ಪತಿ ಸಾವು, ಪೆರೋಲ್ ಮೇಲೆ ಶಶಿಕಲಾ ಬಿಡುಗಡೆ
Team Udayavani, Mar 21, 2018, 6:20 AM IST
ಬೆಂಗಳೂರು: ಅನಾರೋಗ್ಯದಿಂದ ಮೃತಪಟ್ಟ ಎಂ. ನಟರಾಜನ್ ಅವರ ಧಾರ್ಮಿಕ ವಿಧಿ ವಿಧಾನ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಅವರ ಪತ್ನಿ ಶಶಿಕಲಾ ನಟರಾಜನ್ 15 ದಿನಗಳ ಪೆರೋಲ್ ಅನುಮತಿ ಮೇರೆಗೆ ಮಂಗಳವಾರ ಚೆನ್ನೈಗೆ ತೆರಳಿದರು.
ನಟರಾಜನ್ (74) ಅವರನ್ನು ಮಾ. 16ರಂದೇ ಹೃದಯ ಸಂಬಂಧಿ ಕಾಯಿಲೆ ಉಲ್ಬಣಿಸಿದ ಹಿನ್ನೆಲೆಯಲ್ಲಿ ಚೆನ್ನೈಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ತಡರಾತ್ರಿ 1.35ರ ವೇಳೆಗೆ ನಟರಾಜನ್ ನಿಧನಹೊಂದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ತತ್ಕ್ಷಣ ಶಶಿಕಲಾ ಅವರಿಗೂ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸಜಾ ಕೈದಿಯಾಗಿರುವ ಶಶಿಕಲಾ ಪತಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ, ಕೆಲಕಾಲ ದಿಗ್ಭ್ರಾಂತರಾಗಿದ್ದರು. ಬಹಳ ಹೊತ್ತು ಯಾರೊಂದಿಗೂ ಮಾತನಾಡಿಲ್ಲ.
ಈ ಅವಧಿಯಲ್ಲಿ ಯಾವುದೇ ರೀತಿಯ ರಾಜಕೀಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಾರದು. ಸಭೆಗಳನ್ನು ನಡೆಸಬಾರದು. ಪತಿಯ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸೇರಿ ಅಂತಿಮ ವಿಧಿ ವಿಧಾನ, ಇನ್ನಿತರ ಕಾರ್ಯಗಳನ್ನು ಮುಗಿಸಿಕೊಂಡು ವಾಪಸ್ ಆಗಬೇಕು ಎಂಬ ಷರತ್ತುಗಳನ್ನು ವಿಧಿಸಿ ಪೆರೋಲ್ ನೀಡಲಾಗಿದೆ. ಅಪರಾಹ್ನ 1.45ರ ಸುಮಾರಿಗೆ ಬೆಂಬಲಿಗರ ಜತೆ ಚೆನ್ನೈ ಕಡೆ ಪಯಣ ಬೆಳೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ