ಸಿಎಂ ಸಂದರ್ಶನ, ಸಂವಾದಕ್ಕೆ ಸ್ಟುಡಿಯೋ ಸಜ್ಜು
Team Udayavani, May 12, 2017, 2:08 AM IST
ಬೆಂಗಳೂರು: ಮುಖ್ಯಮಂತ್ರಿಯವರು ಮಾಧ್ಯಮಗಳೊಂದಿಗೆ ಸಂವಾದ ನಡೆಸಲು ಹಾಗೂ ದೃಶ್ಯ ಮಾಧ್ಯಮಗಳಿಗೆ ಸಂದರ್ಶನ ನೀಡಲು ಅನುಕೂಲವಾಗುವಂತೆ ಸುಸಜ್ಜಿತವಾಗಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಿರ್ಮಾಣವಾಗಿರುವ ‘ವರುಣ’ ಸ್ಟುಡಿಯೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಉದ್ಘಾಟಿಸಿದರು. ‘ಕೃಷ್ಣಾ’ದಲ್ಲಿ ಮಾಧ್ಯಮಗಳಿಗೆ ಸಂದರ್ಶನ ನೀಡಲು ಅನನುಕೂಲವಾಗುತ್ತಿತ್ತು. ಹಾಗಾಗಿ ಮಾಧ್ಯಮಗಳಿಗೆ ಸಂದರ್ಶನ ನೀಡಲು ಅಗತ್ಯ ಸೌಲಭ್ಯಗಳನ್ನು ಒಳಗೊಂಡ ಸ್ಟುಡಿಯೋ ನಿರ್ಮಿಸಲಾಗಿದೆ ಎಂದು ಹೇಳಿದರು.
ಸ್ಟುಡಿಯೋಗೆ ‘ವರುಣ’ ಎಂದು ಹೆಸರಿಟ್ಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಇದು ನಾನು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರದ ಹೆಸರಲ್ಲ. ವರುಣ ಎಂದರೆ ಮಳೆ ದೇವರ ಹೆಸರು. ನಮ್ಮ ಅಧಿಕೃತ ನಿವಾಸದ ಹೆಸರು ಕಾವೇರಿ ಎಂದಿದ್ದು, ಅದೇನು ಮಡಿಕೇರಿಯೇ?’ ಎಂದು ಪ್ರಶ್ನಿಸಿದರು. ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆಪ್ತ ಕಾರ್ಯದರ್ಶಿ ಹೀರಾ ನಾಯ್ಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್.ಆರ್.ವಿಶುಕುಮಾರ್ ಇದ್ದರು.
ಸ್ಟುಡಿಯೋದಲ್ಲಿ ಏನೇನಿದೆ?
ಗೃಹ ಕಚೇರಿ ‘ಕೃಷ್ಣಾ’ದ ಬಲಭಾಗದಲ್ಲಿ ಸುಸಜ್ಜಿತ ‘ವರುಣ’ ಸ್ಟುಡಿಯೋ ನಿರ್ಮಾಣವಾಗಿದೆ. ಸಂದರ್ಶನ, ಸಂವಾದಕ್ಕೆ ಪೂರಕವಾದ ಸಕಲ ಸೌಕರ್ಯವನ್ನು ಒಂದೇ ಸೂರಿನಡಿ ಕಲ್ಪಿಸಲಾಗಿದೆ. ಸಂದರ್ಶನಕ್ಕೆ ಅನುಕೂಲವಾಗುವಂತೆ ಆಸನ ವ್ಯವಸ್ಥೆ, ಧ್ವನಿ- ಬೆಳಕಿನ ಸೌಲಭ್ಯ, ಅಗತ್ಯಕ್ಕೆ ತಕ್ಕಂತೆ ಬದಲಾಯಿಸಬಹುದಾದ ಹಿನ್ನೆಲೆ ಪರದೆ, ಟೆಲಿಪ್ರಾಂಪ್ಟರ್, ರೆಕಾರ್ಡಿಂಗ್ ಸಲಕರಣೆಗಳು, ಕಂಪ್ಯೂಟರ್ ಸೇರಿದಂತೆ ಇತರೆ ಸೌಲಭ್ಯವನ್ನು ಸ್ಟುಡಿಯೋ ಒಳಗೊಂಡಿದೆ.
ಇದರಿಂದ ಎಲೆಕ್ಟ್ರಾನಿಕ್ ಮಾಧ್ಯಮಗಳ ಪ್ರತಿನಿಧಿಗಳು ತಮ್ಮ ಕ್ಯಾಮೆರಾದೊಂದಿಗೆ ತೆರಳಿ ಸ್ಟುಡಿಯೋದಲ್ಲೇ ಸಂಪೂರ್ಣ ಸಂದರ್ಶನ ನಡೆಸಬಹುದು. ಮಾಧ್ಯಮಗಳಿಗೆ ಸಂದರ್ಶನ ನೀಡಲು, ಸಂವಾದ ನಡೆಸುವುದಕ್ಕೆ ಸ್ಟುಡಿಯೋ ಸೀಮಿತವಾಗಿಲ್ಲ. ಮುಖ್ಯಮಂತ್ರಿಗಳು ಆಗಾಗ್ಗೆ ನೀಡುವ ಸಂದೇಶಗಳು, ಹೇಳಿಕೆಗಳ ಧ್ವನಿ ಹಾಗೂ ದೃಶ್ಯ ಚಿತ್ರೀಕರಣವೂ ಸ್ಟುಡಿಯೋದಲ್ಲೇ ನಡೆಯಲಿದೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ