ವಾಹನ ಕಳ್ಳ ಸೆರೆ: 11 ಬೈಕ್, 2 ಆಟೋ ಜಪ್ತಿ
ರಾತ್ರಿ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ; ವಾಹನ ಮಾರಾಟ ಮಾಡಿ ಮೋಜು ಮಸ್ತಿ
Team Udayavani, Dec 4, 2022, 1:16 PM IST
ಬೆಂಗಳೂರು: ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕಳ್ಳನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಂಗೇರಿಯ ಬೀಡಿ ಕಾರ್ಮಿಕರ ಕಾಲೋನಿ ನಿವಾಸಿ ಇಮ್ರಾನ್ ಖಾನ್ (32) ಬಂಧಿತ.
ಆರೋಪಿಯಿಂದ 8.30 ಲಕ್ಷ ರೂ. ಮೌಲ್ಯದ 11 ದ್ವಿಚಕ್ರ ವಾಹನ ಹಾಗೂ 2 ಆಟೋ ಸೇರಿ ಒಟ್ಟು 13 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಇತ್ತೀಚೆಗೆ ಕೆಂಗೇರಿ ಭೈರವ ನಗರ ನಿವಾಸಿ ಪವಿತ್ರಾ ಎಂಬುವರ ಮನೆ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳುವಾಗಿತ್ತು. ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ಮನೆ ಎದುರು, ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ವಾಹನಗಳನ್ನು ರಾತ್ರಿ ವೇಳೆ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ. ಕದ್ದ ವಾಹನಗಳನ್ನು ಗ್ರಾಹಕರನ್ನು ಹುಡುಕಿ ಮಾರಾಟ ಮಾಡಿ ಬಂದ ಹಣದಿಂದ ಮೋಜಿನ ಜೀವನ ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈತನ ಬಂಧನದಿಂದ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 7 ದ್ವಿಚಕ್ರ ವಾಹನ ಕಳವು ಪ್ರಕರಣ ಪತ್ತೆಯಾಗಿವೆ. ಉಳಿದ 5 ದ್ವಿಚಕ್ರ ವಾಹನ ಹಾಗೂ 2 ಆಟೋ ರಿಕ್ಷಾ ಕಳವು ಸಂಬಂಧ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ