ನನ್ನ ಜಿಲ್ಲೆಗೂ ಒಲಿಂಪಿಕ್ ಕೀರ್ತಿ: ಸಭಾಧ್ಯಕ್ಷ ಕಾಗೇರಿ
Team Udayavani, Aug 8, 2021, 7:00 PM IST
ಬೆಂಗಳೂರು: ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಪಡೆದ ನೀರಜ್ ಚೋಪ್ರಾ ಅವರ ತರಬೇತುದಾರ ಕರ್ನಾಟಕದ ಕಾಶಿನಾಥ್ ನಾಯಕ್ ಅವರಿಗೆ 10 ಲಕ್ಷ ರೂಪಾಯಿಗಳ ನಗದು ಬಹುಮಾನ ಘೋಷಿಸಿರುವ ಸರ್ಕಾರದ ನಿರ್ಧಾರಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮೆಚ್ಚುಗೆ ಸೂಚಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟನೆ ಹೊರಡಿಸಿರುವ ಕಾಗೇರಿ ಅವರು, ಸ್ವರ್ಣ ಇತಿಹಾಸ ಬರೆದ ಕ್ರೀಡಾಪಟುವಿನ ತರಬೇತುದಾರರಿಗೆ ನಗದು ಬಹುಮಾನ ಘೋಷಿಸುವುದು “ಉದಾತ್ತ, ಪ್ರೋತ್ಸಾಹದಾಯಕ ಮತ್ತು ಪ್ರೇರಣಾತ್ಮಕವಾಗಿದೆ. ಇದು ಸರ್ಕಾರದ ಕಡೆಯಿಂದ ಉತ್ತೇಜನವಾಗಿದೆ. ತರಬೇತುದಾರರ ಸೇವೆಗಳನ್ನು ಗುರುತಿಸುವ ಈ ಕ್ರಮವು ತರಬೇತುದಾರರುಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಮತ್ತು ಅವರ ಸಂಪೂರ್ಣ ಸಾಮರ್ಥ್ಯವನ್ನು ಧಾರೆ ಎರೆಯಲು ಅವರನ್ನು ಪ್ರೇರೇಪಿಸುವಲ್ಲಿ ಬಹು ದೂರ ಸಾಗುತ್ತದೆ ಎಂದು ತಿಳಿಸಿದ್ದಾರೆ.
ಕಾಶಿನಾಥ್ ಅವರು ತಮ್ಮ ತವರು ಶಿರಸಿಯವರು ಎಂಬುದನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಹೆಮ್ಮೆಯಿಂದ ಸ್ಮರಿಸಿದ್ದಾರೆ. “ಒಲಿಂಪಿಕ್ ನಲ್ಲಿ ಚಿನ್ನದ ಪದಕ ವಿಜೇತ ಚೋಪ್ರಾಗೆ ನನ್ನ ಊರಿನವರು ತರಬೇತುದಾರರಾಗಿದ್ದಾರೆ ಎಂಬ ಹೆಮ್ಮೆ ನನಗಿದೆ. ನಾನು ಕೂಡ ಕರ್ನಾಟಕ ರಾಜ್ಯದ ಸಮಸ್ತ ಜನತೆಯ, ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ ಲಕ್ಷಾಂತರ ಜನರ ಜೊತೆಗೆ ಅತ್ಯಂತ ಆನಂದ ಅನುಭವಿಸಿದ್ದೇನೆ ಎಂದು ಕಾಗೇರಿ ತಿಳಿಸಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ ನಲ್ಲಿ ಪದಕ ವಿಜೇತರೆಲ್ಲರಿಗೂ ಗೌರವಿಸುವ ರಾಜ್ಯ ಸರ್ಕಾರದ ಔದಾರ್ಯವನ್ನು ಕಾಗೇರಿ ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ