ವಿರಕ್ತರು-ವೀರಶೈವರು ಸಮಾಜದ ಕಣ್ಣುಗಳು
Team Udayavani, Jun 15, 2018, 11:48 AM IST
ಬೆಂಗಳೂರು: ವಿರಕ್ತರು ಮತ್ತು ವೀರಶೈವರು ಸಮಾಜದ ಎರಡು ಕಣ್ಣುಗಳು. ಇವೆರಡರಲ್ಲಿ ಯಾವುದಕ್ಕೇ ನೋವಾದರೂ ಸಮಸ್ಯೆ ಆಗುವುದು ಸಮಾಜಕ್ಕೇ ಎಂದು ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ತಿಳಿಸಿದರು.
ನಗರದ ಕೊಳದಮಠ ಮಹಾಸಂಸ್ಥಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಾಮಾತೆ ಶಿವಮ್ಮನವರ 47ನೇ ವಾರ್ಷಿಕ ಪುಣ್ಯಸ್ಮರಣೆ, ರೇಣುಕ, ಬಸವ ಮತ್ತು ಅಕ್ಕಮಹಾದೇವಿ ಜಯಂತ್ಯೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಇವನಾರವ ಇವನಾರವ ಎಂದೆನಿಸದಿರಯ್ಯ, ಇವ ನಮ್ಮವ ಇವ ನಮ್ಮವ ಎಂದೆನಿಸಯ್ಯ…’ ಎಂದು ಬಸವಣ್ಣ ಹೇಳಿದ್ದಾರೆ.
ಆದರೆ, ನಾವೆಲ್ಲಾ “ಇವ ನಮ್ಮನಲ್ಲ’ ಎಂದು ದೂರ ಹೋಗುತ್ತಿರುವುದು ದುರಂತ. ಒಬ್ಬರನ್ನು ಕಂಡರೆ, ಮತ್ತೂಬ್ಬರಿಗೆ ಆಗುವುದಿಲ್ಲ. ಈ ರೀತಿಯ ಮನಃಸ್ಥಿತಿ ಏಕೆ ಎಂದು ಬೇಸರ ವ್ಯಕ್ತಪಡಿಸಿದರು. ಬಸವಣ್ಣ, ಅಲ್ಲಮ, ರೇಣುಕಾಚಾರ್ಯರು ಸೇರಿದಂತೆ ಇವರೆಲ್ಲರೂ ಮಹಾಶಕ್ತಿಗಳು. ಅವರ ಚಿಂತನೆಗಳನ್ನು ಯಾವ ರೀತಿ ಅಳವಡಿಸಿಕೊಳ್ಳಬೇಕು ಎಂಬ ಬಗ್ಗೆ ಆಲೋಚಿಸಬೇಕು ಎಂದರು.
ಕೊಳದ ಮಠದಲ್ಲಿ ಬಸವಣ್ಣ ಮತ್ತು ರೇಣುಕಾಚಾರ್ಯರ ಜಯಂತ್ಯುತ್ಸವವನ್ನು ಒಟ್ಟಾಗಿ ಆಚರಿಸುವ ಮೂಲಕ ಇವರಿಬ್ಬರೂ ಸಮಾಜದ ಎರಡು ಕಣ್ಣುಗಳು ಎಂಬ ಸಂದೇಶವನ್ನು ಶಾಂತವೀರ ಸ್ವಾಮೀಜಿ ಸಾರಿದ್ದಾರೆ. ಈ ಆಚರಣೆ ಎಲ್ಲ ಮಠಗಳಲ್ಲೂ ಆಗಬೇಕು ಎಂದು ಹೇಳಿದರು.
ಕೊಳದಮಠದ ಶಾಂತವೀರ ಸ್ವಾಮೀಜಿ, ಕೇಂದ್ರ ಮಾಜಿ ಸಚಿವ ಡಾ.ಎಂ.ವಿ ರಾಜಶೇಖರಮೂರ್ತಿ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ್, ನಿವತ್ತ ಐಪಿಎಸ್ ಅಧಿಕಾರಿ ಜ್ಯೋತಿಪ್ರಕಾಶ್ ಮಿರ್ಜಿ ಮತ್ತಿತರರು ಉಪಸ್ಥಿತರಿದ್ದರು. ಸಂಜೆ ನಡೆದ ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಸಂಸ್ಥಾಪಕಿ ತೇಜಸ್ವಿನಿ ಅನಂತಕುಮಾರ್ ಅವರಿಗೆ “ಅಲ್ಲಮಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು