ವೀರಶೈವ ಮಹಾಸಭಾ ನಡೆ ಅರ್ಥಹೀನ: ಮಾತೆ ಮಹಾದೇವಿ
Team Udayavani, Mar 25, 2018, 6:35 AM IST
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ಸಂಬಂಧ ಸರ್ಕಾರದ ನಿರ್ಧಾರವನ್ನು ವಿರೋಧಿಸುತ್ತಿರುವ ವೀರಶೈವ ಮಹಾಸಭಾದ ನಡೆ ಅರ್ಥಹೀನ ಎಂದು ರಾಷ್ಟ್ರೀಯ ಬಸವದಳ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 900 ವರ್ಷಗಳ ಹಿಂದೆ ಸ್ಥಾಪಿಸಿದ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕತೆಯ ಮಾನ್ಯತೆ ನೀಡಿರುವ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಅಭಿನಂದಿಸಬೇಕೇ ಹೊರತು ವಿರೋಧಿಸಬಾರದು ಎಂದು ಹೇಳಿದರು.
ವೀರಶೈವ ಮಹಾಸಭೆ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣನವರು “ವೀರಶೈವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ ಹಾಕುವುದಿಲ್ಲ’ ಎಂದು ಹೇಳಿದ್ದಾರೆ. ಮತ ಹಾಕುವುದು ಅವರವರ ವೈಯಕ್ತಿಕ ವಿಚಾರ. ಈ ರೀತಿ ಯಾರಿಗೂ ನಿರ್ಬಂಧ ಹೇರಬಾರದು. ಸರ್ಕಾರದ ಈ ದಿಟ್ಟ ನಿರ್ಧಾರದಿಂದ ಲಿಂಗಾಯತರು ಸಂತುಷ್ಟಗೊಂಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಕೈಹಿಡಿಯಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ