ಪ್ರತ್ಯೇಕ ಧರ್ಮ: ಸರ್ಕಾರದ ನಿಧಾರಕ್ಕೆ ಮಹಾಸಭಾ ಖಂಡನೆ
Team Udayavani, Mar 24, 2018, 6:00 AM IST
ಬೆಂಗಳೂರು: ಲಿಂಗಾಯತ-ವೀರಶೈವ (ಬಸವ ತತ್ವ ಒಪ್ಪುವ) ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಅಖೀಲ ಭಾರತ ವೀರಶೈವ ಮಹಾಸಭಾ ವಿರೋಧ ವ್ಯಕ್ತಪಡಿಸಿ ಖಂಡನಾ ನಿರ್ಣಯ ಕೈಗೊಂಡಿದೆ.
ಶುಕ್ರವಾರ ನಡೆದ ಮಹಾಸಭಾ ಸಭೆಯಲ್ಲಿ “ಬಸವ ತತ್ವ ಒಪ್ಪುವ’ ಎಂಬ ಪದಗುತ್ಛಕ್ಕೆ ಮಹಾಸಭಾ ಆಕ್ಷೇಪ ವ್ಯಕ್ತಪಡಿಸಿ, ಪ್ರತ್ಯೇಕ ಧರ್ಮದ ಮಾನ್ಯತೆ ನೀಡಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ತೀರ್ಮಾನಕ್ಕೆ ತಮ್ಮ ಸಮ್ಮತಿ ಇಲ್ಲ ಎಂಬ ಸಂದೇಶವನ್ನೂ ರವಾನಿಸಿದೆ.
ಪ್ರತ್ಯೇಕ ಧರ್ಮ ಮಾನ್ಯತೆಗಾಗಿ ಲಿಂಗಾಯತ ಹಾಗೂ ವೀರಶೈವ ಇಬ್ಬರನ್ನೂ ಸೇರಿಸಿದ್ದೇವೆ. ಮಠಾಧೀಶರು ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಸಮರ್ಥಿಸಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರಕ್ಕೆ ಇದು ಒಂದು ರೀತಿಯ ಹಿನ್ನ°ಡೆಯಾದಂತಾಗಿದೆ. ಈ ಮೂಲಕ ಚುನಾವಣೆ ಹೊಸ್ತಿಲಲ್ಲಿ ಆಡಳಿತಾರೂಢ ಕಾಂಗ್ರೆಸ್ಗೆ ವೀರಶೈವ ಲಿಂಗಾಯತ ಸಮುದಾಯದ ಒಂದು ವರ್ಗ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದಂತಾಗಿದೆ. ಅಲ್ಲದೇ, ರಾಜಕೀಯ ಲೆಕ್ಕಾಚಾರಗಳು ವ್ಯತ್ಯಾಸಗಳಾಗುವ ಸಾಧ್ಯತೆ ಇದೆ.
ನಿರ್ಣಯ ಏನು?
ವೀರಶೈವ ಲಿಂಗಾಯಿತ ಎರಡೂ ಒಂದೇ ಆಗಿದ್ದು, ಸರ್ಕಾರ ಸಮಾಜ ಒಡೆಯುವ ಕೆಲಸಕ್ಕೆ ಮುಂದಾಗಿದೆ. ತಕ್ಷಣವೇ ಸಂಪುಟದ ನಿರ್ಣಯವನ್ನು ಹಿಂಪಡೆಯಬೇಕೆಂದು ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ.
ರಾಜ್ಯ ಸರ್ಕಾರ ಅಲ್ಪ ಸಂಖ್ಯಾತರ ಕಾಯ್ದೆ 2ಡಿ ಅಡಿಯಲ್ಲಿ ಲಿಂಗಾಯಿತ ಮತ್ತು ವೀರಶೈವ ಲಿಂಗಾಯಿತ (ಬಸವ ತತ್ವ ಒಪ್ಪುವರು ) ಧಾರ್ಮಿಕ ಅಲ್ಪ ಸಂಖ್ಯಾತರೆಂದು ಪರಿಗಣಿಸಿ, ಅಲ್ಪ ಸಂಖ್ಯಾತರ ಕಾಯ್ದೆ 2ಸಿ ಅಡಿಯಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಬಸವ ತತ್ವ ಒಪ್ಪುವರು ಅಥವಾ ಪಾಲಿಸುವವರು ಎಂದು ಯಾವುದೇ ತತ್ವವನ್ನು ಒತ್ತಾಯಪೂರ್ವಕವಾಗಿ ಹೇರುವುದು ಅಸಂವಿಧಾನಿಕ. ಆದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಬಸವ ತತ್ವವನ್ನು ಎಲ್ಲರೂ ಪಾಲಿಸುತ್ತಾರೆ. ಹೀಗಾಗಿ ಬಸವ ತತ್ವ ಪಾಲಿಸುವ ಎಂಬ ಪದ ಕೈ ಬಿಡಬೇಕೆಂಬ ಒತ್ತಾಯ ಸಭೆಯಲ್ಲಿ ಕೇಳಿ ಬಂದಿತು.
ಕೇಂದ್ರದ ಮೇಲೆ ಒತ್ತಡ:
ವೀರಶೈವ ಲಿಂಗಾಯತ ಸಮಾಜಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವಂತೆ ವೀರಶೈವ ಮಹಾಸಭೆ 2013ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಮನವಿ ಇನ್ನೂ ಪರಿಶೀಲನೆ ಹಂತದಲ್ಲಿದೆ. ಹಿಂದೆ ಮಹಾಸಭೆ ಸಲ್ಲಿಸಿದ ಮನವಿಯನ್ನು ಪುರಸ್ಕರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರ ಶಿಫಾರಸು ಮಾಡಲು ಸಭೆಯಲ್ಲಿ ನಿರ್ಣಯಿಸಲಾಗಿದೆ.
2013ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಇನ್ನೂ ಪರಿಶೀಲನೆ ಹಂತದಲ್ಲಿದೆ. ಆದರೆ, ಅದು ತಿರಸ್ಕೃತಗೊಂಡಿದೆ ಎಂದು ರಾಜಕೀಯ ಮುಖಂಡರು, ಮಠಾಧೀಶರು ಹಾಗೂ ಸಂಘಟನೆಗಳ ಮುಖಂಡರು ನೀಡುತ್ತಿರುವ ಹೇಳಿಕೆಯನ್ನು ಖಂಡಿಸಿರುವ ಮಹಾಸಭೆ, ತಿರಸ್ಕೃತಗೊಂಡ ದಾಖಲೆಗಳನ್ನು ಬಹಿರಂಗ ಪಡಿಸುವಂತೆ ಆಗ್ರಹಿಸಿತು.
ರಾಜ್ಯಾಧ್ಯಕ್ಷ ಎನ್. ತಿಪ್ಪಣ್ಣ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಮಾಜಿ ಸಚಿವೆಯರಾದ ರಾಣಿ ಸತೀಶ್, ಲೀಲಾದೇವಿ ಆರ್. ಪ್ರಸಾದ್, ಮಾಜಿ ಶಾಸಕ ವೀರಣ್ಣ ಚರಂತಿಮs…, ಮಹಾಸಭೆಯ ಪ್ರಧಾನ ಕಾರ್ಯದರ್ಶಿ ರೇಣುಕಾ ಪ್ರಸಾದ್ ಸೇರಿದಂತೆ ವೀರಶೈವ ಮುಖಂಡರು ಭಾಗವಹಿಸಿದ್ದರು.
ಯುಪಿಎ ಸರ್ಕಾರದ ಅವಧಿಯಲ್ಲಿ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಕಳುಹಿಸಿದ್ದ ಮನವಿ ತಿರಸ್ಕೃತಗೊಂಡಿಲ್ಲ. ಅದನ್ನೇ ಪುರಸ್ಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಬಸವ ತತ್ವ ಪಾಲಿಸುವವರು ಎಂದು ಸಮಾಜವನ್ನು ಒಡೆಯುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ನಮ್ಮ ವಿರೋಧವಿದೆ. ಈ ತೀರ್ಮಾನವನ್ನು ವಾಪಸ್ ಪಡೆಯಬೇಕು.
– ಶಾಮನೂರು ಶಿವಶಂಕರಪ್ಪ, ಅಖೀಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ.
ರಾಜ್ಯ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನವನ್ನು ಒಪ್ಪಲು ಸಾಧ್ಯವಿಲ್ಲ. ಬಸವ ತತ್ವವನ್ನು ಎಲ್ಲರೂ ನಂಬುತ್ತಾರೆ. ವೀರಶೈವ ಲಿಂಗಾಯತ ಎರಡೂ ಒಂದೆ. ಈಗ ಆಗಿರುವ ನಾನ್ಸೆನ್ಸ್ಗಳಿಗೆ ರಾಜ್ಯ ಸರ್ಕಾರವೇ ಹೊಣೆ. ಚುನಾವಣೆ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಒಡೆಯುವ ಪ್ರಯತ್ನ ಬೇಡ. ವೀರಶೈವ ಲಿಂಗಾಯತರು ಸರ್ಕಾರ ಭಾವಿಸಿದಷ್ಟು ಮೂರ್ಖರಲ್ಲ.
– ಎನ್. ತಿಪ್ಪಣ್ಣ, ಅಖೀಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!