ಸರ್ಕಾರದ ಧ್ಯೇಯೋದ್ದೇಶ ಜಾರಿಗೆ ಆದ್ಯತೆ


Team Udayavani, Jul 1, 2018, 6:00 AM IST

180630kpn84.jpg

ಬೆಂಗಳೂರು: ಸರ್ಕಾರದ ಸೇವೆಗಳನ್ನು ಸಾಮಾನ್ಯ ಜನರಿಗೆ ಯಾವುದೇ ಅಡೆತಡೆಗಳಿಲ್ಲದೆ ಒದಗಿಸಲು ಪ್ರಥಮ ಆದ್ಯತೆ ನೀಡುತ್ತೇನೆಂದು 37ನೇ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ಟಿ.ಎಂ.ವಿಜಯ ಭಾಸ್ಕರ್‌ ಹೇಳಿದ್ದಾರೆ.

ಅಧಿಕಾರ ವಹಿಸಿಕೊಂಡ ಬಳಿಕ “ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, ಸರ್ಕಾರದ ಮುಂದಿರುವ ಸವಾಲು, ಶಾಸಕಾಂಗ- ಕಾರ್ಯಾಂಗದ ಸಮನ್ವಯತೆ, ಆಡಳಿತ ಬಿಗಿಗೊಳಿಸುವ ಬಗ್ಗೆ ವಿಚಾರ ಹಂಚಿಕೊಂಡಿದ್ದಾರೆ. ಅದರ ಸಂಕ್ಷಿಪ್ತ ವಿವರ ಹೀಗಿದೆ.

ನಿಮ್ಮ ಪ್ರಥಮ ಆದ್ಯತೆ?
ಸರ್ಕಾರಿ ಸೇವೆ, ಸವಲತ್ತುಗಳು ಸಾಮಾನ್ಯರಿಗೆ ನೇರವಾಗಿ ಸಿಗಬೇಕು. ಸೌಲಭ್ಯಕ್ಕಾಗಿ ಅವರು ಕಚೇರಿಯಿಂದ ಕಚೇರಿಗೆ ಓಡಾಡುವಂತಾಗಬಾರದು. ಸೇವೆ, ಸೌಲಭ್ಯಗಳನ್ನು ತ್ವರಿತವಾಗಿ ಕಲ್ಪಿಸಲು ಆದ್ಯತೆ ನೀಡಲಾಗುವುದು.

ಸೇವೆಗೆ ಸೇರಿದಾಗ ಮುಖ್ಯ ಕಾರ್ಯದರ್ಶಿಯಾಗುವ ನಿರೀಕ್ಷೆ ಇತ್ತೇ?
ಭಾರತೀಯ ಆಡಳಿತ ಸೇವೆಗೆ ಸೇರುವ ವಯಸ್ಸಿನ ಆಧಾರದ ಮೇಲೆ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೇರುವ ಸಾಧ್ಯತೆ
ನಿರ್ಧಾರವಾಗುತ್ತದೆ. ಅದರಂತೆ ಹಿರಿತನ, ಅನುಭವದ ಆಧಾರದ ಈ ಸ್ಥಾನ ದೊರೆತಿದೆ ಎಂದು ಭಾವಿಸಿದ್ದೇನೆ.

ಸರ್ಕಾರದ ಮುಂದಿರುವ ಸವಾಲುಗಳೇನು?
ರೈತರ ಕಲ್ಯಾಣ, ನಿರುದ್ಯೋಗ ಸಮಸ್ಯೆ ನಿವಾರಣೆ ಸೇರಿ ಇತರೆ ಸವಾಲುಗಳಿದ್ದು, ಅವುಗಳನ್ನು ನಿವಾರಿಸಲು
ಕಾರ್ಯಾಂಗದಿಂದ ಅಗತ್ಯವಿರುವ ಎಲ್ಲ ಪ್ರಯತ್ನ ಒಗ್ಗೂಡಿಸಿ ಕಾರ್ಯೋನ್ಮುಖಗೊಳಿಸಲು ಒತ್ತು ನೀಡಲಾಗುವುದು.

ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಮನ್ವಯತೆ ಇದೆಯೇ?
ಶಾಸಕಾಂಗದ ಆಶಯಗಳನ್ನು ಜಾರಿಗೊಳಿಸುವುದು ಕಾರ್ಯಾಂಗದ ಜವಾಬ್ದಾರಿ. ಎಲ್ಲರೂ ಒಂದು ತಂಡವಾಗಿ
ಕಾರ್ಯ ಪ್ರವೃತ್ತರಾದಾಗ ಸರ್ಕಾರದ ಧ್ಯೇಯೋದ್ದೇಶ ಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾಧ್ಯ. 
ಶಾಸಕಾಂಗಕ್ಕೆ ಪೂರಕವಾಗಿ ಕಾರ್ಯಾಂಗ ಕಾರ್ಯ ನಿರ್ವಹಿಸುತ್ತಿದೆ. 

ಕೆಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಕಾರ್ಯನಿರ್ವಹಣೆ ಸಮರ್ಪಕವಾಗಿಲ್ಲ ಎಂಬ ಆರೋಪದ ಬಗ್ಗೆ ಏನು ಹೇಳುವಿರಿ?
ಇದರ ಬಗ್ಗೆ ಮಾಹಿತಿಯಿಲ್ಲ. ಈ ಕುರಿತು ಸಮೀಕ್ಷೆ ನಡೆಸಿ ಪರಿಶೀಲಿಸಲಾಗುವುದು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಪ್ರೇರೇಪಿಸಲಾಗುವುದು.

3 ಅಧಿಕಾರಿಗಳ ವರ್ಗ
ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರನ್ನಾಗಿ ವಂದಿತಾ ಶರ್ಮಾ ಅವರನ್ನು
ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ,ಡಿ.ವಿ.ಪ್ರಸಾದ್‌ ಅವರನ್ನು ಸರ್ಕಾರದ ಹೆಚ್ಚುವರಿ ಮುಖ್ಯ 
ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂದೀಪ್‌ ದವೆ ಅವರಿಗೆ ಹೆಚ್ಚುವರಿಯಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಜವಾಬ್ದಾರಿ ವಹಿಸಲಾಗಿದೆ.

ಜನರಿಗೆ ಸ್ಪಂದಿಸುವುದು ನನ್ನ ಮೊದಲ ಆದ್ಯತೆಯಾಗಿತ್ತು. ಅದರಂತೆ ಕಾರ್ಯ ನಿರ್ವಹಿಸಿದ್ದೇನೆ. ಭೇಟಿಗಾಗಿ ಮೂರ್‍ನಾಲ್ಕು ಗಂಟೆ ಕಾಯುತ್ತಾ ಕುಳಿತವರಿಗೆ ಸ್ಪಂದಿಸುವ ಕಾರ್ಯವನ್ನು ಅದ್ಭುತವಾಗಿ ನಿರ್ವಹಿಸಿದ ತೃಪ್ತಿ ಇದೆ. 
– ಕೆ.ರತ್ನಪ್ರಭಾ
ನಿರ್ಗಮಿತ ಮುಖ್ಯ ಕಾರ್ಯದರ್ಶಿ

– ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.