ಜ್ಯೋತಿಷಿ ದ್ವಾರಕನಾಥ್ ಮನೆಗೆ ಸಿಎಂ ಭೇಟಿ
Team Udayavani, Mar 13, 2019, 6:46 AM IST
ಬೆಂಗಳೂರು: ಖ್ಯಾತ ಜ್ಯೋತಿಷಿ ದ್ವಾರಕಾನಾಥ್ ಮನೆಗೆ ಮಂಗಳವಾರ ಸಂಜೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಪುತ್ರ ನಿಖೀಲ್ ಕುಮಾರಸ್ವಾಮಿ ಭೇಟಿ ನೀಡಿ ಲೋಕಾ ಚುನಾವಣೆ ಕುರಿತು ಚರ್ಚೆ ನಡೆಸಿದ್ದು, ಅವರನ್ನು ಜ್ಯೋತಿಷಿ ದ್ವಾರಕಾನಾಥ್ ಮಂಗಳವಾದ್ಯಗಳೊಂದಿಗೆ ಬೀಳ್ಕೊಟ್ಟರು.
ಬಳಿಕ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಎಂದಿನಂತೆ ನಮ್ಮ ಮನೆಗೆ ಬಂದಿದ್ದಾರೆ ಇದೇನು ಹೊಸದಲ್ಲ. ಕುಮಾರಸ್ವಾಮಿ ಸಿಎಂ ಆಗುತ್ತಾರೆ ಎಂದು 2017 ರಲ್ಲೇ ಹೇಳಿದ್ದೆ. ಅವರು ನಂತರ ಬಂದು ಭೇಟಿ ಮಾಡುವುದಾಗಿ ಹೇಳಿದ್ದರು. ಜತೆಗೆ ನಿಖೀಲ್ ಕೂಡ ಬರುವುದಾಗಿ ಹೇಳಿದ್ದರು. ಬನ್ನಿ ಎಂದು ತಿಳಿಸಿದ್ದೆ. ನನಗೆ ಎಲ್ಲ ರಾಜಕಾರಣಿಗಳೂ ಒಂದೆ ಎಂದರು.
ಕುಮಾರಸ್ವಾಮಿ ಹಿಂದಿನವಾರವೇ ಬರಬೇಕಿತ್ತು. ಕಾರಣಾಂತರದಿಂದ ಬಂದಿರಲಿಲ್ಲ. ನಮ್ಮ ಮನೆಯಲ್ಲಿ ಏನೂ ಪೂಜೆ ಮಾಡಿಲ್ಲ, ದತ್ತ ದೇವರ ಸ್ಮರಣೆ, ಸುಬ್ರಹ್ಮಣ್ಯ ಸ್ವಾಮಿ ಜಪವೇ ನಮ್ಮ ಪೂಜೆ ಎಂದು ತಿಳಿಸಿದರು.
ಮತ್ತೆ ಮೋದಿ ಪ್ರಧಾನಿ: ಈಗ ನಮ್ಮ ದೇಶದಲ್ಲಿ ಮೋದಿ ಅವರನ್ನು ಸವಾಲಾಗಿ ಸ್ವೀಕರಿಸುವವರೂ ಯಾಯು ಇಲ್ಲ ಹೀಗಾಗಿ ಅವರು ಮತ್ತೆ ಪ್ರಧಾನಿಯಾಗಿ ಮತ್ತೆ ಹೊರ ಹೊಮ್ಮುತ್ತಾರೆ. ಸರ್ಕಾರ ರಚನೆ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಇನ್ನೂ ಸಮಯ ಬೇಕು ಎಂದು ದ್ವಾರಕಾನಾಥ ರಾಷ್ಟ್ರರಾಜಕಾರಣದ ಬಗ್ಗೆ ಭವಿಷ್ಯ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ