ನಗರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಡಗರ


Team Udayavani, Aug 25, 2018, 12:51 PM IST

sambramada.jpg

ಬೆಂಗಳೂರು: ರಾಜಧಾನಿಯಲ್ಲಿ ವರಮಹಾಲಕ್ಷ್ಮಿ ಹಬ್ಬ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸಿಲಿಕಾನ್‌ ಸಿಟಿಯ ಮನೆಗಳಲ್ಲಿ ಮಾವು-ಸೇಬು, ಮಲ್ಲಿಗೆ, ಸುಗಂಧ, ಕೇದಗೆಗಳಿಂದ ಅಲಕೃಂತಗೊಂಡಿದ್ದ ಲಕ್ಷ್ಮೀ ಶುಕ್ರವಾರ ಕಳೆಗಟ್ಟಿದಳು. ನಗರದ ಬಹುತೇಕ ದೇವಾಲಯಗಳಲ್ಲಿ ಧೈರ್ಯ ಲಕ್ಷ್ಮಿ, ಸಂತಾನ ಲಕ್ಷ್ಮಿ, ಧನಲಕ್ಷ್ಮಿ, ಧಾನ್ಯಲಕ್ಷ್ಮಿಯ ವಿವಿಧ ಅಲಂಕಾರಗಳಲ್ಲಿ ದೇವಿಯ ಮೂರ್ತಿಗಳು ಜನರಲ್ಲಿ ಭಕ್ತಿ ಮೂಡಿಸಿತ್ತು.

ಹಬ್ಬದ ಪ್ರಯುಕ್ತ  ಮನೆಗಳಲ್ಲಿ ಕಳಸ ಪ್ರತಿಷ್ಠಾಪಿಸಿ ಲಕ್ಷ್ಮಿ ಮುಖವಾಡಗಳನ್ನು ಕಟ್ಟಿ , ತ್ರಾಮದ ಬಿಂದಿಗೆ ಇರಿಸಿ ಸೀರೆ ಉಡಿಸಿಲಾಯಿತು. ಕೆಲವು ಮನೆಗಳಲ್ಲಿ ಬೆಳ್ಳಿಯ ಲಕ್ಷ್ಮೀ ಮುಖವಾಡ ಕೊಬ್ಬರಿ ಅಥವಾ ತೆಂಗಿನಕಾಯಿಯಲ್ಲಿ ಅಥವಾ ಅರಿಶಿಣದಲ್ಲಿ ಮಾಡಿದ ಮುಖವಾಡಗಳನ್ನು ಕಳಸಕ್ಕೆ ಕಟ್ಟಿದ್ದರು. ಅದಕ್ಕೆ ಆಭರಣಗಳನ್ನು ತೊಡಿಸಿ ಅಲಂಕಾರ ಮಾಡಲಾಗಿತ್ತು. ಕೆಲವು ಮನೆಗಳಲ್ಲಿ ವಿವಿಧ ನೋಟುಗಳಿಂದ ಶೃಂಗಾರಿಸಿದ್ದರು.

ಅಲ್ಲದೆ ದೇವರಿಗೆ ವಿವಿಧ ಸಿಹಿ ಪದಾರ್ಥಗಳ ನೈವೇದ್ಯ ಸಮರ್ಪಿಸಿ ಭಕ್ತಿ ಭಾವದಿಂದ ಪೂಜಿಸಲಾಯಿತು. ಸಂಜೆ ವೇಳೆಗೆ ಶ್ಲೋಕ ಪಠಿಸಿ ಹಾಡು ಹಾಡಿ ಲಕ್ಷ್ಮಿಗೆ ಆರತಿ ಬೆಳಗಿದರು. ರೇಷ್ಮೆ ಸೀರೆ ಧರಿಸಿದ ಮುತ್ತೈದೆಯರು, ಬಣ್ಣ ಬಣ್ಣದ ಫ್ಯಾನ್ಸಿ ಡ್ರೆಸ್‌ ತೊಟ್ಟ ಯುವತಿಯರು, ಮಕ್ಕಳು ತಮ್ಮ ನೆರೆಹೊರೆಯವರ ಮನೆಗಳಿಗೆ ತೆರಳಿ ಲಕ್ಷ್ಮಿಗೆ ನಮಿಸಿದರು. ನಂತರ ಅರಿಶಿನ ಕುಂಕುಮ ಮತ್ತು ಬಾಗೀನ ಪಡೆದುಕೊಂಡು ಬಂದರು.

ದೇವಾಲಯಗಳಲ್ಲೂ ವಿಶೇಷ ಪೂಜೆ: ಗವಿಪುರದ ಅಂಬಾಭವಾನಿ ದೇವಸ್ಥಾನ, ಬಂಡೆಮಹಾಕಾಳಿ ದೇವಸ್ಥಾನ, ಚಾಮರಾಜಪೇಟೆಯ ಅಂಬಾ ಭವಾನಿ, ಹನುಮಂತನಗರದ ಬಲಮುರಿ ಗಣಪತಿ ದೇವಾಲಯದಲ್ಲಿ ಪದ್ಮಾವತಿ, ಧರ್ಮರಾಯರಾಯಸ್ವಾಮಿ ದೇವಸ್ಥಾನದಲ್ಲಿ ದ್ರೌಪದಿ, ಬನಶಂಕರಿಯ ಬನಶಂಕರಮ್ಮ,

ವಾಸವಿ ಕನ್ಯಕಾಪರಮೇಶ್ವರಿ ದೇವಸ್ಥಾನ ಸೇರಿದಂತೆ ನಗರದ ವಿವಿಧ ದೇವಿ ದೇವಾಲಯಗಳಲ್ಲಿ  ಲಕ್ಷ್ಮಿ, ಮಹಾಲಕ್ಷ್ಮಿ, ಗಜಲಕ್ಷ್ಮಿ, ಅಷ್ಟಲಕ್ಷ್ಮಿ ಹೀಗೆ ನಾನಾ ಲಕ್ಷ್ಮಿಯರ ಅಲಂಕಾರ ಮಾಡಲಾಗಿತ್ತು. ಅರಿಶಿನ ಕುಂಕುಮ ಅಲಂಕಾರ, ಧಾನ್ಯದ ಅಲಂಕಾರ, ಡ್ರೈಫ್ರೂಟ್ಸ್‌ ಅಲಂಕಾರ, ಹಣ್ಣಿನ ಅಲಂಕಾರ, ನೋಟು ಮತ್ತು ಕಾಸಿನ ಅಲಂಕಾರ ಹೀಗೆ ನಾನಾ ಅಲಂಕಾರಗಳನ್ನು ಮಾಡಲಾಗಿತ್ತು. 

ಟಿ.ಆರ್‌. ಮಿಲ್‌ ಬಳಿಯಿರುವ ಲಕ್ಷ್ಮೀ ದೇವಸ್ಥಾನ, ಶ್ರೀನಗರದ ಲಕ್ಷ್ಮೀ ದೇವಸ್ಥಾನ, ದೇವಗಿರಿ ವೆಂಕಟರಮಣ ಲಕ್ಷ್ಮೀ ದೇವಸ್ಥಾನ, ಮಹಾಲಕ್ಷ್ಮಿ ಲೇಔಟ್‌ ಲಕ್ಷ್ಮೀ ದೇವಸ್ಥಾನ, ಶೇಷಾದ್ರಿಪುರಂನ ಮಹಾಲಕ್ಷ್ಮಿ ಮಂದಿರ, ಹೆಬ್ಟಾಳದ ಕೆಂಪಾಪುರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಹೋಮ ಹವನ ನಡೆಯಿತು. ಮುಂಜಾನೆಯಿಂದ ರಾತ್ರಿಯವರೆಗೆ ಭಕ್ತರು ಸಾಲುಗಟ್ಟಿ ಆಗಮಿಸಿದ್ದರು.

ಲಕ್ಷ್ಮಿ ವಿಗ್ರಹಕ್ಕೆ ವಿಶೇಷ ಅಲಂಕಾರ: ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಪದ್ಮನಾಭನಗರ ಲಕ್ಷ್ಮೀಕಾಂತ ದೇವಸ್ಥಾನದಲ್ಲಿರುವ 8 ಅಡಿ ಎತ್ತರದ ಲಕ್ಷ್ಮಿ ವಿಗ್ರಹಕ್ಕೆ ಅಲಂಕಾರ ಮತ್ತು ಪೂಜೆ ನೆರವೇರಿಸಲಾಯಿತು. ಧನ್ವಂತರಿ ರಸ್ತೆಯ ಲಕ್ಷ್ಮಿ ಹಯಗ್ರೀವ ಸನ್ನಿ ಯಲ್ಲಿ ಪುಟಾಣಿ ಲಕ್ಷ್ಮಿ ವಿಗ್ರಹವಿದೆ. ಇದು ಪುಟಾಣಿಯಾದರೂ ಭಕ್ತರ ನಂಬಿಕೆ ದೊಡ್ಡದು. ಹೀಗಾಗಿ ಇಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೂ ಭಕ್ತರು ಸಾಲುಗಟ್ಟಿ ದೇವಿಗೆ ಭಕ್ತಿ ಸಮರ್ಪಿಸಿದರು.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.