ಸಭಿಕರನ್ನು ರಂಜಿಸಿದ ವಚನ ಗಾಯನ
Team Udayavani, May 8, 2019, 3:05 AM IST
ಬೆಂಗಳೂರು: ಬಸವ ಜಯಂತಿ ಅಂಗವಾಗಿ ಕನ್ನಡ ಸಂಸ್ಕೃತಿ ಇಲಾಖೆ ಮಂಗಳವಾರ ನಗರದ ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಚನ ಸಂಗೀತ ಕಾರ್ಯಕ್ರಮ ನೆರೆದ ಸಭಿಕರನ್ನು ರಂಜಿಸಿತು. ಕಲಬುರಗಿ ಮೂಲದ ಗಾಯಕಿ ಮಾಲಾಶ್ರೀ ಕಣವಿ ಮತ್ತವರ ಸಂಗಡಿಗರು ಸುಮಾರು 1 ಗಂಟೆಗೂ ಹೆಚ್ಚು ಕಾಲ ಬಸವಣ್ಣನವರ ಕೆಲವು ವಚನಗಳನ್ನು ಹಾಡಿದರು.
ನಾನು ಬಂದ ಕಾರ್ಯಕ್ಕೆ ನಾವು ಬಂದೆರಯ್ನಾ!
ನಾವು, ನೀವು ಬಂದ ಕಾರ್ಯಕ್ಕೆ, ಪ್ರಭುದೇವ ಬಂದರಯ್ನಾ!.
ಎಂಬ ವಚನ ಗಾಯನ ನೆರೆದರ ಚಪ್ಪಾಳೆಗೆ ಪಾತ್ರವಾಯಿತು. ಈ ವೇಳೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಜಾನಕಿ, ಬಸಣ್ಣ ಅವರ ಸಾಧನೆ ಬಗ್ಗೆ ಬೆಳಕು ಚೆಲ್ಲಿದರು.
ಪುರುಷರಷ್ಟೇ ಮಹಿಳೆಯರಿಗೂ ಸಮಾನತೆ ದೊರೆಯಬೇಕು ಎಂದು ಹೇಳುತ್ತಿದ್ದ ಬಸವಣ್ಣನ ಅವರು ತಮ್ಮ ವಚನ ಸಾಹಿತ್ಯದ ಮೂಲಕ ಇಂದಿಗೂ ಪ್ರಸ್ತುತರಾಗಿ ನಿಲ್ಲುತ್ತಾರೆ. ಹೀಗಾಗಿಯೆ ಬಸಣ್ಣ ಜಗತ್ತು ಕಂಡು ಶೇಷ್ಠ ಸಮಾಜ ವಿಜ್ಞಾನಿ ಎನಿಸಿಕೊಂಡಿದ್ದಾರೆ.
ಅವರು ಹಾಕಿಕೊಟ್ಟ ಹಾದಿಯಲ್ಲೇ ನಾವೆಲ್ಲಾ ಸಾಗೋಣ ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕಿ ಬನಶಂಕರಿ ಅಂಗಡಿ, ರಿಜಿಸ್ಟ್ರಾರ್ ಸಿದ್ರಾಮ ಸಿಂಧೆ, ಕರಿಯಪ್ಪ, ಹಿರಿಯ ರಂಗಭೂಮಿ ಕಲಾವಿದ ಕೆ.ವಿ.ನಾಗರಾಜು ಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!