ತಾಯಿಗೆ ಮಗ ಥಳಿಸಿದ “ವೈರಲ್‌ ವಿಡಿಯೋ’ ತಂದಿಟ್ಟ ಪಜೀತಿ!


Team Udayavani, Dec 9, 2018, 12:21 PM IST

tayige-maga.jpg

ಬೆಂಗಳೂರು: ಈಗಿನ್ನೂ 9ನೇ ತರಗತಿ ವಿಧ್ಯಾಭ್ಯಾಸ ಮಾಡುತ್ತಿರುವ ಬಾಲಕನೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ತಾಯಿ ಮೇಲೆ ಹಲ್ಲೆ ನಡೆಸಿದ ವಿಡಿಯೋದಿಂದಾಗಿ ಇಡೀ ಕುಟುಂಬ ಮುಜುಗರ ಅನುಭವಿಸುವಂತಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ವಿಡಿಯೋ ಆಧರಿಸಿ ಜೆ.ಪಿ.ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮಗ ಪೊಲೀಸರ ವಶಕ್ಕೆ ಸೇರುತ್ತಿದ್ದಂತೆ ತಾಯಿ, ತಂದೆ, ಸಹೋದರಿ ಕಣ್ಣೀರು ಹಾಕುತ್ತಿದ್ದಾರೆ.

ವಿಡಿಯೋ ಆಧರಿಸಿ ಐಪಿಸಿ ಕಲಂ 509, 354, ಕೋಟಾ³ ಕಾಯಿದೆ (ಧೂಮಪಾನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. “ಸ್ನೇಹಿತರ ಮುಂದೆ ನನ್ನನ್ನು ಬೈದಿದ್ದಕ್ಕೆ ಹಲ್ಲೆ ನಡೆಸಿದೆ. ತಾಯಿಯೂ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ. ನಾವೆಲ್ಲರೂ ಚೆನ್ನಾಗಿದ್ದೇವೆ’ ಎಂದು ಬಾಲಕ ಹೇಳಿಕೆ ನೀಡಿದ್ದಾನೆ.

ಬಾಲಕನನ್ನು ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸುತ್ತೇವೆ. ಅಲ್ಲಿ, ತಾಯಿ ಹಾಗೂ ಮಗ ಹೇಳಿಕೆ ನೀಡಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಮಗನ ವರ್ತನೆ ಈ ಮಟ್ಟಕ್ಕೆ ಹೋಗುತ್ತದೆ ಎಂದು ಊಹಿಸಿರಲಿಲ್ಲ ಎಂದು ತಾಯಿ, ನೋವು ತೋಡಿಕೊಳ್ಳುತ್ತಿದ್ದಾರೆ.

ಹಲ್ಲೆಗೆ ಕಾರಣ ಏನು? : ಶಿವಮೊಗ್ಗ ಮೂಲದ ಮಹಿಳೆ, ಸರ್ಕಾರಿ ಉದ್ಯೋಗಿಯಾಗಿದ್ದು, ಪುತ್ರ ಹಾಗೂ ಮಗಳ ಜತೆ ಜೆ.ಪಿ.ನಗರದಲ್ಲಿ ವಾಸವಿದ್ದಾರೆ. ಅವರ ಪತಿ ಊರಿನಲ್ಲಿ ಕೃಷಿ ಮಾಡಿಕೊಂಡಿದ್ದು ಆಗಾಗ ನಗರಕ್ಕೆ ಬಂದು ಹೋಗುತ್ತಾರೆ.

ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ಬಾಲಕ, ಸ್ನೇಹಿತರ ಜತೆ ಸುತ್ತಾಡಿ, ಸಿಗರೇಟು ಸೇದುತ್ತಿದ್ದ. ಜತೆಗೆ, ವಿಪರೀತ ಹಣ ಖರ್ಚು ಮಾಡುತ್ತಿದ್ದ. ಇದಕ್ಕಾಗಿ ತಾಯಿಯನ್ನು ಪೀಡಿಸಿ ಹಣ ಪಡೆದುಕೊಳ್ಳುತ್ತಿದ್ದ. ಇದೇ ವಿಚಾರಕ್ಕೆ ತಾಯಿ ಬುದ್ಧಿವಾದ ಹೇಳಿ ಬೈಯುತ್ತಿದ್ದರು.

ಇತ್ತೀಚೆಗೆ ಆತನ ಸ್ನೇಹಿತರು ಮನೆಗೆ ಬಂದಿದ್ದಾಗ, “ನನ್ನ ಮಗನ ಜತೆ ಸೇರಿ ಯಾಕೆ ದುಡ್ಡು ಖರ್ಚು ಮಾಡಿಸುತ್ತೀರಾ? ಓದುವ ವಯಸ್ಸಲ್ಲಿ ಹೀಗೆಲ್ಲ ಮಾಡುವುದು ಸರಿಯಲ್ಲ. ನಿಮ್ಮೊಂದಿಗೆ ಇವನೂ ಹಾಳಾಗುತ್ತಿದ್ದಾನೆ’ ಎಂದು ಬೈದಿದ್ದಾರೆ. 

ಈ ವಿಚಾರಕ್ಕೆ ಕೋಕಗೊಂಡ ಪುತ್ರ, ಸ್ನೇಹಿತರು ಮನೆಯಿಂದ ತೆರಳುತ್ತಿದ್ದಂತೆ, ಸೋಫಾದಲ್ಲಿ ಕುಳಿತಿದ್ದ ತಾಯಿಗೆ ಬೈದಿದ್ದಾನೆ. ನನ್ನ ವಿಚಾರ ನಿನಗೇಕೆ ಬೇಕು. ಎಂದು ಅಸಭ್ಯ ಭಾಷೆ ಬಳಸಿ ನಿಂದಿಸಿದ್ದಾನೆ. ಜತೆಗೆ ಎರಡು ಬಾರಿ ಪೊರಕೆಯಿಂದ ಹೊಡೆದಿದ್ದಾನೆ. “ನನ್ನ ಬಗ್ಗೆ ಮಾತನಾಡಿದರೆ ಬೀಳ್ತಾವೆ ಎಂದು ಗೊತ್ತು ತಾನೆ. ನಾನು ನಿನ್ನ ತಂಟೆಗೆ ಬರಲ್ಲ, ನೀನ್ಯಾಕೆ ನನ್ನ ತಂಟೆಗೆ ಬರ್ತೀಯ?

ತಪ್ಪು ನಿಂದೇ ಇಟ್ಟುಕೊಂಡು ನನ್ನ ಮೇಲೆ ಹೇಳ್ತಿಯಾ’ ಎಂದು ಬೈದಿದ್ದಾನೆ. ಕುಟುಂಬ ಸದಸಯರೊಬ್ಬರು ಘಟನೆಯನ್ನು ವಿಡಿಯೋ ಮಾಡಿದ್ದು, ಆ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ತಾಯಿ ಹಾಗೂ ಮಗನ ನಡುವೆ ಈ ರೀತಿ ಹಲವು ಬಾರಿ ಜಗಳ ನಡೆದಿದ್ದು, ತಾಯಿ ಈ ವಿಚಾರನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದರು.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.