![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ನಟಿ ವಸುಂಧರಾ ದಾಸ್ ನಿಂದನೆ: ಚಾಲಕ ಸೆರೆ
Team Udayavani, Nov 3, 2018, 12:17 PM IST
![nati.jpg](https://www.udayavani.com/wp-content/uploads/2018/11/3/nati-540x465.jpg)
ಬೆಂಗಳೂರು: ನಟಿ, ಗಾಯಕಿ ವಸುಂಧರಾ ದಾಸ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಸಿದ್ದ ಕಾರು ಚಾಲಕನನ್ನು ಮಲ್ಲೇಶ್ವರ ಪೊಲೀಸರ ಬಂಧಿಸಿದ್ದಾರೆ. ಹೆಬ್ಬಗೋಡಿ ನಿವಾಸಿ ಮುನಾವರ್ ಪಾಷಾ ಬಂಧಿತ ಆರೋಪಿ. ಘಟನೆ ಸಂಬಂಧ ನಟಿ ವಸುಂಧರಾ ದಾಸ್ ಅ.30ರಂದು ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅ.29ರಂದು ಸಂಜೆ 5 ಗಂಟೆ ಸುಮಾರಿಗೆ ನಟಿ ವಸುಂಧರಾ ದಾಸ್ ಸಂಬಂಧಿಕರ ಜತೆ ಮಲ್ಲೇಶ್ವರ ಕಡೆ ಹೋಗಲು ಕಾರಿನಲ್ಲಿ ಬಂದಿದ್ದು, ಭಾಷ್ಯಂ ವೃತ್ತದ ಸಿಗ್ನಲ್ನಲ್ಲಿ ಸಂಚಾರ ದಟ್ಟಣೆ ನಡುವೆ ಕಾರು ನಿಲ್ಲಿಸಿದ್ದಾರೆ. ಇದೇ ವೇಳೆ ಟೊಯೋಟೋ ಇಟಿಯೊಸ್ ಕಾರಿನಲ್ಲಿ ಬಂದ ಆರೋಪಿ ಸದಾಶಿವನಗರ ಕಡೆ ಹೋಗಲು ಬಲಕ್ಕೆ ತಿರುಗಲು ಸಿಗ್ನಲ್ನಲ್ಲಿಯೇ ಸ್ಪಲ್ಪ ಮುಂದೆ ಕಾರು ನಿಲ್ಲಿಸಿದ್ದಾನೆ.
ಸಿಗ್ನಲ್ ಬಿಡುತ್ತಿದ್ದಂತೆ ವಸುಂಧರಾ ದಾಸ್ ಮಲ್ಲೇಶ್ವರ ಕಡೆ ನೇರವಾಗಿ ಕಾರು ಚಲಾಯಿಸಿದ್ದಾರೆ. ಹೀಗಾಗಿ ಆರೋಪಿಗೆ ಬಲಗಡೆ ತಿರುಗಲು ಅವಕಾಶವಾಗಿಲ್ಲ. ಇದಕ್ಕೆ ಆಕ್ರೋಶಗೊಂಡ ಆರೋಪಿ ಕೂಡಲೇ ಬ್ರೇಕ್ ಹಾಕಿ ಕಾರು ನಿಲ್ಲಿಸಿ, ಕೈ ತೋರಿಸಿ ನಿಂದಿಸಿದ್ದಾನೆ.
ಅಲ್ಲದೆ, ಕಾರು ಹಿಂಬಾಲಿಸಿಕೊಂಡು ಬಂದು ಪದೇ ಪದೆ ಹಾರ್ನ್ ಮಾಡಿ ತೊಂದರೆ ಕೊಡುತ್ತಿದ್ದ. ಮಲ್ಲೇಶ್ವರ 18ನೇ ಕ್ರಾಸ್ನ ಸಂಪಿಗೆ ರಸ್ತೆ ಸಿಗ್ನಲ್ ಬಳಿ ಬಂದು ವಸುಂದರಾಗೆ ಕಾರು ನಿಲ್ಲಿಸುವಂತೆ ಸೂಚಿಸಿದಲ್ಲದೆ, ಕಾಲಿನಿಂದ ಕಾರನ್ನು ಒದ್ದು, ಕೈತೋರಿಸಿ ಎಚ್ಚರಿಕೆ ನೀಡಿದ್ದ ಎನ್ನಲಾಗಿದೆ. ಇದರಿಂದ ಗಾಬರಿಗೊಂಡ ವಸುಂಧರಾ ಮಲ್ಲೇಶ್ವರದ ಮಾರ್ಗೋಸಾ ರಸ್ತೆ ಕಡೆ ಹೋಗುತ್ತಿದ್ದರು.
ಆದರೂ ಆರೋಪಿ ಮತ್ತೂಮ್ಮೆ ಹಿಂಬಾಲಿಸಿ ಅವರ ಕಾರನ್ನು ಅಡ್ಡಗಟ್ಟಿ ಕಾರಿನ ಬಾಗಿಲನ್ನು ತೆಗೆಯಲು ಯತ್ನಿಸಿದ್ದಾನೆ. ಬಳಿಕ ಸಾರ್ವಜನಿಕವಾಗಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಇದನ್ನು ಪ್ರಶ್ನಿಸಿದಾಗ ವಸುಂಧರಾ ದಾಸ್ ಹಾಗೂ ಕಾರಿನಲ್ಲಿದ್ದ ಇತರರಿಗೂ ಬೈಯ್ದಿದ್ದಾನೆ. ಈ ಸಂಬಂಧ ನಟಿ ವಸುಂಧರಾ ದಾಸ್ ಮರುದಿನ(ಅ.30)ರಂದು ದೂರು ನೀಡಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.