ಮೈಸೂರಲ್ಲೇ ವಿಷ್ಣು ಸ್ಮಾರಕ ನಿರ್ಮಿಸಲಿ


Team Udayavani, Nov 30, 2018, 6:00 AM IST

bharathi-vishnuvardhan.jpg

ಬೆಂಗಳೂರು: ನಟ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣ ವಿಚಾರ ದಿನದಿಂದ ದಿನಕ್ಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಶಾಸಕ, ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ಹಾಗೂ ನಿರ್ಮಾಪಕ ಕೆ. ಮಂಜು ಗುರುವಾರ ಭಾರತಿ ವಿಷ್ಣುವರ್ಧನ್‌ ಅವರನ್ನು ಭೇಟಿ ಮಾಡಿ ಸ್ಮಾರಕ ನಿರ್ಮಾಣ ವಿಚಾರ ಕುರಿತಂತೆ ಚರ್ಚಿಸಿದರು. ಇದೇ ವೇಳೆ ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಿಸುವಂತೆ ವಿಷ್ಣುವರ್ಧನ್‌ ಕುಟುಂಬ ಮುನಿರತ್ನ  ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದೆ.

ಬಳಿಕ ಮಾತನಾಡಿದ ಮುನಿರತ್ನ, “ವಿಷ್ಣುವರ್ಧನ್‌ ಕುಟುಂಬ ಸ್ಮಾರಕ ನಿರ್ಮಾಣ ಕುರಿತು ಮುಖ್ಯಮಂತ್ರಿಗೆ ಮನವಿ ಪತ್ರ ಬರೆದು, ನನಗೆ ನೀಡಿದ್ದಾರೆ. ಹಾಗಾಗಿ ಅದರಲ್ಲಿ ಏನಿದೆ ಎಂದು ನಾನು ಓದಲು ಹೋಗುವುದಿಲ್ಲ.  ಈ ಪತ್ರವನ್ನು ಮುಖ್ಯಮಂತ್ರಿಗಳಿಗೆ ತಲುಪಿಸಿ, ಸ್ಮಾರಕ ನಿರ್ಮಾಣಕ್ಕೆ ಒತ್ತಾಯಿಸುತ್ತೇನೆ. ಸ್ಮಾರಕ ನಿರ್ಮಾಣ ವಿಚಾರವಾಗಿ ಚಿತ್ರರಂಗ ಹಾಗೂ ಅಭಿಮಾನಿಗಳ ಸಲಹೆ ಪಡೆದುಕೊಳ್ಳುತ್ತೇವೆ. ಆದರೆ, ಕುಟುಂಬದ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. ಅದೇ ಅಂತಿಮ. ಈಗಾಗಲೇ ನಿರ್ಮಾಣವಾಗಿರುವ ಡಾ. ರಾಜ್‌ ಹಾಗೂ ಅಂಬರೀಶ್‌ ಸ್ಮಾರಕದಂತೆಯೇ, ವಿಷ್ಣುವರ್ಧನ್‌ ಸ್ಮಾರಕವೂ ನಿರ್ಮಾಣ ಆಗಬೇಕು ಎಂಬುದು ನಮ್ಮ ಆಸೆ’ ಎಂದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಭಾರತಿ ವಿಷ್ಣುವರ್ಧನ್‌, “ಅಭಿಮಾನ್‌ ಸ್ಟುಡಿಯೋ ಜಾಗದ ವಿವಾದ ಕೋರ್ಟ್‌ನಲ್ಲಿದೆ. ಅದು ಬಗೆಹರಿಯದ ವ್ಯಾಜ್ಯ. ಹೀಗಾಗಿಯೇ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣವಾಗಲಿ ಎಂಬುದು ನಮ್ಮ ಆಶಯ. ಅದಕ್ಕಾಗಿ ಈಗಾಗಲೇ ಗುದ್ದಲಿ ಪೂಜೆ ಕೂಡ ಆಗಿದೆ. ಆದರೆ, ಅಲ್ಲೂ ಒಂದಷ್ಟು ಕಾನೂನು ಸಮಸ್ಯೆಗಳು ಬಂದಿದ್ದರಿಂದ  ಕೆಲಸ ನಿಂತು ಹೋಯ್ತು. ಅದನ್ನೆಲ್ಲ ಬಗೆಹರಿಸಿ ಸ್ಮಾರಕ ನಿರ್ಮಿಸಿದರೆ ಸಾಕು. ಈ ವಿಚಾರವನ್ನು ಇನ್ನೂ ಮುಂದುವರಿಸಲು ನಮಗೂ ಇಷ್ಟವಿಲ್ಲ. ಆದಷ್ಟು ಬೇಗ ಸರಕಾರ ಈ ಬಗ್ಗೆ ನಿರ್ಧರಿಸಲಿ’ ಎಂದರು. ಸ್ಮಾರಕ ನಿರ್ಮಾಣಕ್ಕೆ ಮೈಸೂರೇ ಕಡೆ ಆಯ್ಕೆ ಎಂಬುದು ನಮ್ಮ ಕುಟುಂಬದ ನಿರ್ಧಾರ. ಇಲ್ಲಾ ಅಂದ್ರೆ ಸ್ಮಾರಕ ನಿರ್ಮಾಣ ಮಾಡುವ ಯೋಚನೆಯೇ ಬೇಡ ಎಂದು ವಿಷ್ಣುವರ್ಧನ್‌ ಮಗಳು ಕೀರ್ತಿ ಹೇಳಿದರು.

ಸ್ಮಾರಕಕ್ಕೆ ಜಾಗ ನೀಡಲು ಸಿದ್ಧ: ಗಣೇಶ್‌
ವಿಷ್ಣು ಸ್ಮಾರಕ ವಿವಾದ ಜೋರಾಗುತ್ತಿದ್ದಂತೆ ಅಭಿಮಾನ್‌ ಸ್ಟುಡಿಯೋದ ಮಾಲೀಕತ್ವ ಹೊಂದಿರುವ ಹಿರಿಯ ನಟ ದಿವಂಗತ ಬಾಲಕೃಷ್ಣ ಅವರ ಪುತ್ರ ಗಣೇಶ್‌, “ವಿಷ್ಣು ಸಮಾಧಿ ನಿರ್ಮಾಣಕ್ಕೆ 50/150 ಅಳತೆಯ ಜಾಗವನ್ನು ಉಚಿತವಾಗಿ ನೀಡಲು ಸಿದ್ಧ’ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಗಣೇಶ್‌, “ಇಲ್ಲಿವರೆಗೆ ಈ ಸ್ಟುಡಿಯೋ ಮಾಲೀಕತ್ವದ ವಿವಾದ ಕೋರ್ಟ್‌ನಲ್ಲಿತ್ತು. ಈಗ ವ್ಯಾಜ್ಯ ಬಗೆಹರಿದಿದ್ದು, ಸಂಪೂರ್ಣ ಮಾಲೀಕತ್ವ  ನನಗೆ ಬಂದಿದೆ. ಹಾಗಾಗಿ, ಸ್ಮಾರಕ ನಿರ್ಮಾಣಕ್ಕೆ ಬೇಕಾದ ಜಾಗವನ್ನು ಉಚಿತವಾಗಿ ನೀಡಲಿದ್ದೇನೆ. ಆದರೆ, ಸರ್ಕಾರ ನಮಗೆ ಸಹಕಾರ ನೀಡಬೇಕು’ ಎಂದಿದ್ದಾರೆ.

ಉಚಿತವಾಗಿ ಜಾಗ ನೀಡಲು
ಮುಂದಾದ ಅಭಿಮಾನಿ

ವಿಷ್ಣು ಸ್ಮಾರಕ ನಿರ್ಮಾಣದ ವಿವಾದವನ್ನು ಕಂಡು ಬೇಸತ್ತ ಅಭಿಮಾನಿಯೊಬ್ಬರು ಮಂಡ್ಯದ ಶ್ರೀರಂಗಪಟ್ಟಣದ ಬಳಿ ಇರುವ ತನ್ನ ಜಮೀನಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡುವುದಾಗಿ ಹೇಳಿದ್ದಾರೆ. ವಿಷ್ಣು ಅಭಿಮಾನಿಯಾಗಿರುವ ಕೆ.ಸಿ.ಪಿ.ರಾಜಣ್ಣ ಅವರು ಈ ನಿರ್ಧಾರ ಕೈಗೊಂಡಿದ್ದು, ಸರ್ಕಾರ ಹಾಗೂ ವಿಷ್ಣು ಕುಟುಂಬ ಒಪ್ಪಿದರೆ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಬೀಳುವಷ್ಟು ಜಾಗ ನೀಡಲು ಸಿದ್ಧ ಎಂದಿದ್ದಾರೆ. ಈ ನಡುವೆಯೇ ವಿಷ್ಣುವರ್ಧನ್‌ ಅಭಿಮಾನಿಗಳು ಸ್ಮಾರಕಕ್ಕೆ ಬೇಕಾದ ಜಮೀನನ್ನು ತಾವೇ ಹಣ ಹೊಂದಿಸಿ ಖರೀದಿಸಲು ಸಿದ್ಧ ಎಂದು ಘೋಷಿಸಿದ್ದಾರೆ.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.