ವರ್ತಿಕಾ ಕಟಿಯಾರ್‌ಗೆ ಕ್ಲೀನ್‌ ಚಿಟ್‌


Team Udayavani, May 25, 2018, 11:53 AM IST

vartika.jpg

ಬೆಂಗಳೂರು: ಕಳೆದ ಮೂರು ವರ್ಷಗಳ ಹಿಂದೆ ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿ ಆಚರಣೆ ವೇಳೆ ಮಡಿಕೇರಿಯಲ್ಲಿ ಉಂಟಾದ ಗಲಭೆ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತ ಕುಟ್ಟಪ್ಪ ಸಾವಿನ ಪ್ರಕರಣದಲ್ಲಿ ಕೊಡಗಿನ ಅಂದಿನ ಎಸ್ಪಿ ವರ್ತಿಕಾ ಕಟಿಯಾರ್‌ ಕರ್ತವ್ಯ ಲೋಪ ಎಸಗಿಲ್ಲ ಎಂದು ಅಭಿಪ್ರಾಯಪಟ್ಟಿರುವ ಗೃಹ ಇಲಾಖೆ, ಅವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಕೈಬಿಟ್ಟಿದೆ.

2015ರ ನವೆಂಬರ್‌ 10ರಂದು ಮಡಿಕೇರಿಯಲ್ಲಿ ನಡೆದ ಟಿಪ್ಪು ಜಯಂತಿ ಆಚರಣೆ ವೇಳೆ ಪರಿಸ್ಥಿತಿಯನ್ನು ನಿಭಾಯಿಸಲು ಎಸ್ಪಿ ವರ್ತಿಕಾ ಕಟಿಯಾರ್‌ ಜೀವದ ಹಂಗು ತೊರೆದು, ಶಕ್ತಿ ಮೀರಿ ಪ್ರಯತ್ನಿಸಿದ್ದಾರೆ. ಅಲ್ಲದೆ ಪರಿಸ್ಥಿತಿ ಹತೋಟಿಗೆ ತರಲು ಸಿಬ್ಬಂದಿಯನ್ನು ಬಳಸಿಕೊಂಡು ಪ್ರಾಮಾಣಿಕವಾಗಿ ಪ್ರಯತ್ನಿಸಿರುವುದು ದೃಢಪಟ್ಟಿರುವುದರಿಂದ ಕರ್ತವ್ಯದಲ್ಲಿ ಉದಾಸೀನತೆ, ಅಜಾಗರೂಕತೆ ಆರೋಪಗಳಿಂದ ಮುಕ್ತಗೊಳಿಸಬಹುದು ಎಂದು ತನಿಖೆಯಲ್ಲಿ “ಕ್ಲೀನ್‌ಚಿಟ್‌’ ನೀಡಿದ್ದು, ವರ್ತಿಕಾ ಕಟಿಯಾರ್‌ ವಿರುದ್ಧ ಇಲಾಖೆ ತನಿಖೆ ಸೂಕ್ತವಲ್ಲ ಎಂದು ಏ.24 ರಂದು ಆದೇಶ ಹೊರಡಿಸಿದೆ.

ಘಟನೆ ಸಂಬಂಧ ಸರ್ಕಾರದ ಸೂಚನೆ ಮೇರೆಗೆ ಮ್ಯಾಜಿಸ್ಟ್ರಿಯಲ್‌ ತನಿಖೆ ನಡೆಸಿ ಮೈಸೂರಿನ ಅಂದಿನ ಜಿಲ್ಲಾಧಿಕಾರಿ ಸಿ.ಶಿಖಾ ನೀಡಿದ್ದ ವರದಿಯನ್ನು ಗೃಹ ಇಲಾಖೆ ಅಂಗೀಕರಿಸಿ, ಇಲಾಖಾ ವಿಚಾರಣೆ ನಡೆಸುವ ಸಂಬಂಧ ಸಮಜಾಯಿಷಿ ನೀಡುವಂತೆ ವರ್ತಿಕಾ ಕಟಿಯಾರ್‌ಗೆ ಗೃಹ ಇಲಾಖೆ ನೋಟಿಸ್‌ ಜಾರಿಗೊಳಿಸಿತ್ತು.

ಈ ಹಿನ್ನೆಲೆಯಲ್ಲಿ ವರ್ತಿಕಾ, ಟಿಪ್ಪು ಜಯಂತಿ ಆಚರಣೆ ಸಂಬಂಧ ಮುಂಜಾಗ್ರತಾ ಕ್ರಮವಾಗಿ ವಿವಿಧ ಕೋಮುಗಳ ಮುಖಂಡರ ಜತೆ ಸಂಧಾನ ಸಭೆ ನಡೆಸಿದ್ದು, ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಕ್ರಮ ಕೈಗೊಂಡಿದ್ದಾರೆ. ಬೂದಿ ಮುಚ್ಚಿದ್ದ ಕೆಂಡದಂತಿದ್ದ ಪರಿಸ್ಥಿತಿಯನ್ನು ಹತೋಟಿಗೆ ತಂದು, 100ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ. ಕುಟ್ಟಪ್ಪ ಹಾಗೂ ಸಾಹುಲ್‌ ಹಮೀದ್‌ ಪ್ರಕರಣಗಳ ಆರೋಪಿಗಳ ಬಂಧನ ಸೇರಿ ಇನ್ನಿತರ ವಿವರಗಳ ಸ್ಪಷ್ಟೀಕರಣವನ್ನು ಗೃಹ ಇಲಾಖೆ ಒಪ್ಪಿಕೊಂಡಿದ್ದು, ಅವರನ್ನು ದೋಷಮುಕ್ತಗೊಳಿಸಿದೆ. 

ಶಿಖಾ ವರದಿ ಒಪ್ಪಿದ್ದ ಸರ್ಕಾರ?: ಘಟನೆ ಬಗ್ಗೆ ತನಿಖೆ ನಡೆಸಿದ್ದ ಡಿಸಿ ಶಿಖಾ, ಕೊಡಗಿನ ಅಂದಿನ ಜಿಲ್ಲಾಧಿಕಾರಿ ಮೀರ್‌ ಅನಿಸ್‌ ಅಹ್ಮದ್‌ ಹಾಗೂ ಎಸ್ಪಿ ವರ್ತಿಕಾ ಕಟಿಯಾರ್‌, ಆಡಳಿತ ಹಾಗೂ ಪೊಲೀಸ್‌ ಅಧಿಕಾರಿಗಳು ಪರಿಸ್ಥಿತಿ ನಿಭಾಯಿಸಲು ಕಾನೂನಿನ ಅಡಿಯಲ್ಲಿ ಬಳಸಲು ಅಧಿಕಾರಗಳಿದ್ದರೂ ಚಲಾಯಿಸದೇ ಉದಾಸೀನತೆ ತೋರಿ ವಿಫ‌ಲರಾಗಿದ್ದಾರೆ ಎಂಬ ಪ್ರಮುಖ ಅಂಶ ಸೇರಿದಂತೆ ಇನ್ನಿತರ ವಿವರಗಳನ್ನೊಳಗೊಂಡ ವರದಿ ಸಲ್ಲಿಸಿದ್ದರು.

ಈ ವರದಿಯನ್ನು ಅಂಗೀಕರಿಸಿದ್ದ ಸರ್ಕಾರ, ಕರ್ತವ್ಯ ನಿರ್ವಹಿಸಲು ವಿಫ‌ಲವಾದ ಜಿಲ್ಲಾಧಿಕಾರಿ ಮೀರ್‌ ಅನಿಸ್‌ ಅಹ್ಮದ್‌ ಹಾಗೂ ಎಸ್ಪಿ ವರ್ತಿಕಾ ಕಟಿಯಾರ್‌ ಅವರನ್ನು ನಾನ್‌ ಎಕ್ಸಿಕ್ಯೂಟೀವ್‌ ಹುದ್ದೆಗೆ ವರ್ಗಾಯಿಸಿತ್ತು. ಇಲಾಖಾ ತನಿಖೆ ನಡೆಸುವ ಸಲುವಾಗಿ ಕಾರಣ ಕೇಳಿ ಇಬ್ಬರಿಗೂ ನೋಟಿಸ್‌ ಜಾರಿಗೊಳಿಸಿತ್ತು. ದಕ್ಷಿಣ ವಲಯದ ಅಂದಿನ ಡಿಜಿಪಿ ನವೆಂಬರ್‌ 9ರಂದು ಕೇಂದ್ರಸ್ಥಾನದಲ್ಲಿ ತಂಗದಿರುವ ಬಗ್ಗೆ ಸ್ಪಷ್ಟೀಕರಣ ಕೇಳುವ ಬಗ್ಗೆ ನಿರ್ಧಾರ ಕೈಗೊಂಡಿತ್ತು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.