ಮಾರ್ಗಸೂಚಿ ಉಲ್ಲಂಘನೆ: ಒಂದೇ ದಿನ 4.3 ಲಕ್ಷ ದಂಡ


Team Udayavani, Oct 4, 2020, 11:57 AM IST

ಮಾರ್ಗಸೂಚಿ ಉಲ್ಲಂಘನೆ: ಒಂದೇ ದಿನ 4.3 ಲಕ್ಷ ದಂಡ

ದುಬಾರಿ ದಂಡ ಪಾವತಿಸಲು ಆಕ್ಷೇಪ ವ್ಯಕ್ತಪಡಿಸಿದ ಸಾರ್ವಜನಿಕರು.

ಬೆಂಗಳೂರು: ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದವರ ಮೇಲೆ ತಲಾ ಸಾವಿರ ರೂ. ದಂಡ ವಿಧಿಸುತ್ತಿರುವುದಕ್ಕೆ ಸಾರ್ವಜನಿಕರ ರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಈ ಮಧ್ಯೆ ಮಾರ್ಷಲ್‌ಗ‌ಳು ಕೋವಿಡ್ ನಿಯಮ ಉಲ್ಲಂಘನೆ ಮಾಡಿದ 453 ಜನರಿಂದ ಬರೋಬ್ಬರಿ 4.3 ಲಕ್ಷ ರೂ. ಶನಿವಾರ ಒಂದೇ ದಿನ ದಂಡ ವಸೂಲಿ ಮಾಡಿದ್ದಾರೆ. ಮಾಸ್ಕ್ ಧರಿಸದೆ ಓಡಾಡಿದ 412 ಜನರಿಂದ ತಲಾ ಒಂದು ಸಾವಿರ ರೂ.ನಂತೆ 4,3,767 ರೂ. ದಂಡ ವಸೂಲಿ ಮಾಡಲಾಗಿದೆ. ಸಾಮಾಜಿಕ ಅಂತರ ಮರೆತ 41 ಜನರಿಂದ 35,200 ರೂ. ಸೇರಿ ಒಟ್ಟು 3,68,567 ರೂ. ದಂಡ ಸಂಗ್ರಹ ಮಾಡಲಾಗಿದೆ.

ನಿಯಮ ಉಲ್ಲಂಘನೆ ಮಾಡುತ್ತಿರುವವರ ಮೇಲೆ ತಲಾ ಒಂದು ಸಾವಿರ ರೂ. ದಂಡ ವಿಧಿಸುವುದಕ್ಕೆ ಹೋದ ಮಾರ್ಷಲ್‌ಗ‌ಳು ಶನಿವಾರ ಆಕ್ರೋಶಕ್ಕೆ ಗುರಿಯಾದರು. ಬಹುತೇಕ ಕಡೆಗಳಲ್ಲಿ ದಂಡ ಪಾವತಿ ಮಾಡುವುದಕ್ಕೆ ಜನರು ಆಕ್ಷೇಪ ವ್ಯಕ್ತಪಡಿಸಿದರು.

ಆರು ದಿನದಲ್ಲಿ 2 ಕೋಟಿಗೂ ಅಧಿಕ ದಂಡ ಸಂಗ್ರಹ :

 ಬೆಂಗಳೂರು: ಕೋವಿಡ್  ಹಿನ್ನೆಲೆಯಲ್ಲಿ ಮಾರ್ಚ್‌ನಿಂದ ತಾತ್ಕಾಲಿಕವಾಗಿಸಂಚಾರ ನಿಯಮ ಉಲ್ಲಂಘನೆ ವಿರುದ್ಧ  ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ಸಂಚಾರ ಪೊಲೀಸರು ಇದೀಗ ವಾಹನ ಗಳ ತಪಾಸಣೆ ಹಾಗೂ ಸ್ಥಳದಲ್ಲೇ ದಂಡ ವಿಧಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಈ ಸಂಬಂಧ ಸೆ.20ರಿಂದ ಸೆ.26 ರವರೆಗೆ ನಗರದ ಎಲ್ಲ ಸಂಚಾರ ಠಾಣೆವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಕೇವಲ ಆರೇ ದಿನದಲ್ಲಿ ಬರೋಬ್ಬರಿ 2,35,33,100 ರೂ. ದಂಡ ಸಂಗ್ರಹಿಸಿದ್ದಾರೆ. ಹೆಲ್ಮೆಟ್‌ ಧರಿಸದವರ ವಿರುದ್ಧ18,319 ಪ್ರಕರಣ ದಾಖಲಿಸಿ, 68,39,600 ರೂ., ಹಿಂಬದಿ ಹೆಲ್ಮೆಟ್‌  ಧರಿಸದವರ ವಿರುದ್ಧ11,606 ಪ್ರಕರಣ ದಾಖಲಿಸಿ 43,58,800 ರೂ. ದಂಡ ಸಂಗ್ರಹಿಸಿದ್ದಾರೆ. ಸಿಗ್ನಲ್‌ ಜಂಪಿಂಗ್‌ವಿರುದ್ಧ 5,967 ಪ್ರಕರಣ ದಾಖಲಿಸಿ 21,39,900 ರೂ. ಮೊಬೈಲ್‌ ಬಳಕೆ1,620 ಪ್ರಕರಣ ದಾಖಲಿಸಿ 11,10,200 ರೂ.ಸೀಟ್‌ ಬೆಲ್ಟ್ಧರಿಸದವರ ವಿರುದ್ಧ 2,228 ಪ್ರಕರಣ ದಾಖಲಿಸಿ 10,33,800 ರೂ., ನೋ ಎಂಟ್ರಿ 2,684 ಪ್ರಕರಣ ದಾಖಲಿಸಿ 10,18,600 ರೂ., ಸ್ಟಾಪ್‌ ಲೈನ್‌ ಉಲ್ಲಂಘನೆ1,171 ಪ್ರಕರಣದಾಖಲಿಸಿ 11,24,000 ರೂ. ಹಾಗೂ ವಾಹನ ಪರವಾನಿಗೆ ಕೊಂಡೊಯ್ಯದವರವಿರುದ್ಧ(ದ್ವಿಚಕ್ರವಾಹನ)394ಪ್ರಕರಣದಾಖಲಿಸಿ 2,11,000 ರೂ. ದಂಡ ಸಂಗ್ರಹಿಸಲಾಗಿದೆ.

ಇತರೆ 78 ವಿವಿಧ ಸಂಚಾರನಿಯಮ ಉಲ್ಲಂಘನೆಗಳ ವಿರುದ್ಧ ಪ್ರಕರಣದಾಖಲಿಸಿ 2,35,33,100 ರೂ. ದಂಡ  ಸಂಗ್ರಹಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.