ಕೋವಿಡ್‌ ನಿಯಮೋಲ್ಲಂಘನೆ ಒಂದು ಲಕ್ಷ ರೂ.ವರೆಗೆ ದಂಡ


Team Udayavani, Dec 6, 2020, 12:23 PM IST

ಕೋವಿಡ್‌ ನಿಯಮೋಲ್ಲಂಘನೆ ಒಂದು ಲಕ್ಷ ರೂ.ವರೆಗೆ ದಂಡ

ಬೆಂಗಳೂರು: ಮಹಾಮಾರಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ವಿಧಿಸಿರುವ ನಿಯಮಗಳನ್ನು ಪಾಲಿಸದವರ ವಿರುದ್ಧ ಭಾರಿ ಪ್ರಮಾಣದ “ದಂಡ ಪ್ರಯೋಗ’ಕ್ಕೆ ಮುಂದಾಗಿರುವ ಬೃಹತ್‌ ಬೆಂಗಳೂರುಮಹಾನಗರ ಪಾಲಿಕೆ(ಬಿಬಿಎಂಪಿ), ಕನಿಷ್ಠ 5 ಸಾವಿರದಿಂದ ಗರಿಷ್ಠ ಒಂದು ಲಕ್ಷ ರೂ. ವರೆಗೆ ದಂಡ ವಿಧಿಸಲು ನಿರ್ಧರಿಸಿದೆ.

ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಾದ ಹೋಟೆಲ್‌, ಚಿತ್ರಮಂದಿರ, ಕಲ್ಯಾಣ ಮಂಟಪ, ಮಾಲ್‌,ಅಂಗಡಿ-ಮುಂಗಟ್ಟುಗಳ ಮಾಲಿಕರು, ತಮ್ಮ ಆವರಣಗಳಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲನೆ ಆಗುವಂತೆ ನೋಡಿಕೊಳ್ಳ ಬೇಕು. ಇಲ್ಲದಿದ್ದರೆ, ಅಂತಹ ಮಾಲಿಕರ ಮೇಲೆ ಈ ದಂಡ ವಿಧಿಸಲಾಗುತ್ತದೆ. ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ-2020ರ ತಿದ್ದುಪಡಿ ಅನ್ವಯ ಈ ದಂಡ ಪ್ರಯೋಗ ಮಾಡಲಾಗುತ್ತಿದೆ.

ಹಾಗಾಗಿ, ಮಾಲಿಕರುಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸಿ ಒಳಗೆ ಪ್ರವೇಶಿಸುವ, ಸಾಮಾಜಿಕ ಅಂತರ ಕಾಪಾಡುವ ಮತ್ತು ಒಳ ಆವರಣದಲ್ಲಿ ಮಾಸ್ಕ್ ಧರಿಸಿರುವ ಕುರಿತು ಪರಿಶೀಲಿಸಿ, ಖಾತ್ರಿಪಡಿಸಿಕೊಳ್ಳ ಬೇಕು ಎಂದು ಪಾಲಿಕೆ ಸೂಚಿಸಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರತ ಆರೋಗ್ಯ ನಿರೀಕ್ಷಕರು ಮತ್ತು ವಾರ್ಡ್‌ ಮಾರ್ಷಲ್‌ಗ‌ಳು ದಂಡ ವಿಧಿಸಲಿದ್ದಾರೆ.

ಇದನ್ನೂ ಓದಿ : ಮಂಗಳೂರು: ಕಂಟೈನರ್ ಗೆ ಬೈಕ್ ಢಿಕ್ಕಿ, ಸವಾರ ಸ್ಥಳದಲ್ಲೇ ಸಾವು

ಯಾರಿಗೆಷ್ಟು ದಂಡ?(ರೂ.ಗಳಲ್ಲಿ) :

  • ಸ್ವ-ಸಹಾಯ ಪದ್ಧತಿ ಹೋಟೆಲ್‌ಗ‌ಳು, ದರ್ಶಿನಿ, ಆಹಾರ ಮಳಿಗೆ, ಬೀದಿಬದಿ ಫಾಸ್ಟ್‌ಫ‌ುಡ್‌ ಮಳಿಗೆಗಳು- 5,000
  • ಎಸಿ ಅಲ್ಲದ ರೆಸ್ಟೋರೆಂಟ್‌ಗಳು, ಪಾರ್ಟಿಹಾಲ್‌ಗ‌ಳು, ಅಂಗಡಿ/ ಮಳಿಗೆ, ಡಿಪಾರ್ಟ್‌ಮೆಂಟಲ್‌ ಸ್ಟೋರ್, ಖಾಸಗಿ ಬಸ್‌ ನಿಲ್ದಾಣ- 25,000
  • ಎಸಿ ರೆಸ್ಟೋರೆಂಟ್‌, ಪಾರ್ಟಿಹಾಲ್‌ಗ‌ಳು, ಡಿಪಾರ್ಟ್‌ಮೆಂಟಲ್‌ ಸ್ಟೋರ್, ಅಂಗಡಿ, ಬ್ರ್ಯಾಂಡೆಡ್‌ ಶಾಪ್ಸ್‌ (ಏಕ/ಬಹುಮಾದರಿ ಬ್ರ್ಯಾಂಡ್‌ಗಳು), ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್‌, ಶಾಪಿಂಗ್‌ ಮಾಲ್‌ಗ‌ಳು- 50,000
  • 3ಸ್ಟಾರ್‌ ಮತ್ತು ಅದಕ್ಕೂ ಹೆಚ್ಚಿನ ಸ್ಟಾರ್‌ ಹೋಟೆಲ್‌ಗ‌ಳು, 500 ಅಥವಾ ಅದಕ್ಕೂ ಅಧಿಕ ಆಸನ ಹೊಂದಿದ ಕಲ್ಯಾಣ ಮಂಟಪ ಅಥವಾ ಸಮುದಾಯ ಭವನಗಳು ಅಥವಾ ಸಾರ್ವಜನಿಕ ಸ್ಥಳಗಳು- 1,00,000
  • ಸಾರ್ವಜನಿಕ ಸಭೆ/ ಸಮಾರಂಭ/ ಕಾರ್ಯಕ್ರಮಗಳು/ ರ್ಯಾಲಿ/ ಕೂಟಗಳು/ ಆಚರಣೆಗಳು ಇತ್ಯಾದಿ- 50,000
  • ಮೇಲಿನವುಗಳನ್ನು ಹೊರತುಪಡಿಸಿ ಇತರೆ ಸಾರ್ವಜನಿಕ ಸ್ಥಳಗಳು- 10,000

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.