ತಜ್ಞರ ಸಮಿತಿ ನೇಮಕಕ್ಕೆ ವೀರಶೈವ ಮಹಾಸಭೆ ವಿರೋಧ


Team Udayavani, Dec 24, 2017, 6:45 AM IST

Lingayat_Veerashaiva_760x40.jpg

ಬೆಂಗಳೂರು: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ  ಅಲ್ಪ ಸಂಖ್ಯಾತ ಧರ್ಮದ ಮಾನ್ಯತೆ ನೀಡುವ ಕುರಿತು ತಜ್ಞರ ಸಮಿತಿ ರಚನೆ ಮಾಡಿರುವುದಕ್ಕೆ ವೀರಶೈವ ಮಹಾಸಭೆ ವಿರೋಧ ವ್ಯಕ್ತಪಡಿಸಿದೆ.

ತಜ್ಞರ ಸಮಿತಿ ರಚಿಸಲು ಅಲ್ಪ ಸಂಖ್ಯಾತ ಆಯೋಗಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ವೀರಶೈವ ಮಹಾಸಭೆಯ ರಾಜ್ಯ ಘಟಕದ ಅಧ್ಯಕ್ಷ ಎನ್‌. ತಿಪ್ಪಣ್ಣ  ತಿಳಿಸಿದ್ದಾರೆ. ಸಮಿತಿ ರಚಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆ. ಆದರೆ, ಸರ್ಕಾರ ರಾಜ್ಯಪಾಲರ ಆಜ್ಞಾನುಸಾರ ಅಲ್ಪ ಸಂಖ್ಯಾತ ಇಲಾಖೆ ಮೂಲಕ ಸಮಿತಿ ರಚಿಸುವ ಬದಲು ಅಲ್ಪ ಸಂಖ್ಯಾತ ಆಯೋಗದಿಂದ ಸಮಿತಿ ರಚಿಸಿರುವುದು ಕಾನೂನು ಬಾಹಿರ ಎಂದು ದೂರಿದ್ದಾರೆ. ಆಯೋಗ ರಚಿಸಿರುವ ಸಮಿತಿಯ ವರದಿಗೆ ಯಾವುದೇ ಮಾನ್ಯತೆ ಇರುವುದಿಲ್ಲವಾದ್ದರಿಂದ ಅದನ್ನು ವೀರಶೈವ ಮಹಾಸಭೆ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಸಮಿತಿಯಲ್ಲಿ ನೇಮಕಗೊಂಡಿರುವ ಏಳೂ ಜನರಿಗೆ ವೀರಶೈವ ಪರಂಪರೆಯ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಅಲ್ಲದೇ ಎಲ್ಲರೂ ಒಂದಿಲ್ಲೊಂದು ರೀತಿಯಲ್ಲಿ ಸರ್ಕಾರದ ಭಾಗವಾಗಿದ್ದಾರೆ. ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ನ್ಯಾಯಮೂರ್ತಿಯಾಗಿ ಒಳ್ಳೆಯ ಹೆಸರು ಪಡೆದಿದ್ದಾರೆ. ಆದರೆ, ವೀರಶೈವ ಧರ್ಮದ ಬಗ್ಗೆ ಅವರಿಗೆ ಆಳವಾದ ಅರಿವಿಲ್ಲ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಎಸ್‌.ಜಿ. ಸಿದ್ದರಾಮಯ್ಯ ಸರ್ಕಾರದ ಭಾಗವಾಗಿದ್ದುಕೊಂಡು ನಿಷ್ಪಕ್ಷಪಾತ ವರದಿ ನೀಡಲು ಹೇಗೆ ಸಾಧ್ಯವಿದೆ ಎಂದು ಪ್ರಶ್ನಿಸಿದ್ದಾರೆ.

ತಜ್ಞರ ಸಮಿತಿಯಲ್ಲಿ ವೀರಶೈವ ಲಿಂಗಾಯತ ಧರ್ಮದ ಬಗ್ಗೆ ಸಂಶೋಧನೆ ಮಾಡಿದವರು ಯಾರೂ ಇಲ್ಲ. ಅಲ್ಲದೇ ಕೆಲವರು ಈಗಾಗಲೇ ವೀರಶೈವ ಹೊರತು ಪಡಿಸಿ ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕೆಂದು ವಾದ ಮಾಡಿದ್ದಾರೆ. ಎಲ್ಲರೂ ಎಡ ಪಂಥೀಯ ವಿಚಾರಧಾರೆ ಉಳ್ಳವರಾಗಿದ್ದಾರೆ. ರಾಜ್ಯ ಸರ್ಕಾರ ಸಮಿತಿ ರಚಿಸುವ ಮೊದಲು ಸೌಜನ್ಯಕ್ಕಾದರೂ, ವೀರಶೈವ ಮಹಾಸಭೆಯ ಅಭಿಪ್ರಾಯವನ್ನು ಪಡೆಯಬೇಕಿತ್ತು. ಆದರೆ, ಮುಖ್ಯಮತ್ರಿ ಸಿದ್ದರಾಮಯ್ಯ ವೀರಶೈವ ಲಿಂಗಾಯತ ಧರ್ಮವನ್ನು ವಿಭಜಿಸಿ ರಾಜಕೀಯ ಲಾಭ ಮಾಡಿಕೊಳ್ಳಲು ಹುನ್ನಾರ ನಡೆಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲಿಂಗಾಯತ ಸ್ವತಂತ್ರ ಧರ್ಮ ಸ್ಥಾಪನೆಗೆ ಏಳು ಜನ ಲಿಂಗಾಯತ ಅಥವಾ ವೀರಶೈವಕ್ಕೆ ಸೇರದ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿದ ಸಮರ್ಥ ಹಾಗೂ ತಜ್ಞರ ಸಮಿತಿ ರಚಿಸಿರುವ ಕ್ರಮ ಮೆಚ್ಚುವಂಥದ್ದು. ಸರ್ಕಾರದ ಕ್ರಮ ಸ್ವಾಗತಾರ್ಹ.
– ಡಾ|ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು, ಗದಗ ತೋಂಟದಾರ್ಯ ಮಠದ ಜಗದ್ಗುರು.

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಕುರಿತು ಮುಖ್ಯಮಂತ್ರಿಯವರು ರಚಿಸಿದ ಸಮಿತಿಯಲ್ಲಿ ಇರುವವರಿಗೆ ವೀರಶೈವ-ಲಿಂಗಾಯತ ಸಂಸ್ಕೃತಿ ಗೊತ್ತಿಲ್ಲ. ಸಮಿತಿ ರಚನೆ ಸಂವಿಧಾನ ಬಾಹಿರ. ಚುನಾವಣೆಯ ಈ ಹಂತದಲ್ಲಿ ಸರ್ಕಾರ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ರಾಜ್ಯಪಾಲರು ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಾಕೀತು ಮಾಡಬೇಕು.
–  ರಂಭಾಪುರಿ ಪೀಠದ ಜಗದ್ಗುರು ಬಾಳೆಹೊನ್ನೂರು ಮಠ

ಸಿದ್ದರಾಮಯ್ಯ ಧರ್ಮ ಆಧಾರಿತ ರಾಜಕೀಯ ನಡೆಸುತ್ತಿರುವುದು ಸರಿಯಲ್ಲ. ಒಡೆದು ಆಳುವ ನೀತಿಗೆ ಎಂದಿಗೂ ಗೆಲುವು ಸಿಗಲು ಸಾಧ್ಯವಿಲ್ಲ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿಯನ್ನು ರಚಿಸುವ ಅವಶ್ಯಕತೆಯೇ ಇಲ್ಲ. ಸಿದ್ದರಾಮಯ್ಯ ಅನುಸರಿಸುತ್ತಿರುವ ರಾಜಕೀಯ ಅವರಿಗೆ ತಿರುಗಿ ಬೀಳಲಿದೆ.
– ಡಿ.ವಿ.ಸದಾನಂದ ಗೌಡ, ಕೇಂದ್ರ ಸಚಿವ.

ಟಾಪ್ ನ್ಯೂಸ್

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.