ಹವಾಮಾನ ವೈಪರೀತ್ಯದಿಂದ ವೈರಲ್‌ ಜ್ವರ

ಇನ್ನೂ ಎರಡ್ಮೂರು ದಿನ ಇದೇ ರೀತಿ ಚಳಿಯ ವಾತಾವರಣ; ವಿವಿಧ ಆಸ್ವತ್ರೆಗಳಲ್ಲಿ ದಾಖಲಾದ ಪ್ರಕರಣದಲ್ಲೂ ಏರಿಕೆ

Team Udayavani, Nov 24, 2022, 11:17 AM IST

7

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹವಾಮಾನದಲ್ಲಿ ವೈಪರೀತ್ಯ ಉಂಟಾಗಿದ್ದು, ನಗರದಲ್ಲಿ ಡೆಂಘೀ, ವೈರಲ್‌ ಜ್ವರ, ನೆಗಡಿ, ಕೆಮ್ಮು ಸೇರಿ ಆರೋಗ್ಯ ಸಮಸ್ಯೆ ಪ್ರಕರಣಗಳು ಹೆಚ್ಚಾಗಿವೆ.

ಇನ್ನೂ ಎರಡು ಮೂರು ದಿನಗಳ ಕಾಲ ಇದೇ ರೀತಿಯ ಚಳಿಯ ವಾತಾವರಣ ಮುಂದುವರಿಯಲಿದೆ. ಇದರ ಜತೆಗೆ ಶೀತ ಗಾಳಿಯಿಂದಾಗಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವೈದ್ಯರು ಅಭಿಪ್ರಾಯ ಪಡುತ್ತಾರೆ.

ಕಳೆದ 2 ವಾರಗಳಿಂದ ರಾಜ್ಯಾದ್ಯಂತ ವೈರಲ್‌ ಜ್ವರ, ಡೆಂಘೀ, ನ್ಯುಮೋನಿಯ ಕೇಸ್‌ಗಳು ತೀವ್ರವಾಗಿದೆ. ಶೀತ, ಕೆಮ್ಮು, ಮೈ-ಕೈ ನೋವಿನ ಜತೆಗೆ ನಾಲಗೆ ರುಚಿ ಇಲ್ಲದಿರುವ ಲಕ್ಷಣಗಳಿಂದ ಕೂಡಿ ಜ್ವರಗಳು ಬಹಳಷ್ಟು ಜನರನ್ನು ಕಾಡುತ್ತಿದೆ.

ವಾತಾವರಣದಲ್ಲಿ ಬದಲಾವಣೆಯಿಂದಾಗಿ ನ್ಯುಮೋನಿಯಾ,ಫ್ಲೂ ಜ್ವರದ ಕೇಸ್‌ಗಳು ಅಧಿಕವಾಗಿವೆ. ಇನ್ನು ಗಂಟಲು ನೋವಿನಿಂದ ಅತಿಯಾದ ಕೆಮ್ಮು, ಶ್ವಾಸಕೋಶದಲ್ಲಿ ಇನ್‌ಫೆಕ್ಷನ್‌ಗಳಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಾದ ಪ್ರಕರಣದಲ್ಲೂ ಏರಿಕೆ ಕಂಡು ಬಂದಿದೆ.

ಶೀತ, ಮಳೆ, ಚಳಿ, ಸದಾ ಮೋಡ ಇರುವ ಕಾಲದಲ್ಲಿ ಸಾಮಾನ್ಯವಾಗಿ ಹೊಸ ವೈರಸ್‌ಗಳು ಉತ್ಪತ್ತಿಯಾಗುತ್ತವೆ. ಆಯಾ ವಾತಾವರಣಕ್ಕೆ ಬೇರೆ-ಬೇರೆ ಮಾದರಿಯ ವೈರಸ್‌ಗಳು ಉತ್ಪತ್ತಿಯಾಗುತ್ತಿವೆ. ಪ್ರತಿಕೂಲ ಹವಾಮಾನದಿಂದ ವೈರಸ್‌ಗಳು ಬೇಗ ಒಬ್ಬರಿಂದ ಮತ್ತೂಬ್ಬರ ದೇಹಕ್ಕೆ ಹರಡುತ್ತವೆ ಎಂದು ತಜ್ಞ ವೈದ್ಯರು ತಿಳಿಸುತ್ತಾರೆ.

ಸಾಮಾನ್ಯವಾಗಿ ಪ್ರತಿ ವರ್ಷವೂ ಆಗಸ್ಟ್‌ -ಸೆಪ್ಟೆಂಬರ್‌ನಲ್ಲಿ ಡೆಂಘೀ ಹೆಚ್ಚು ಉಲ್ಬಣಗೊಳ್ಳುತ್ತಿತ್ತು. ಆದರೆ, ಆ ಎರಡು ತಿಂಗಳಲ್ಲೂ ನಿರಂತರವಾಗಿ ಮಳೆಯಾದ ಹಿನ್ನೆಲೆಯಲ್ಲಿ ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ಹೆಚ್ಚು ಡೆಂಘೀ ಸೊಳ್ಳೆಗಳು ಉತ್ಪತ್ತಿಯಾಗುವ ಸಾಧ್ಯತೆಗಳಿವೆ ಎಂದು ಹೇಳುತ್ತಾರೆ.

ಇತ್ತೀಚೆಗೆ ರೆಸ್ಪಿರೇಟರಿ ಸೆನ್ಸಿಟಿಯಲ್‌ ವೈರಸ್‌ 6 ವರ್ಷದ ಕೆಳಗಿನ ಮಕ್ಕಳ ಮೇಲೆ ಅಧಿಕವಾಗಿ ಕಾಡುತ್ತಿವೆ. ಈ ವೈರಸ್‌ನಿಂದ ಶ್ವಾಸನಾಳಗಳಲ್ಲಿ ಉರಿಯೂತ ಉಂಟಾಗಿ ಉಸಿರಾಡಲು ಸಮಸ್ಯೆ ಎದುರಾಗುತ್ತದೆ. ಇದರ ಜತೆಗೆ ಸಾಮಾನ್ಯವಾಗಿ ಚಿಗರೆಯಿಂದ ಬರುವ ರಿಕೆಟೈಲ್ಸ್‌ ಫಿವರ್‌ಗಳ ಪ್ರಮಾಣವೂ ಅಧಿಕವಾಗಿದೆ. ● ಡಾ|ಎನ್‌. ನಿಜಗುಣ, ವೈದ್ಯರು, ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ

ಜನರು ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳೇನು?

 ಚಳಿಯಿಂದ ರಕ್ಷಿಸಿಕೊಳ್ಳಲು ದಪ್ಪವಾದ ಸ್ವೆಟರ್‌, ಜರ್ಕಿನ್‌ನಂತಹ ಬೆಚ್ಚಗಿನ ಉಡುಪು ಧರಿಸಿ

 ಶೀತ ಗಾಳಿ ಒಳ ಹೋಗದಂತೆ ಕಿವಿಯನ್ನು ಹತ್ತಿಯಿಂದ ಮುಚ್ಚಿ

 ಪ್ರತಿ ಬಾರಿಯೂ ಕೈಯನ್ನು ಸೋಪಿನಲ್ಲಿ ತೊಳೆದೇ ಆಹಾರ ಸೇವಿಸಿ

 ಮಳೆಯಲ್ಲಿ ನೆನೆಯುವುದರಿಂದ ವೈರಸ್‌ ಗಳು ಉತ್ಪತ್ತಿಯಾಗಿ ಜ್ವರ ಬರಬಹುದು

 ಆದಷ್ಟು ಹೊರಗಿನ ಎಣ್ಣೆಯುಕ್ತ ಪದಾರ್ಥ ಸೇವಿಸಬೇಡಿ

 ಬಿಸಿ ನೀರಿನಲ್ಲಿ ಗಾರ್ಗಲ್‌ ಮಾಡುತ್ತಿರಿ.

 ವೇಸ್ಟ್‌ ಟೈಯರ್‌, ತ್ಯಾಜ್ಯ ಸಂಗ್ರಹದ ಸ್ಥಳಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ

 ಜ್ವರದ ಲಕ್ಷಣ ಕಂಡು ಬರುವವರು ಆಗಾಗ ಸ್ಟೀಮ್‌ ತೆಗೆದುಕೊಳ್ಳುತ್ತಿರಬೇಕು

 ಜ್ವರ ಬಂದಾಗ ವೈದ್ಯರನ್ನು ಭೇಟಿಯಾಗಿ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವುದು ಉತ್ತಮ

 ಮನೆಯಲ್ಲಿ ಒಬ್ಬರಿಗೆ ಜ್ವರದ ಲಕ್ಷಣ ಕಾಣಿಸಿಕೊಂಡರೆ ಮಾಸ್ಕ್ ಧರಿಸಿ ಮತ್ತೂಬ್ಬರ ಜತೆ ಅಂತರ ಕಾಯ್ದುಕೊಳ್ಳಿ.

 ಮಕ್ಕಳಿಗೆ ಕೆಮ್ಮು ನೆಗಡಿ ಲಕ್ಷಣಗಳು ಇದ್ದಾಗ ಶಾಲೆಗೆ ಕಳಿಸದೇ ಇರುವುದು ಒಳಿತು

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.