ಬದಲಾವಣೆ ಜಗದ ನಿಯಮ: ವಿಶ್ವನಾಥ್
Team Udayavani, Jul 5, 2017, 3:25 AM IST
ಬೆಂಗಳೂರು: ‘ರಾಜಕಾರಣ ನಿಂತ ನೀರಲ್ಲ, ಜಡತ್ವವೂ ಅಲ್ಲ. ರಾಜಕಾರಣ ಎಂಬುದು ಜಂಗಮ. ಆಯಾ ಸಮಯ, ಸಂದರ್ಭ, ಸನ್ನಿವೇಶ, ಪರಿಸ್ಥಿತಿಗೆ ತಕ್ಕಂತೆ ಬದಲಾವಣೆ ಜಗದ ನಿಯಮ. ನಾನು ಹೊಸ ಮನೆಗೆ ಪ್ರವೇಶ ಮಾಡಿದ್ದೇನೆ. ಎಲ್ಲವೂ ಯೋಗಾ..ಯೋಗ’ ಇವು ಕಾಂಗ್ರೆಸ್ನಿಂದ ಜೆಡಿಎಸ್ಗೆ ಸೇರ್ಪಡೆ ಮೂಲಕ ತೆನೆ ಹೊತ್ತ ‘ಹಳ್ಳಿ ಹಕ್ಕಿ’ ಖ್ಯಾತಿಯ ಮಾಜಿ ಸಚಿವ ಹಾಗೂ ಸಂಸದ ಎಚ್. ವಿಶ್ವನಾಥ್ ಮಾತುಗಳು.
ಜೆಪಿ ಭವನದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ಪಡೆದ ಅವರು, ನಾಲ್ಕು ದಶಕಗಳ ಕಾಂಗ್ರೆಸ್ ನಂಟು ಕಳಚಿ ಸಮಗ್ರ ಕರ್ನಾಟಕದ ಅಭಿವೃದ್ಧಿ ದೃಷ್ಟಿಕೋನ ಹೊಂದಿರುವ ಪಕ್ಷಕ್ಕೆ ಸೇರುತ್ತಿದ್ದೇನೆ. ನನ್ನ ಅಜೆಂಡಾ ಬದಲಾಗಿಲ್ಲ, ಜಂಡಾ ಮಾತ್ರ ಬದಲಾಗಿದೆ ಎಂದು ಹೇಳಿದರು.
ಗೌರವ ಕೊಡ್ತೇವೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ವಿಶ್ವನಾಥ್ ಪಕ್ಷಕ್ಕೆ ಬಂದಿರುವುದು ಉತ್ತಮ ಬೆಳವಣಿಗೆ. ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲ ಮುಖಂಡರ ಜತೆಗೂಡಿ ಕೆಲಸ ಮಾಡಲಿ. ಜೆಡಿಎಸ್ಗೆ ರಾಜ್ಯದಲ್ಲಿ ಭವಿಷ್ಯವಿದೆ ಎಂದರು. ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ತತ್ವ – ಸಿದ್ಧಾಂತದ ರಾಜಕಾರಣ ಮಾಡುವ ಎಚ್. ವಿಶ್ವನಾಥ್ ಅವರು ಜೆಡಿಎಸ್ ಸೇರಿರು ವುದಕ್ಕೆ ಸ್ವಾಗತ. ಜೆಡಿಎಸ್ ಪಕ್ಷ ಅವರನ್ನು ಗೌರವಿಸುತ್ತದೆ. ಪಕ್ಷಕ್ಕೆ ಬಂದವರು ಪಶ್ಚಾತ್ತಾಪ ಪಡದ ರೀತಿಯಲ್ಲಿ ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…