ಶತಮಾನದಲ್ಲಿ ಎಲ್ಲಾ ಧರ್ಮದ ಶರಣರು, ಕವಿಗಳು ಮತ್ತು ತತ್ವಜ್ಞಾನಿಗಳು ಒಂದೆಡೆ ಸೇರುತ್ತಿದ್ದ ಸಾಮಾಜಿಕ-ಧಾರ್ಮಿಕ ಸಂಸತ್ತು ಎಂದೇ ಖ್ಯಾತಿ ಪಡೆದ “ಅನುಭವ ಮಂಟಪ’, ಬಸವೇಶ್ವರರ ಐಕ್ಯ ಸ್ಥಳವಾದ ಮಂಟಪವು ಬೃಹತ್‌ ಆಕಾರವಾಗಿ ವಿವಿಧ ಲಕ್ಷಾಂತರ ಹೂವುಗಳಲ್ಲಿ ಅರಳಲಿವೆ. ವಿವಿಧ ಹೂವಿನ ಲ್ಯಾಂಡ್‌ ಸ್ಕೇಪ್‌ ಜತೆಗೆ ಅಲ್ಲಮ ಪ್ರಭು, ಅಕ್ಕಮಹಾದೇವಿ, ಮಾದಿಗರ ಚೆನ್ನಯ್ಯ ಒಳಗೊಂಡಂತೆ 12ನೇ ಶತಮಾನದಲ್ಲಿ ನೆಲೆಸಿದ್ದ ಪ್ರಮುಖ ವಚನಕಾರರ ಮೂರ್ತಿಗಳನ್ನು ಹೂವಿನಲ್ಲಿ ಅಲಂಕರಿಸಲಾಗುತ್ತದೆ.

ಲಾಲ್‌ಬಾಗ್‌ ಫ‌ಲಪುಷ್ಪ ಪ್ರದರ್ಶನ:ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ :

ಬೆಂಗಳೂರು: ಪ್ರತಿ ವರ್ಷದಂತೆ ತೋಟಗಾರಿಕೆ ಇಲಾಖೆಯು ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಲಾಲ್‌ಬಾಗ್‌ನಲ್ಲಿ 215ನೇ ಫ‌ಲಪುಷ್ಪ ಪ್ರದರ್ಶನ ಹಮ್ಮಿಕೊಂಡಿದ್ದು, ಈ ವೇಳೆ ನಡೆಯುವ ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನಿಸಿದೆ.

ಈ ಬಾರಿಯ ಪ್ರದರ್ಶನ “ವಿಶ್ವ ಗುರು ಬಸವಣ್ಣ ಮತ್ತು ವಚನ ಸಾಹಿತ್ಯ’ ಎಂಬ ವಿಷಯಾಧಾರಿತದಲ್ಲಿ ಜರುಗಲಿದೆ. ಇದರ ಭಾಗವಾಗಿ ನಡೆಸುವ ಇಕೆಬಾನ, ಜಾನೂರ್‌, ಥಾಯ್‌ ಆರ್ಟ್‌, ತರಕಾರಿ ಕೆತ್ತನೆ ಮತ್ತು ಇತರೆ ಪೂರಕ ಕಲೆಗಳ ಸ್ಪರ್ಧೆಗೆ ಲಾಲ್‌ಬಾಗ್‌ನ ತೋಟಗಾರಿಕೆ ಜಂಟಿ ನಿರ್ದೇಶಕರು(ಯೋಜನೆ) ಕಚೇರಿಯಿಂದ ಅರ್ಜಿ ಪಡೆದು ಜ.1ರಿಂದ 6ರವರೆಗೆ ಅರ್ಜಿ ಸಲ್ಲಿಸಬಹುದು. ಅದೇ ರೀತಿ, ಜ.8ರಿಂದ 16ರವರೆಗೆ ವಿವಿಧ ಅಲಂಕಾರಿಕ ತೋಟಗಳ ಸ್ಪರ್ಧೆ/ಕುಂಡದಲ್ಲಿ ಬೆಳೆದ ಗಿಡಗಳ ಸ್ಪರ್ಧೆ, ಜ.15ರಿಂದ 17ರವರೆಗೆ ಗಾಜಿನ ಮನೆ ಆವರಣದಲ್ಲಿ ಪ್ರದರ್ಶಿಕೆಗಳ ಪ್ರದರ್ಶಿಸಲು, ಜ.10ರಿಂದ 19ರವರೆಗೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಗೆ ಅರ್ಜಿ ಸಲ್ಲಿಸಬಹುದು. ತೋಟಗಾರಿಕೆ ಜಂಟಿ ನಿರ್ದೇಶಕರ(ತೋಟದ ಬೆಳೆಗಳು)ಕಚೇರಿಯಿಂದ ಮತ್ತು ಡಿ.28ರಿಂದ ಜ.6ರವರೆಗೆ ಇರುವ ಮಳಿಗೆಗಳ ಹಂಚಿಕೆಗೆ ತೋಟಗಾರಿಕೆ ಅಪರ ನಿರ್ದೇಶಕರು (ಹಣ್ಣುಗಳು)ಕಚೇರಿಯಿಂದ ಅರ್ಜಿ ಪಡೆದು, ಸಲ್ಲಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ (ಲಾಲ್‌ಬಾಗ್‌)ಉಪನಿರ್ದೇಶಕಿ ಡಾ.ಕುಸುಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗಾಗಿ ಮೊ.78926555167, 9900150979 ಸಂಪರ್ಕಿಸಬಹುದು.

ವಚನ ಸಾಹಿತ್ಯ ನಿರಂತರ ಮಾಹಿತಿ ಪ್ರಸಾರಕ್ಕೆ ವ್ಯವಸ್ಥೆ :

ಗಾಜಿನ ಮನೆ ಹೊರಾಂಗಣದಲ್ಲಿ ಫ್ಲವರ್‌ ಫ್ಲೋ, ನವಿಲು ಆಕಾರ ಮತ್ತು ಹೃದಯಾಕಾರದಲ್ಲಿ ವಿವಿಧ ಬಣ್ಣದ ಹೂವಿನ ಕುಂಡಗಳನ್ನು ಜೋಡಿಸಲಾಗುತ್ತದೆ. ಲಾಲ್‌ಬಾಗ್‌ನ 50 ಕಡೆ ಸುಂದರ ಹೂವುಗಳ ಪ್ರದರ್ಶನಕ್ಕೆ ಸಿದ್ಧಗೊಳಿಸಲಾಗುತ್ತದೆ. ಉದ್ಯಾನದ ಕೆಲ ಭಾಗಗಳಲ್ಲಿ ಬೃಹತ್‌ ಎಲ್‌ಇಡಿ ಪರದೆ ಅಳವಡಿಸಲಾಗುತ್ತಿದೆ. ವಚನ ಸಾಹಿತ್ಯ ಕುರಿತಂತೆ ನಿರಂತರ ಮಾಹಿತಿ ಪ್ರಸಾರಕ್ಕೆ ವ್ಯವಸ್ಥೆಗೊಳಿಸಲಾಗುತ್ತಿದೆ.

ವಿಶ್ವ ಗುರು ಬಸವಣ್ಣ, ವಚನ ಸಾಹಿತ್ಯ ಕುರಿತಂತೆ ಈ ಬಾರಿಯ ಫ‌ಲಪುಷ್ಪ ಪ್ರದರ್ಶನವಿರಲಿದೆ. 2.75 ಕೋಟಿ ರೂ.ನಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಜ.18ರಿಂದ 28ರವರೆಗೆ ಈ ಪ್ರದರ್ಶನ ಇರಲಿದೆ. 10 ಲಕ್ಷ ವೀಕ್ಷಕರು ಆಗಮಿಸುವ ನಿರೀಕ್ಷೆ ಇದೆ. ಇನ್ನೂ ಅನುಭವ, ಐಕ್ಯ ಮಂಟಪ ಎಷ್ಟು ವಿಸ್ತೀರ್ಣದಲ್ಲಿ ಹಾಗೂ ಎಷ್ಟು ಹೂವುಗಳಿಂದ ನಿರ್ಮಿಸಬೇಕು ಎಂಬ ಚರ್ಚೆಗಳು ನಡೆಯುತ್ತಿವೆ.-ಡಾ.ಎಂ.ಜಗದೀಶ್‌, ಜಂಟಿ ನಿರ್ದೇಶಕರು, ಲಾಲ್‌ಬಾಗ್‌. 

-ಭಾರತಿ ಸಜ್ಜನ್‌

ಟಾಪ್ ನ್ಯೂಸ್

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.